ಹರ್ಯಾಣ:ಗುಂಡಿಕ್ಕಿ ಗಾಯಕಿಯ ಬರ್ಬರ ಹತ್ಯೆ
Team Udayavani, Oct 18, 2017, 10:45 AM IST
ಪಾಣಿಪತ್: ಇಲ್ಲಿನ ಇಸ್ರಾನಾ ಎಂಬಲ್ಲಿ 22 ರ ಹರೆಯದ ಗಾಯಕಿಯೊಬ್ಬರನ್ನು ಅಪರಿಚಿತ ದುಷ್ಕರ್ಮಿಗಳು ಬರ್ಬರವಾಗಿ ಗುಂಡಿಕ್ಕಿ ಹತ್ಯೆಗೈದ ಭೀಕರ ಘಟನೆ ಮಂಗಳವಾರ ನಡೆದಿದೆ.
ವರದಿಯಾದಂತೆ ಹರ್ಷಿತಾ ದಹಿಯಾ ಎಂಬ ಗಾಯಕಿ ಕಾರ್ಯಕ್ರಮ ಮುಗಿಸಿ ದೆಹಲಿಯ ನರೇಲಾದ ನಿವಾಸಕ್ಕೆ ವಾಪಾಸಾಗುತ್ತಿದ್ದ ವೇಳೆ ದಾಳಿ ನಡೆದಿದೆ.
ಕಾರಿನಲ್ಲಿದ್ದ ನಾಲ್ವರು ದುಷ್ಕರ್ಮಿಗಳು ಹರ್ಷಿತಾ ಪ್ರಯಾಣಿಸುತ್ತಿದ್ದ ಕಾರನ್ನು ಹಿಂಬಾಲಿಸಿ ಚಾಮ್ರಾರಾ ಎಂಬಲ್ಲಿ ಅಡ್ಡಗಟ್ಟಿ ಮನಬಂದಂತೆ ಗುಂಡು ಹಾರಿಸಿ ಹತ್ಯೆಗೈದು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.
ಸ್ಥಳದಲ್ಲೇ ಕೊನೆಯುಸಿರೆಳೆದಿರುವ ಹರ್ಷಿತಾರ ಶವವನ್ನು ಪಾಣಿಪತ್ನ ಸಾರ್ವಜನಿಕ ಆಸ್ಪತ್ರೆಯಲ್ಲಿಡಲಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದು , ಹತ್ಯೆಗೆ ಕಾರಣವೇನೆಂದು ಇನ್ನಷ್ಟೇ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು
Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್ ಆಡಲಿ: ಪೊವೆಲ್
MUST WATCH
ಹೊಸ ಸೇರ್ಪಡೆ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
UV Fusion: ಇಂಡಿ ಪಂಪ್ ಮಟ..