WHO ಕಾರ್ಯಕಾರಿ ಮಂಡಳಿ ಅಧ್ಯಕ್ಷರಾಗಿ ಕೇಂದ್ರ ಸಚಿವ ಡಾ. ಹರ್ಷ್ ವರ್ಧನ್: ವರದಿ
Team Udayavani, May 20, 2020, 9:00 AM IST
ನವದೆಹಲಿ: ಕೇಂದ್ರ ಆರೋಗ್ಯ ಖಾತೆ ಸಚಿವ ಡಾ. ಹರ್ಷ್ ವರ್ಧನ್ ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಕಾರಿ ಮಂಡಳಿಯ ಅಧ್ಯಕ್ಷರಾಗಿ ಇದೇ 22ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಜಪಾನ್ನ ಡಾ. ಹಿರೋಕಿ ನಕಾಟಾನಿ ಅವರ ಸ್ಥಾನವನ್ನು ಹರ್ಷ್ ವರ್ಧನ್ ತುಂಬಲಿದ್ದಾರೆ ಎಂದು ಹಿಂದೂ ಸ್ಥಾನ್ ಟೈಮ್ಸ್ ವರದಿ ಮಾಡಿದೆ.
ಮೇ 22 ರಂದು ನಡೆಯಲಿರುವ ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯನಿರ್ವಾಹಕ ಮಂಡಳಿಯ ಸಭೆಯಲ್ಲಿ ಆರೋಗ್ಯ ಖಾತೆ ಸಚಿವ ಡಾ. ಹರ್ಷ್ ವರ್ಧನ್ ಅವರನ್ನು ಆಯ್ಕೆ ಮಾಡಲಾಗುತ್ತದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಚುನಾವಣೆಯು ಕಾರ್ಯವಿಧಾನದ ಔಪಾಚಾರಿಕತೆಯಿಂದ ಕೂಡಿರುತ್ತದೆ ಎಂದು ತಿಳಿದು ಬಂದಿದೆ.
“ಇದು ಪೂರ್ಣ ಸಮಯದ ಹುದ್ದೆ ಅಲ್ಲ. ಆದರೆ ಕಾರ್ಯನಿರ್ವಾಹಕ ಮಂಡಳಿಯ ದ್ವಿ-ವಾರ್ಷಿಕ ಸಭೆಗಳ ಅಧ್ಯಕ್ಷತೆಯನ್ನು ವಹಿಸಲು ಡಾ. ಹರ್ಷ್ ವರ್ಧನ್ ಅವರ ಅಗತ್ಯವಿದೆ” ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಕಾರಿ ಮಂಡಳಿಯಲ್ಲಿ 34 ಮಂದಿ ಸದಸ್ಯರಿದ್ದಾರೆ. ಭಾರತದ ಪ್ರತಿನಿಧಿಯನ್ನು ಕಾರ್ಯಕಾರಿ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಬೇಕೆಂಬ ಪ್ರಸ್ತಾವನೆಗೆ 194 ದೇಶಗಳನ್ನೊಳಗೊಂಡ ವಿಶ್ವ ಆರೋಗ್ಯ ಸಭೆಯಲ್ಲಿ ಸಹಿ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ಸಾಮಾನ್ಯವಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ಈ ಸ್ಥಾನಕ್ಕೆ ನಾಮನಿರ್ದೇಶನ ಮಾಡಲಾಗುತ್ತದೆ. ಆದರೆ, ಕೇಂದ್ರ ಸರ್ಕಾರವು ತನ್ನ ಸಚಿವರನ್ನೇ ಆ ಸ್ಥಾನಕ್ಕೆ ಕೂರಿಸಲು ನಿರ್ಧರಿಸಿದೆ.
ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಕಾರಿ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಭಾರತ ಸೇರಿದಂತೆ ಮೂರು ಆಗ್ನೇಯ ಏಷ್ಯಾ ರಾಷ್ಟ್ರಗಳಿಗೆ ನೀಡಲು ಕಳೆದ ವರ್ಷವೇ ನಿರ್ಧರಿಸಲಾಗಿತ್ತು. ಕೇಂದ್ರ ಸಚಿವರಾಗಿರುವ ಹರ್ಷ್ ವರ್ಧನ್ ಅವರು ಡಬ್ಲ್ಯೂಎಚ್ಒದಲ್ಲಿ ಪೂರ್ಣಾವಧಿ ಕರ್ತವ್ಯ ನಿಭಾಯಿಸುವ ಅಗತ್ಯ ಇರುವುದಿಲ್ಲ. ವರ್ಷಕ್ಕೆ ಎರಡು ಬಾರಿ ನಡೆಯುವ ಸಭೆಗಳ ನೇತೃತ್ವ ವಹಿಸುವುದು ಪ್ರಮುಖ ಕರ್ತವ್ಯವಾಗಿರುತ್ತದೆ.
ಮಾಜಿ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರು 2016 ರಲ್ಲಿ ಡಬ್ಲ್ಯುಎಚ್ಎಯ ಇದೇ ರೀತಿಯ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ