100ಕ್ಕೂ ಅಧಿಕ ಮಹಿಳೆಯರ ಮೇಲೆ ದೈಹಿಕ ದೌರ್ಜನ್ಯ-14 ವರ್ಷ ಜೈಲು: ಯಾರೀತ ಜಿಲೇಬಿ ಬಾಬಾ?
ವಿಡಿಯೋ ರೆಕಾರ್ಡ್ ಮಾಡಿ ಮಹಿಳೆಯರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ
Team Udayavani, Jan 11, 2023, 4:27 PM IST
ಹರ್ಯಾಣ: ಹರ್ಯಾಣದ ಬಾಬಾ ಬಾಲಕನಾಥ್ ದೇವಾಲಯದ ಅರ್ಚಕ, ಜಿಲೇಬಿ ಬಾಬಾ ಎಂದೇ ಹೆಸರು ಪಡೆದಿದ್ದ ಸ್ವಯಂ ಘೋಷಿತ ದೇವಮಾನವ ಅಮರ್ ಪುರಿಗೆ ನೂರಕ್ಕೂ ಅಧಿಕ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಫತೇಹಾಬಾದ್ ಫಾಸ್ಟ್ ಟ್ರ್ಯಾಕ್ ಕೋರ್ಟ್ ಬುಧವಾರ (ಜನವರಿ 11) 14 ವರ್ಷ ಜೈಲುಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಇದನ್ನೂ ಓದಿ:ದೆಹಲಿ ವಿಮಾನ ನಿಲ್ದಾಣದ ನಿರ್ಗಮನ ದ್ವಾರದಲ್ಲೇ ಸಾರ್ವಜನಿಕರೆದುರು ಪಾನಮತ್ತನಿಂದ ಮೂತ್ರ ವಿಸರ್ಜನೆ
“ ದೋಷ ಪರಿಹಾರಕ್ಕಾಗಿ ಜಿಲೇಬಿ ಬಾಬಾನ ಬಳಿ ಬರುತ್ತಿದ್ದ ಮಹಿಳೆಯರಿಗೆ ಮಾದಕ ವಸ್ತು ನೀಡಿ ನಂತರ ಅವರ ಮೇಲೆ ದೈಹಿಕ ದೌರ್ಜನ್ಯ ನಡೆಸುತ್ತಿದ್ದ. ಅಷ್ಟೇ ಅಲ್ಲ ತನ್ನ ಪೈಶಾಚಿಕ ಕೃತ್ಯದ ವಿಡಿಯೋ ರೆಕಾರ್ಡ್ ಮಾಡಿ ಮಹಿಳೆಯರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಎಂದು ವರದಿ ತಿಳಿಸಿದೆ.
“ಪೋಕ್ಸೋ ಕಾಯ್ದೆ ಸೆಕ್ಷನ್ 6 ಸೇರಿದಂತೆ ವಿವಿಧ ಕಲಂನಡಿ ಜಿಲೇಬಿ ಬಾಬಾ ಅಲಿಯಾಸ್ ಅಮರ್ ಪುರಿ (63ವರ್ಷ)ಗೆ ಹೆಚ್ಚುವರಿ ಜಿಲ್ಲಾ ಜಡ್ಜ್ ಬಲ್ವಂತ್ ಸಿಂಗ್ 14 ವರ್ಷಗಳ ಜೈಲುಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಜಿಲೇಬಿ ಬಾಬಾ ಅಲಿಯಾಸ್ ಅಮರ್ ಪುರಿ ಖುಲಾಸೆಗೊಂಡಿರುವುದಾಗಿ ವರದಿ ತಿಳಿಸಿದೆ. ಎಲ್ಲಾ ಪ್ರಕರಣ ಸೇರಿ ಜಿಲೇಬಿ ಬಾಬಾ 14 ವರ್ಷ ಜೈಲುಶಿಕ್ಷೆ ಅನುಭವಿಸಬೇಕು ಎಂದು ಸಂತ್ರಸ್ತರ ಪರ ವಕೀಲ ಸಂಜಯ್ ವರ್ಮಾ ತಿಳಿಸಿದ್ದಾರೆ.
ಅಮರ್ ಪುರಿ ಅಲಿಯಾಸ್ ಬಿಲ್ಲು ಎಂಬ ಸ್ವಯಂಘೋಷಿತ ದೇವಮಾನವ ಜಿಲೇಬಿ ಬಾಬಾನನ್ನು ಫತೇಹಾಬಾದ್ ಕೋರ್ಟ್ ದೋಷಿ ಎಂದು ಜನವರಿ 5ರಂದು ಆದೇಶ ನೀಡಿತ್ತು. ಈ ಸಂದರ್ಭದಲ್ಲಿ ಅಮರ್ ಪುರಿ ಕೋರ್ಟ್ ರೂಂನಲ್ಲಿ ಕಣ್ಣೀರಿಟ್ಟಿರುವುದಾಗಿ ವರದಿ ಹೇಳಿದೆ.
ಯಾರೀತ ಜಿಲೇಬಿ ಬಾಬಾ?
ನಾಲ್ಕು ಹೆಣ್ಣು ಮಕ್ಕಳು ಹಾಗೂ ಇಬ್ಬರು ಗಂಡು ಮಕ್ಕಳ ತಂದೆಯಾಗಿದ್ದ (ಪತ್ನಿ ತೀರಿ ಹೋಗಿದ್ದಳು) ಅಮರ್ ವೀರ್ ಎಂಬಾತ ಸುಮಾರು 23 ವರ್ಷಗಳ ಹಿಂದೆ ಪಂಜಾಬ್ ನ ಮಾನ್ಸಾದಿಂದ ಹರ್ಯಾಣದ ತೋಹಾನಾ ಪ್ರದೇಶಕ್ಕೆ ವಲಸೆ ಬಂದಿದ್ದ. ಮೊದಲ 13 ವರ್ಷಗಳ ಕಾಲ ಅಮರ್ ವೀರ್ ರೈಲ್ವೆ ನಿಲ್ದಾಣದ ಬಳಿ ಜಿಲೇಬಿ ಅಂಗಡಿ ಇಟ್ಟುಕೊಂಡಿದ್ದ. ಈ ಸಂದರ್ಭದಲ್ಲಿ ಅಮರ್ ವೀರ್ ಮಂತ್ರವಾದಿಯೊಬ್ಬನನ್ನು ಭೇಟಿಯಾಗಿದ್ದ, ನಂತರ ಆತನಿಂದ ಕೆಲವು ವಿದ್ಯೆಗಳನ್ನು ಕಲಿತುಕೊಂಡಿದ್ದ. ಇದಾದ ಬಳಿಕ ಅಮರ್ ವೀರ್ ತೋಹಾನಾದಿಂದ ಕೆಲವು ವರ್ಷಗಳ ಕಾಲ ಕಣ್ಮರೆಯಾಗಿದ್ದ. ಕೆಲವು ವರ್ಷಗಳ ನಂತರ ಊರಿಗೆ ವಾಪಸ್ ಆಗಿದ್ದ ಅಮರ್ ವೀರ್ ದೇವಸ್ಥಾನದ ಸಮೀಪ ಮನೆಯೊಂದನ್ನು ನಿರ್ಮಿಸಿದ್ದು, ಆತನಿಗೆ ಅನುಯಾಯಿಗಳು ಹುಟ್ಟಿಕೊಳ್ಳತೊಡಗಿದ್ದರು. ಅದರಲ್ಲಿ ಹೆಚ್ಚಿನವರು ಮಹಿಳೆಯರೇ ಆಗಿದ್ದರು. ದಿನಕಳೆದಂತೆ ಅಮರ್ ವೀರ್ ಜಿಲೇಬಿ ಬಾಬಾನಾಗಿ ಜನಪ್ರಿಯತೆ ಪಡೆದಿದ್ದ. ಹೀಗೆ ತನ್ನ ಬಳಿ ಬರುತ್ತಿದ್ದ ಮಹಿಳೆಯರು, ಯುವತಿಯರಿಗೆ ಡ್ರಗ್ಸ್, ಅಮಲು ಪದಾರ್ಥ ನೀಡಿ ದೈಹಿಕ ದೌರ್ಜನ್ಯ ಎಸಗಿ ವಿಡಿಯೋ ರೆಕಾರ್ಡ್ ಮಾಡಿ ಇಟ್ಟುಕೊಂಡು, ಅವರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ