ತ್ವರಿತ ವೈದ್ಯಕೀಯ ಸೌಲಭ್ಯ ಒದಗಿಸಲು ಹರಿಯಾಣದ ಹೊಸ ಮಾರ್ಗ “ಸಂಜೀವನಿ ಪರಿಯೋಜನ”: ನಾಳೆ ಜಾರಿಗೆ
Team Udayavani, May 23, 2021, 8:33 PM IST
ಸಾಂದರ್ಭಿಕ ಚಿತ್ರ
ಹರಿಯಾಣ : ರಾಜ್ಯ ಸರ್ಕಾರವು ನಾಳೆ(ಸೋಮವಾರ, ಮೇ 23) ಆ್ಯಂಟಿ ಕೋವಿಡ್ “ಸಂಜೀವನಿ ಪರಿಯೋಜನ” ವನ್ನು ಪ್ರಾರಂಭಿಸಲಿದ್ದು, ಗ್ರಾಮೀಣ ಪ್ರದೇಶದಲ್ಲಿ ಇರುವವರಿಗೆ ಇದು ಸಹಕಾರಿಯಾಗಲಿದೆ.
ಕೋವಿಡ್ ಸೋಂಕಿನ ಎರಡನೇ ಅಲೆಯ ಸಂದರ್ಭದಲ್ಲಿ ಅನಾನುಕೂಲತೆ ಇರುವ ಪ್ರದೇಶಗಳಲ್ಲಿ ಈ ‘ಸಂಜೀವನಿ ಪ್ರಯೋಜನ’ ವೈದ್ಯಕೀಯ ಸೌಲಭ್ಯವನ್ನು ಒದಗಿಸಲಿದೆ ಎಂದು ಅಲ್ಲಿನ ಸರ್ಕಾರ ಮಾಹಿತಿ ನೀಡಿದೆ.
ಇದನ್ನೂ ಓದಿ : ಅಣುಶಕ್ತಿ ಆಯೋಗದ ಮಾಜಿ ಮುಖ್ಯಸ್ಥ ಶ್ರೀಕುಮಾರ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
ಈ ಯೋಜನೆಯನ್ನು ಮುಖ್ಯಮಂತ್ರಿ ಎಂ.ಎಲ್ ಖಟ್ಟರ್ ನಾಳೆ(ಸೋಮವಾರ, ಮೇ 24) ವಿಡಿಯೋ ಕಾನ್ಫರೆನ್ಸ್ ಮೂಲಕ ಜಾರಿಗೆ ತರಲಿದ್ದಾರೆ ಎಂದು ಸರ್ಕಾರದ ಸರ್ಕಾರದ ವಕ್ತಾರರು ತಿಳಿಸಿದ್ದಾರೆ.
ಜನರಿಗೆ ಅಗತ್ಯವಾದ ವೈದ್ಯಕೀಯ ಸೌಲಭ್ಯವನ್ನು ನೀಡುವ ಹೆಜ್ಜೆಯಿದು ಎಂದು ‘ಸಂಜೀವನಿ ಪ್ರಯೋಜನ’ ವನ್ನು ಬಣ್ಣಿಸಿದ್ದಲ್ಲದೇ, “ಈ ಉಪಕ್ರಮವು ಆಸ್ಪತ್ರೆ ಹಾಸಿಗೆಗಳ ಲಭ್ಯತೆ, ಆಮ್ಲಜನಕ ಪೂರೈಕೆ, ಆಂಬ್ಯುಲೆನ್ಸ್ ಟ್ರ್ಯಾಕಿಂಗ್ ಮತ್ತು ಮನೆ-ಮನೆ ಜಾಗೃತಿ ಅಭಿಯಾನದಂತಹ ಸೌಲಭ್ಯವನ್ನು ನಿರ್ವಹಿಸಲಿದೆ ಅವರು ಹೇಳಿದ್ದಾರೆ.
ಇನ್ನುಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ವಾರ್ಡ್ಗಳು ಮತ್ತು ಕೆಲವು ಸಂದರ್ಭಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಣ್ಣ ಮಟ್ಟದ ರೋಗ ಲಕ್ಷಣಗಳನ್ನು ಹೊಂದಿರುವ ರೋಗಿಗಳಿಗೆ ವೈದ್ಯಕೀಯ ಮೂಲಸೌಕರ್ಯಗಳನ್ನು ನೀಡಲು ಇದು ಸಹಾಯ ಮಾಡಲಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ತಿಮಿಂಗಿಲ ವಾಂತಿ ಸಾಗಾಟ ಮಾಡುತ್ತಿದ್ದ ಮೂವರ ಬಂಧನ, 5.35 ಕೆಜಿ ತೂಕದ ವಾಂತಿ ವಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ