ಕಾರ್ಪೊರೇಟ್ ಕಂಪನಿಗಳಲ್ಲಿ ಬಿಯರ್, ವೈನ್ಸೇವನೆಗೆ ಅವಕಾಶ
ಹರ್ಯಾಣ ಹೊಸ ಅಬಕಾರಿ ನೀತಿಯಲ್ಲಿ ಉಲ್ಲೇಖ
Team Udayavani, May 16, 2023, 7:55 AM IST
ಚಂಡೀಗಢ: ಕಾರ್ಪೊರೇಟ್ ಕಂಪನಿಗಳಲ್ಲಿ ಇನ್ನು ಬಿಯರ್ ಮತ್ತು ವೈನ್ ಸೇವನೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಏನಪ್ಪಾ ಇದು ಹುಬ್ಬೇರಿಸಬೇಡಿ.
ಹರ್ಯಾಣ ಸರ್ಕಾರದ ಜೂ.12ರಿಂದ ಜಾರಿಗೊಳಿಸಲು ಉದ್ದೇಶಿಸಿರುವ ಹೊಸ ಅಬಕಾರಿ ನೀತಿಯ ಅಂಶಗಳಲ್ಲಿ ಇದೂ ಒಂದು. ಅಂದ ಹಾಗೆ ಎಲ್ಲಾ ಕಂಪನಿಗಳಲ್ಲೂ ಈ ವ್ಯವಸ್ಥೆ ಲಭ್ಯವಾಗುವುದಿಲ್ಲ. ಅದಕ್ಕಾಗಿ ಸೂಕ್ತ ರೀತೀಯ ಪರವಾನಗಿ ಪಡೆಯಬೇಕಾಗುತ್ತದೆ.
ನೂತನ ಅಬಕಾರಿ ನೀತಿಯ ಪ್ರಕಾರ, ಕನಿಷ್ಠ ಒಂದು ಲಕ್ಷ ಚದರ ಅಡಿಯ ವಿಸ್ತೀರ್ಣದಲ್ಲಿ ಕಚೇರಿ ಇರಬೇಕು. ಕನಿಷ್ಠ 5,000 ಉದ್ಯೋಗಿಗಳನ್ನು ಹೊಂದಿರಬೇಕು. ಅಲ್ಲದೆ, ಕಚೇರಿ ಕ್ಯಾಂಟೀನ್ ಅಥವಾ ಊಟ ಮಾಡುವ ಸ್ಥಳ 2,000 ಚದರ ಅಡಿಗೂ ಹೆಚ್ಚು ವಿಸ್ತೀರ್ಣ ಹೊಂದಿರಬೇಕು. ಪರವಾನಿಗೆ ಪಡೆಯಲು ವಾರ್ಷಿಕ 10 ಲಕ್ಷ ರೂ. ಪಾವತಿಸಬೇಕು. ಜತೆಗೆ ಭದ್ರತೆಯಾಗಿ ಹೆಚ್ಚುವರಿಯಾಗಿ ವಾರ್ಷಿಕ 3 ಲಕ್ಷ ರೂ.ಗಳನ್ನು ಪಾವತಿಸಬೇಕಿದೆ.
ಹೊಸ ನೀತಿಯ ಮೂಲಕ ಹರ್ಯಾಣ ಸರ್ಕಾರ ವಾರ್ಷಿಕವಾಗಿ 400 ಕೋಟಿ ರೂ. ಆದಾಯ ಪಡೆದುಕೊಳ್ಳುವ ಗುರಿಯನ್ನು ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
MUST WATCH
ಹೊಸ ಸೇರ್ಪಡೆ
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!