ಹಾರ್ದಿಕ್ ಪಟೇಲ್ ಕಾರು ಬೈಕಿಗೆ ಢಿಕ್ಕಿ, ಪೊಲೀಸರ ಜತೆಗೆ ವಾಗ್ವಾದ
Team Udayavani, Mar 8, 2019, 5:35 AM IST
ರಾಜ್ಕೋಟ್: ಪಾಟಿದಾರ್ ಮೀಸಲಾತಿ ಆಂದೋಲನದ ನಾಯಕ ಹಾರ್ದಿಕ್ ಪಟೇಲ್ ಅವರ ಫಾರ್ಚೂನರ್ ಎಸ್ಯುವಿ ವಾಹನ ರಾಜ್ಕೋಟ್ – ಛೋಟಿಲಾ ಹೆದ್ದಾರಿಯಲ್ಲಿ ಬೈಕಿಗೆ ಢಿಕ್ಕಿ ಹೊಡೆದ ಘಟನೆ ವರದಿಯಾಗಿದೆ.
ಈ ರಸ್ತೆ ಅಪಘಾತದಲ್ಲಿ ಬೈಕ್ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಪಟೇಲ್ ಅವರು ನಿಕಟವರ್ತಿಗಳೊಂದಿಗೆ ತಮ್ಮ ಫಾರ್ಚೂನರ್ ಎಸ್ಯುವಿ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅವಘಡ ನಡೆದಿದ್ದು ಅವರ ವಾಹನದ ಮುಂಭಾಗಕ್ಕೆ ಹಾನಿಯುಂಟಾಗಿದೆ.
ರಸ್ತೆ ಅಪಘಾತದ ಬಳಿಕ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದ ರಾಜಕೋಟ್ ಪೊಲೀಸರೊಂದಿಗೆ ಹಾರ್ದಿಕ್ ಪಟೇಲ್ ಮತ್ತು ಸಹವರ್ತಿಗಳು ವಾಗ್ವಾದಕ್ಕೆ ಇಳಿದಿರುವುದು ವರದಿಯಾಗದೆ.
ಘಟನೆಯ ಬಳಿಕ ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್ ಬೇರೊಂದು ಕಾರಿನಲ್ಲಿ ಅಹ್ಮದಾಬಾದಿಗೆ ತಮ್ಮ ಪ್ರಯಾಣವನ್ನು ಮುಂದುವರಿಸಿದರು. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ.
ಪಟೇಲ್ ಅವರು ನಿನ್ನೆ ಗುರುವಾರವಷ್ಟೇ ತಾನು ಇದೇ ಮಾರ್ಚ್ 12ರಂದು ಕಾಂಗ್ರೆಸ್ ಪಕ್ಷವನ್ನು ಸೇರುವುದಾಗಿ ಪ್ರಕಟಿಸಿದ್ದರು. ಕಾಂಗ್ರೆಸ್ ಟಿಕೆಟ್ನಲ್ಲಿ ತಾನು ಗುಜರಾತಿನ ಜಾಮ್ನಗರ್ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸುವುದಾಗಿ ಅವರು ಹೇಳಿದ್ದರು.
ಜಾಮ್ನಗರ್ ಕ್ಷೇತ್ರವನ್ನು ಪ್ರಕೃತ ಬಿಜೆಪಿಯ ಪೂನಮ್ಬೆನ್ ಮಾದಾಮ್ ಅವರು ಪ್ರತಿನಿಧಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು