ಶಬರಿಮಲೆಗೆ ಸ್ತ್ರೀ ಪ್ರವೇಶದ ಬಳಿಕ ಹಿಂಸಾಚಾರ; 1 ಬಲಿ, ಹರತಾಳ
Team Udayavani, Jan 3, 2019, 4:18 AM IST
ತಿರುವನಂತಪುರ: ಶಬರಿಮಲೆಯ ಅಯ್ಯಪ್ಪ ದೇಗುಲಕ್ಕೆ ಬುಧವಾರ ಬೆಳಗಿನ ಜಾವ ಇಬ್ಬರು ಮಹಿಳೆಯರು ಪ್ರವೇಶ ಮಾಡಿದ ಬಳಿಕ ಕೇರಳದೆಲ್ಲೆಡೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ವ್ಯಾಪಕ ಹಿಂಸಾಚಾರ ನಡೆದಿದ್ದು ಈಗಾಗಲೇ ಒಂದು ಬಲಿ ಪಡೆದಿದೆ.
ಪಂದಾಲಂನಲ್ಲಿ ಸಿಪಿಐಎಂ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆ ವೇಳೆ ಕಲ್ಲು ತೂರಾಟದಲ್ಲಿ ಗಾಯಗೊಂಡಿದ್ದ 55 ವರ್ಷದ ಶಬರಿ ಮಲೆ ಕರ್ಮ ಸಮಿತಿಯ ಸದಸ್ಯರೊಬ್ಬರು ಆಸ್ಪತ್ರೆಯಲ್ಲಿ ಗುರುವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ.
ಹಿಂಸಾಚಾರದ ಹಿನ್ನಲೆಯಲ್ಲಿ ಕರ್ನಾಟಕದಿಂದ ಕೇರಳಕ್ಕೆ ಸಂಚರಿಸಬೇಕಾಗಿದ್ದ ಎಲ್ಲಾ ಸರಕಾರಿ ಬಸ್ಗಳನ್ನು ಸ್ಥಗಿತಗೊಳಿಸಲಾಗಿದೆ.
ವಿವಿಧ ಕೇರಳ ವಿಶ್ವವಿದ್ಯಾಲಯಗಳು ಗುರುವಾರ ನಡೆಯಬೇಕಾಗಿದ್ದ ಪರೀಕ್ಷೆಗಳನ್ನು ಮುಂದೂಡಿವೆ.
ಶಬರಿ ಮಲೆ ಕರ್ಮ ಸಮಿತಿ ಕರೆ ನೀಡಿರುವ ರಾಜ್ಯ ಬಂದ್ಗೆ ಬಿಜೆಪಿ ಸಂಪೂರ್ಣ ಬೆಂಬಲ ಸೂಚಸಿದ್ದು,ಕಾಂಗ್ರೆಸ್ ನೇತೃತ್ವದ ಯುಡಿಎಫ್ ಕರಾಳ ದಿನವನ್ನು ಆಚರಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!