ರಾಹುಲ್ ಸಮ್ಮುಖದಲ್ಲಿ ಹಾರ್ದಿಕ್ ಪಟೇಲ್ ಇಂದು ಕಾಂಗ್ರೆಸ್ ಗೆ
Team Udayavani, Mar 12, 2019, 4:54 AM IST
ಗಾಂಧಿನಗರ: ಗುಜರಾತ್ ನ ಪಾಟೇದಾರ್ ಮೀಸಲು ಹೋರಾಟದ ನಾಯಕ ಹಾರ್ದಿಕ್ ಪಟೇಲ್ ಮಂಗಳವಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ.
ಹಾರ್ದಿಕ್ ಪಟೇಲ್ ರವಿವಾರ ತಾನು ಕಾಂಗ್ರೆಸ್ ಸೇರ್ಪಡೆಯಾಗುವುದನ್ನು ಖಚಿತ ಪಡಿಸಿದ್ದರು. ಮುಂಬರುವ ಲೋಕಸಭೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.
ದೇಶದ ಸೇವೆ ಮಾಡುವ ಹಂಬಲದಿಂದ ನಾನು ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ರಾಹುಲ್ ಗಾಂಧಿ ಮತ್ತು ಇತರ ಹಿರಿಯ ನಾಯಕರ ಸಮ್ಮುಖದಲ್ಲಿ ಸೇರ್ಪಡೆಯಾಗುತ್ತೇನೆ ಎಂದು ಹಾರ್ದಿಕ್ ಪಟೇಲ್ ರವಿವಾರ ಟ್ವೀಟ್ ಮಾಡಿದ್ದರು.
ಯಾವುದೇ ಕಾನೂನಾತ್ಮಕ ತೊಂದರೆ ಆಗದಿದ್ದರೆ ಮತ್ತು ಪಕ್ಷ ಬಯಸಿದರೆ ನಾನು ಚುಣಾವಣೆಗೆ ಸ್ಪರ್ಧಿಸ ಬಯಸುತ್ತೇನೆ. ಭಾರತದ 125 ಕೋಟಿ ಭಾರತೀಯರ ಸೇವೆ ಮಾಡಲು ಬಯಸುತ್ತೇನೆ ಎಂದು ತನ್ನ ರಾಜಕೀಯ ಪ್ರವೇಶದ ಬಗ್ಗೆ ಹೇಳಿದ್ದರು.
2015ರಲ್ಲಿ ಗುಜರಾತ್ ನಲ್ಲಿ ನಡೆದ ಮೀಸಲಾತಿ ಹೋರಾಟದಲ್ಲಿ ಗಲಭೆ ನಡೆಸಿದ ಆರೋಪದಡಿ ಹಾರ್ದಿಕ್ ಪಟೇಲ್ ಗೆ ಸ್ಥಳೀಯ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ನೀಡಿತ್ತು. ಪಟೇಲ್ ಜೈಲು ಅವಧಿಯ ಬಗ್ಗೆ ಹೈ ಕೋರ್ಟ್ ತಡೆಯಾಜ್ಞೆ ನೀಡಿದರೂ, ದೋಷಾರೋಪವನ್ನು ಅಮಾನತು ಗೊಳಿಸಿಲ್ಲ. ಇದರಿಂದಾಗಿ ಹಾರ್ದಿಕ್ ಪಟೇಲ್ ಚುಣಾವಣೆ ಸ್ಪರ್ಧೆಗೆ ತಡೆಯಾಗುವ ಸಾಧ್ಯತೆ ಇದೆ.
To give shape to my intentions to serve society & country, I have decided to join Indian National Congress on 12th March in presence of Shri Rahul Gandhi & other senior leaders.
— Hardik Patel (@HardikPatel_) March 10, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್