ಹರಿಯಾಣ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ: ಮಹಿಳೆಯರಿಗೆ ಸರ್ಕಾರಿ ಉದ್ಯೋಗದ ಭರವಸೆ
Team Udayavani, Oct 12, 2019, 8:30 AM IST
ಚಂಢೀಗಡ: ಆಕ್ಟೋಬರ್ 21 ರಂದು ಹರಿಯಾಣ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ್ದು, ರಾಜ್ಯದ ರೈತರ ಸಾಲಮನ್ನಾ , ಮಹಿಳೆಯರಿಗೆ ಶೇ 33 ರಷ್ಟು ಸರ್ಕಾರಿ ಉದ್ಯೋಗದಲ್ಲಿ ಅವಕಾಶ ಸೇರಿದಂತೆ ಭರಪೂರ ಭರವಸೆ ನೀಡಿದೆ.
ಬರ ಮತ್ತು ನೈಸರ್ಗಿಕ ವಿಕೋಪದ ಕಾರಣದಿಂದ ರೈತರ ಬೆಳೆ ಹಾನಿಯಾದ ಹಿನ್ನಲೆಯಲ್ಲಿ ಏಕರೆಗೆ 12,000 ರೂ ಪರಿಹಾರ ನೀಡುವುದಾಗಿ ಮಾಜಿ ಕೇಂದ್ರ ಸಚಿವ ಗುಲಾಂ ನಭಿ ಅಜಾದ್ 22 ಪುಟಗಳ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ತಿಳಿಸಿದರು.
ಪಕ್ಷ ಅಧಿಕಾರಕ್ಕೇರಿದರೇ 24 ಗಂಟೆಯೊಳಗೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲಾಗುವುದು. ಅದರ ಜೊತೆಗೆ ಬೆಳೆ ವಿಮೆಯ ಮೇಲೆ ಯಾವುದೇ ರೀತಿಯ ಪ್ರೀಮಿಯಂ ಇರುವುದಿಲ್ಲ. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಉದ್ಯೋಗದ ಭರವಸೆ ನೀಡಲಾಗುವುದು. ಹರಿಯಾಣ ಮಾರ್ಗಗಳಲ್ಲಿ ಸಂಚರಿಸುವ ಬಸ್ ಗಳಲ್ಲಿ ಗರ್ಭಿಣಿ ಸ್ತ್ರೀಯರಿಗೆ ಉಚಿತ ಪ್ರಯಾಣ ಮತ್ತು 3,500 ರೂ ಗಳ ಭತ್ಯೆ. ಹಾಗೂ 5 ವರ್ಷದೊಳಗಿನ ಮಕ್ಕಳಿರುವ ಮಹಿಳೆಯರಿಗೆ 5000 ರೂ. ನೀಡಲಾಗುವುದು ಎಂದು ತಿಳಿಸಿದರು.
ಅದರ ಜೊತೆಗೆ ಪಂಚಾಯತ್ ರಾಜ್ ಇಲಾಖೆ , ಪುರಸಭೆ ಮತ್ತು ನಗರ ಸಭೆಗಳಲ್ಲಿ ಮಹಿಳೆಯರಿಗೆ ಶೇ 50 ರಷ್ಟು ಮೀಸಲಾತಿ . ನಿರುದ್ಯೋಗ ಯುವಕರಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿಯ ಅರ್ಹತೆಯ ಆಧಾರದ ಮೇಲೆ ಪ್ರತಿ ಉಟುಂಬಕ್ಕೆ ಒಂದು ಸರ್ಕಾರಿ ಉದ್ಯೋಗ ಮತ್ತು ಸ್ನಾತಕೋತ್ತರ ಪದವಿ ಪಡೆದ ನಿರುದ್ಯೋಗಿಗಳಿಗೆ ತಿಂಗಳಿಗೆ 10.00 ರೂ ಭತ್ಯೆ ಮತ್ತು ಪದವಿ ನಿರುದ್ಯೋಗಿಗಳಿಗೆ 7000 ರೂ . ಭತ್ಯೆ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ