NDA ವಿರುದ್ಧ ಅಕಾಲಿದಳ ಮುನಿಸಿಗೆ ಕಾರಣವೇನು?; ಮೋದಿ ಸಂಪುಟದ ಸಚಿವೆ ಕೌರ್ ರಾಜೀನಾಮೆ
2ನೇ ಬಾರಿಗೆ ಅಧಿಕಾರ ವಹಿಸಿಕೊಂಡ ಬಳಿಕ ಮೋದಿ ನೇತೃತ್ವದ ಸರಕಾರದಿಂದ ರಾಜೀನಾಮೆ ನೀಡುತ್ತಿರುವ ಮೊದಲ ಸಚಿವೆ
Team Udayavani, Sep 18, 2020, 10:56 AM IST
ಹೊಸದಿಲ್ಲಿ: ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರಕಾರದಿಂದ ಆಹಾರ ಸಂಸ್ಕರಣ ಖಾತೆ ಸಚಿವೆ, ಶಿರೋಮಣಿ ಅಕಾಲಿ ದಳದ ನಾಯಕಿ ಹರ್ಸಿಮ್ರತ್ ಕೌರ್ ಬಾದಲ್ ರಾಜೀನಾಮೆ ನೀಡಿದ್ದಾರೆ. ಕೌರ್ ರಾಜೀನಾಮೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ (ಸೆಪ್ಟೆಂಬರ್ 18, 2020) ಸ್ವೀಕರಿಸಿರುವುದಾಗಿ ವರದಿ ತಿಳಿಸಿದೆ.
ಹರ್ ಸಿಮ್ರತ್ ಕೌರ್ ರಾಜೀನಾಮೆಯಿಂದ ಸ್ಥಾನ ತೆರವಾದ ನಿಟ್ಟಿನಲ್ಲಿ ಆಹಾರ ಸಂಸ್ಕರಣ ಖಾತೆಯ ಹೆಚ್ಚುವರಿ ಹೊಣೆಯನ್ನು ನರೇಂದ್ರ ಸಿಂಗ್ ತೋಮರ್ ವಹಿಸಿಕೊಳ್ಳಬೇಕೆಂದು ರಾಷ್ಟ್ರಪತಿ ನಿರ್ದೇಶನ ನೀಡಿದ್ದಾರೆ.
ಇದನ್ನೂ ಓದಿ: ಉದಯವಾಣಿ ಅಭಿಯಾನದ ಫಲಶ್ರುತಿ; ಕರಾವಳಿಗರಿಗೆ ಸಂದ ಜಯ; ಪಿಸಿಐಟಿ ಕಚೇರಿ ಎತ್ತಂಗಡಿ ಇಲ್ಲ
ಎನ್ ಡಿಎ ಬಹುಕಾಲದ ಮೈತ್ರಿಪಕ್ಷ ಅಕಾಲಿದಳ ಮುನಿಸು:
ಈ ಬಗ್ಗೆ ಲೋಕಸಭೆಯಲ್ಲಿ ಪಕ್ಷದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಮಾಹಿತಿ ನೀಡಿದ್ದಾರೆ. ಕೃಷಿ ಸೇವೆಗಳು ಮತ್ತು ರೈತರ ಬೆಳೆಗಳಿಗೆ ಸೂಕ್ತ ಬೆಲೆ ನೀಡುವ (ಅಭಿವೃದ್ಧಿ ಮತ್ತು ರಕ್ಷಣೆ) ಮಸೂದೆ ಮತ್ತು ರೈತರು ಉತ್ಪಾದಿಸಿದ ವಸ್ತುಗಳು ಮತ್ತು ಮಾರಾಟ (ಉತ್ತೇಜನ, ಅನುಕೂಲ) ಮಸೂದೆಗಳ ವಿರುದ್ಧ ಈಗಾಗಲೇ ಅಭಿಪ್ರಾಯಗಳು ರೂಪುಗೊಂಡಿರುವ ಹಿನ್ನೆಲೆ ಯಲ್ಲಿ ಕೌರ್ ರಾಜೀನಾಮೆ ಮಹತ್ವ ಪಡೆದಿದೆ.
ರೈತರು ಉತ್ಪಾದಿಸಿದ ವಸ್ತುಗಳ ಮತ್ತು ಮಾರಾಟ ಮಸೂದೆಗೆ ತೀವ್ರ ವಿರೋಧ ಇರುವುದಾಗಿ ಅಕಾಲಿದಳ ತಿಳಿಸಿದೆ. ಅಲ್ಲದೇ ಸರ್ಕಾರಕ್ಕೆ ಬಾಹ್ಯ ಬೆಂಬಲ ಕೊಡುವುದಾಗಿ ಹೇಳಿದೆ.
2019ರಲ್ಲಿ 2ನೇ ಬಾರಿಗೆ ಅಧಿಕಾರ ವಹಿಸಿಕೊಂಡ ಬಳಿಕ ಮೋದಿ ನೇತೃತ್ವದ ಸರಕಾರದಿಂದ ರಾಜೀನಾಮೆ ನೀಡುತ್ತಿರುವ ಮೊದಲ ಸಚಿವೆ ಕೌರ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ