ಕೋವ್ಯಾಕ್ಸಿನ್ ಲಸಿಕೆ ಪ್ರಯೋಗಕ್ಕೆ ಒಳಗಾದ ಹರ್ಯಾಣ ಸಚಿವ ವಿಜ್ ಗೆ ಕೋವಿಡ್ ಸೋಂಕು
Team Udayavani, Dec 5, 2020, 1:13 PM IST
ನವದೆಹಲಿ:ಭಾರತದಲ್ಲಿಯೇ ಅಭಿವೃದ್ಧಿಪಡಿಸಲಾದ ಕೋವ್ಯಾಕ್ಸಿನ್ ಪ್ರಯೋಗಕ್ಕೆ ಸ್ವತಃ ಹರ್ಯಾಣ ಆರೋಗ್ಯ ಸಚಿವ, ಬಿಜೆಪಿ ಹಿರಿಯ ಮುಖಂಡ ಅನಿಲ್ ವಿಜ್ ಒಳಗಾದ ನಂತರ ಇದೀಗ ಕೋವಿಡ್ 19 ಸೋಂಕು ತಗುಲಿರುವುದಾಗಿ ವರದಿ ತಿಳಿಸಿದೆ.
ಈ ಕುರಿತು ಶನಿವಾರ(ಡಿಸೆಂಬರ್ 05, 2020) ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಆರೋಗ್ಯ ಸಚಿವ ವಿಜ್, ಯಾರು ನನ್ನ ಜತೆ ನಿಕಟ ಸಂಪರ್ಕದಲ್ಲಿದ್ದ ವ್ಯಕ್ತಿಗಳು ಕೋವಿಡ್ 19 ಪರೀಕ್ಷೆಗೆ ಒಳಗಾಗುವಂತೆ ಸಲಹೆ ನೀಡಿದ್ದಾರೆ.
ಕೋವಿಡ್ ಸೋಂಕಿಗೆ ಒಳಗಾಗಿರುವ ಸಚಿವ ಅನಿಲ್ ವಿಜ್ ಅವರು ಅಂಬಾಲಾ ಕಂಟೋನ್ಮೆಂಟ್ ನ ಸಿವಿಲ್ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿಸಿದ್ದಾರೆ. ನವೆಂಬರ್ 20ರಂದು ಸಚಿವ ಅನಿಲ್ ವಿಜ್ ಅವರು ಮೊದಲ ಹಂತದ ಕೋವ್ಯಾಕ್ಸಿನ್ ಲಸಿಕೆ ಪ್ರಯೋಗಕ್ಕೆ ಒಳಗಾಗುವುದಾಗಿ ತಿಳಿಸಿದ್ದು, ಸ್ವತಃ ಸಚಿವ ವಿಜ್ ಲಸಿಕೆ ಪ್ರಯೋಗಕ್ಕೆ ಒಳಗಾಗಿದ್ದರು.
ಇದನ್ನೂ ಓದಿ:ಕರ್ನಾಟಕ ಬಂದ್ ; ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್ , ನಾರಾಯಣ ಗೌಡ ಪೋಲೀಸರ ವಶಕ್ಕೆ
ಕೋವಿಡ್ 19 ಸೋಂಕಿಗೆ ಕೋವ್ಯಾಕ್ಸಿನ್ ಪರಿಣಾಮಕಾರಿ ಲಸಿಕೆ ಎಂದು ಐಸಿಎಂಆರ್ ಈಗಾಗಲೇ ತಿಳಿಸಿದೆ. ಕೋವ್ಯಾಕ್ಸಿನ್ ಲಸಿಕೆಯನ್ನು ದೇಶೀಯವಾಗಿ ಐಸಿಎಂಆರ್ ಜತೆಗೂಡಿ ಭಾರತ್ ಬಯೋಟೆಕ್ ಅಭಿವೃದ್ದಿಪಡಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್