
50 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದ ಹಾರ್ದಿಕ್ ಪಟೇಲ್
Team Udayavani, Dec 8, 2022, 4:52 PM IST

ಹೊಸದಿಲ್ಲಿ: ಗುಜರಾತ್ ಚುನಾವಣೆಯಲ್ಲಿ ಅತ್ಯಂತ ಕುತೂಹಲಕ್ಕೆ ಕಾರಣವಾಗಿದ್ದ ಅಭ್ಯರ್ಥಿಗಳಲ್ಲಿ ಒಬ್ಬರಾದ ಬಿಜೆಪಿ ನಾಯಕ ಹಾರ್ದಿಕ್ ಪಟೇಲ್ ಅವರು ಭರ್ಜರಿ ಜಯ ಸಾಧಿಸಿದ್ದಾರೆ. ವಿರಾಮಗಂ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಅವರು, ಕಾಂಗ್ರೆಸ್ ನ ಲಖಾಭಾಯಿ ಭಾರವಾಡ್ ವಿರುದ್ಧ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದ ಗೆಲುವು ಸಾಧಿಸಿದ್ದಾರೆ.
2015 ರಲ್ಲಿ ಪಾಟಿದಾರ್ ಆಂದೋಲನದಲ್ಲಿ ಹಾರ್ದಿಕ್ ಪಟೇಲ್ ಮುನ್ನೆಲೆಗೆ ಬಂದರು. ಅವರು ಚಳವಳಿಯ ಭಾಗವಾಗಿ ಪಾಟಿದಾರ್ ಅನಾಮತ್ ಆಂದೋಲನ ಸಮಿತಿ (PAAS) ನೇತೃತ್ವ ವಹಿಸಿದ್ದರು. ಗುಜರಾತ್ ನ ಸಮುದಾಯ ಸಾಮಾಜಿಕ ಗುಂಪು ಸರ್ದಾರ್ ಪಟೇಲ್ ಗ್ರೂಪ್ (SPG) ನ ಸದಸ್ಯರೂ ಆಗಿದ್ದರು.
ಇದನ್ನೂ ಓದಿ:ರಾಜ್ಯ ಬಿಜೆಪಿ ಹಿರಿಯ ನಾಯಕರಿಗೆ ನಿವೃತ್ತಿ ಭಾಗ್ಯವೇ? ಗುಜರಾತ್ ಫಲಿತಾಂಶ ಹುಟ್ಟು ಹಾಕಿದೆ ಬಹುದೊಡ್ಡ ಚರ್ಚೆ
ಹಾರ್ದಿಕ್ ಪಟೇಲ್ ಮೊದಲು ಕಾಂಗ್ರೆಸ್ ಸೇರಿದ್ದರು. ಆದರೆ ಪಕ್ಷದ ನಾಯಕತ್ವದೊಂದಿಗಿನ ಭಿನ್ನಾಭಿಪ್ರಾಯಗಳ ಬಳಿಕ ಅವರು ಬಿಜೆಪಿಗೆ ಸೇರಿದ್ದರು. ಬಿಜೆಪಿಯ ಕಡು ವಿರೋಧಿಯಾಗಿದ್ದ ಹಾರ್ದಿಕ್ ಪಟೇಲ್ ಅವರು ಕಮಲ ಪಾಳಯ ಸೇರಿದ್ದು ಹಲವರು ಹುಬ್ಬೇರಿಸುವಂತೆ ಮಾಡಿತ್ತು.
ಅಹಮದಾಬಾದ್ ನ ವಿರಾಮಗಂ ಮಂಡಲ್ ಮತ್ತು ಡೆಟ್ರೋಜ್ ತಾಲೂಕುಗಳನ್ನು ಒಳಗೊಂಡಿರುವ ವಿರಾಮಗಂ ಕ್ಷೇತ್ರವು 2012 ರಿಂದ ಕಾಂಗ್ರೆಸ್ ಪಕ್ಷದಲ್ಲಿದೆ. ಕೊನೆಯ ಬಾರಿಗೆ 2007 ರ ಚುನಾವಣೆಯಲ್ಲಿ ಬಿಜೆಪಿ ವಿರಾಮಗಂ ಕ್ಷೇತ್ರವನ್ನು ಗೆದ್ದುಕೊಂಡಿತ್ತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ಬಜೆಟ್ ಕರ್ನಾಟಕದ ಪಾಲಿಗೆ ಗೇಮ್ ಚೇಂಜರ್ : ತೇಜಸ್ವಿ ಸೂರ್ಯ

ಕೇಂದ್ರ ಬಜೆಟ್ 2023:ಸಿಹಿ ಸುದ್ದಿ-ಪ್ರಧಾನ್ ಮಂತ್ರಿ ಆವಾಸ್ ಯೋಜನೆಗೆ 79ಸಾವಿರ ಕೋಟಿ ಅನುದಾನ

ಅಮೃತ್ ಕಾಲದ ಮೊದಲ ಬಜೆಟ್ ಸಮಾಜದ ಕನಸುಗಳನ್ನು ಈಡೇರಿಸಲಿದೆ: ಪ್ರಧಾನಿ ಮೋದಿ

5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿ ತಲುಪಲು ಈ ಬಜೆಟ್ ಸಹಕಾರಿ: ರಾಜನಾಥ್ ಸಿಂಗ್

Union Budget 2023: ಪೊಲ್ಯೂಟಿಂಗ್ ಪದದ ಬದಲು ಓಲ್ಡ್ ಪಾಲಿಟಿಕಲ್ ಎಂದ ಸಚಿವೆ ನಿರ್ಮಲಾ: ಸದನದಲ್ಲಿ ನಗೆಯ ಅಲೆ!
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ರಾಜ್ಯ, ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಬಜೆಟ್: ನಳಿನ್ ಕುಮಾರ್ ಕಟೀಲ್

ಪ್ರೆಸ್ ಮೀಟ್ ನಲ್ಲಿ ಚಿತ್ರ ನಿರ್ದೇಶಕರ ಮೈಮೇಲೆ ಅಗೋಚರ ಶಕ್ತಿ!

ಆಸೀಸ್ ವಿರುದ್ಧದ ಮೊದಲ ಟೆಸ್ಟ್ ನಿಂದ ಹೊರಬಿದ್ದ ಸ್ಟಾರ್ ಬ್ಯಾಟರ್: ಸೂರ್ಯಗೆ ಅವಕಾಶ ಸಾಧ್ಯತೆ

ಪುತ್ತೂರು: ಸ್ಕೂಟರ್-ಮಾರುತಿ ವ್ಯಾನ್ ಡಿಕ್ಕಿ; ಸವಾರ ಗಂಭೀರ ಗಾಯ

ಈ ಬಜೆಟ್ ಕರ್ನಾಟಕದ ಪಾಲಿಗೆ ಗೇಮ್ ಚೇಂಜರ್ : ತೇಜಸ್ವಿ ಸೂರ್ಯ