ಹರಿಯಾಣ; ಸಮೀಕ್ಷೆ ಲೆಕ್ಕಾಚಾರ ತಪ್ಪಾಗಿದ್ದು ಹೇಗೆ? ಮಹಾರಾಷ್ಟ್ರದಲ್ಲೂ BJPಗೆ 22 ಸ್ಥಾನ ನಷ್ಟ
Team Udayavani, Oct 24, 2019, 4:32 PM IST
ಹರಿಯಾಣ:ಹರಿಯಾಣ ವಿಧಾನಸಭಾ ಮತಎಣಿಕೆಯ ಅಂತಿಮ ಘಟ್ಟ ತಲುಪುತ್ತಿದ್ದಂತೆಯೇ ಫಲಿತಾಂಶ ಎಲ್ಲರಿಗೂ ಅಚ್ಚರಿ ತಂದಿದೆ. 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹತ್ತೂ ಲೋಕಸಭಾ ಕ್ಷೇತ್ರದಲ್ಲಿ ಜಯಗಳಿಸಿತ್ತು. ಅಲ್ಲದೇ ಇಂಡಿಯಾ ಟುಡೇ, ಆ್ಯಕ್ಸಿಸ್ ಹೊರತು ಪಡಿಸಿ ಇತರ ಎಲ್ಲಾ ಚುನಾವಣೋತ್ತರ, ಮತದಾನೋತ್ತರ ಸಮೀಕ್ಷೆಗಳೆಲ್ಲ 90 ಸದಸ್ಯಬಲದ ಹರಿಯಾಣದಲ್ಲಿ ಬಿಜೆಪಿ 70 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದ್ದವು.
ಆದರೆ ಇದೀಗ ಹರಿಯಾಣ ಅತಂತ್ರ ವಿಧಾನಸಭೆಯಾಗಿದೆ. ಬಿಜೆಪಿ 38 ಸ್ಥಾನಗಳಲ್ಲಿ, ಕಾಂಗ್ರೆಸ್ 33 ಹಾಗೂ ಜೆಜೆಪಿ 12 ಸ್ಥಾನಗಳಲ್ಲಿ ಜಯ ಸಾಧಿಸುವತ್ತ ಹೆಜ್ಜೆ ಇಟ್ಟಿವೆ. ಶೇ.40ರಷ್ಟು ಮತಎಣಿಕೆ ಮುಕ್ತಾಯಗೊಂಡಾಗ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿಗೆ ಸಾಕ್ಷಿಯಾಗಿತ್ತು.
ಈ ಹಿನ್ನೆಲೆಯಲ್ಲಿ ಎಲ್ಲಾ ಸಮೀಕ್ಷೆಗಳ ಲೆಕ್ಕಚಾರ ತಲೆಕೆಳಗಾಗಿದ್ದು ಹೇಗೆ ಎಂಬ ಪ್ರಶ್ನೆ ಉದ್ಭವಿಸಿದೆ. ಅದಕ್ಕೆ ಮುಖ್ಯ ಕಾರಣ ಬಹುತೇಕ ಸಮೀಕ್ಷೆಗಳು 2019ರ ಲೋಕಸಭಾ ಚುನಾವಣೆಯ ಫಲಿತಾಂಶವನ್ನೇ ನೂತನ ಮಾನದಂಡವಾಗಿ ಪರಿಗಣಿಸಿದ್ದರು.
2019ರ ಲೋಕಸಭಾ ಚುನಾವಣೆಯಲ್ಲಿ ಹರಿಯಾಣದಲ್ಲಿ ಬಿಜೆಪಿ ಶೇ.58ರಷ್ಟು ಮತ ಪಡೆದಿತ್ತು. ಇದೀಗ ವಿಧಾನಸಭಾ ಚುನಾವಣೆಯಲ್ಲಿ ಶೇ.36ಕ್ಕೆ ಕುಸಿತ ಕಂಡಿದೆ. 2014ರ ಚುನಾವಣೆಗೆ ಹೋಲಿಸಿದರೆ ಬಿಜೆಪಿ ಕೇವಲ ಶೇ.2-3ರಷ್ಟು ಮತಗಳನ್ನಷ್ಟೇ ಹೆಚ್ಚು ಪಡೆದಿದೆ. ಆದರೆ 2019ರ ಲೋಕಸಭಾ ಚುನಾವಣೆಗೆ ಹೋಲಿಸಿದರೆ ಶೇ.20ರಷ್ಟು ಭಾರೀ ನಷ್ಟ ಅನುಭವಿಸಿದೆ.
ಮಹಾರಾಷ್ಟ್ರದ ಪ್ರವಾಹಪೀಡಿತ ಪ್ರದೇಶಗಳಲ್ಲಿ ಬಿಜೆಪಿಗೆ ಸೋಲು:
ಮಹಾರಾಷ್ಟ್ರದ ಕೊಲ್ಹಾಪುರದ ಹತ್ತು ಕ್ಷೇತ್ರಗಳಲ್ಲಿ ಬಿಜೆಪಿಗೆ ಹೀನಾಯ ಸೋಲು ಅನುಭವಿಸಿದೆ. ಅಲ್ಲದೇ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಪ್ರವಾಹ ಪೀಡಿತ ಕ್ಷೇತ್ರಗಳಲ್ಲಿ ಬಿಜೆಪಿ ಪರಾಜಯಗೊಂಡಿದೆ. ಈ ನಿಟ್ಟಿನಲ್ಲಿ 2014ರ ಚುನಾವಣೆಯಲ್ಲಿ ಬಿಜೆಪಿ 122 ಸ್ಥಾನಗಳಲ್ಲಿ ಜಯ ಸಾಧಿಸಿತ್ತು. ಆದರೆ ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ನೂರು ಸ್ಥಾನಗಳಲ್ಲಷ್ಟೇ ಗೆಲುವು ಪಡೆಯಲು ಯಶಸ್ವಿಯಾಗಿದೆ. ಚುನಾವಣೋತ್ತರ ಮತ್ತು ಮತದಾನೋತ್ತರ ಸಮೀಕ್ಷೆಗಳೆಲ್ಲವೂ ಮಹಾರಾಷ್ಟ್ರದಲ್ಲಿ ಬಿಜೆಪಿಯೇ 150ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದ್ದವು.
ಆದರೆ ಈ ಬಾರಿ ಬಿಜೆಪಿ 100 ಸ್ಥಾನಗಳಲ್ಲಿ ಶಿವಸೇನಾ 58, ಕಾಂಗ್ರೆಸ್ 45, ಎನ್ ಸಿಪಿ 51 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಮೂಲಕ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ ಎಂಬ ಭವಿಷ್ಯ ಹುಸಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
MUST WATCH
ಹೊಸ ಸೇರ್ಪಡೆ
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ