ಜ. 26 ರಿಂದ ಪಕ್ಷ ಸಂಘಟನೆಗೆ ‘ಹಾತ್ ಸೇ ಹಾತ್ ಜೋಡೋ’ ಅಭಿಯಾನ: ದಿನೇಶ್ ಗುಂಡೂರಾವ್
Team Udayavani, Dec 18, 2022, 6:26 PM IST
ಪಣಜಿ: ಬಿಜೆಪಿ ವಿರುದ್ಧ ಹೋರಾಡಲು ಮತ್ತು ಪಕ್ಷವನ್ನು ಬಲಪಡಿಸಲು ಜನವರಿ 26 ರಿಂದ ‘ಹಾತ್ ಸೇ ಹಾತ್ ಜೋಡೋ’ ಅಭಿಯಾನವನ್ನು ಪ್ರಾರಂಭಿಸಲಿದೆ ಎಂದು ಗೋವಾ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಹೇಳಿದರು. ಬಿಜೆಪಿಯು ಸ್ಥಳೀಯರಿಂದ ಹಿಡಟಿದು ಕೇಂದ್ರದವರೆಗಿನ ನಾಯಕರು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಇಂತವರು ನಮಗೆ ಧರ್ಮ ಕಲಿಸುವ ಅಗತ್ಯವಿಲ್ಲ ಎಂದು ಗೋವಾ ರಾಜ್ಯ ಕಾಂಗ್ರೇಸ್ ಪ್ರಭಾರಿ ದಿನೇಶ್ ಗುಂಡೂರಾವ್ ಟೀಕಿಸಿದರು.
ಪಣಜಿಯ ಕಾಂಗ್ರೆಸ್ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ ಎಲ್ಲ ಕ್ಷೇತ್ರಗಳಲ್ಲಿ ದಬ್ಬಾಳಿಕೆ ನಡೆಸುತ್ತಿದೆ. ಇದರ ವಿರುದ್ಧ ಕಾಂಗ್ರೆಸ್ ಹೋರಾಟ ಮುಂದುವರಿಸಲಿದೆ. ಇದಕ್ಕಾಗಿ ಜನವರಿ 1ರಿಂದ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಜನಸಂಪರ್ಕ ಅಭಿಯಾನ, ಜನವರಿ 26ರಿಂದ ಹಾತ್ ಸೇ ಹಾತ್ ಜೋಡೋ ಅಭಿಯಾನ ಆರಂಭಿಸಲಾಗುವುದು. ಈ ಅಭಿಯಾನದಡಿ ರಾಜ್ಯದ ಎಲ್ಲ ಜನರನ್ನು ತಲುಪಲು ಕಾಂಗ್ರೆಸ್ ಪ್ರಯತ್ನಿಸಲಿದೆ. ಗೋವಾದಲ್ಲಿ ಗಣಿಗಾರಿಕೆ ಆರಂಭಿಸಲು ಸರ್ಕಾರ ನಡೆಯುತ್ತಿರುವ ಪ್ರಯತ್ನಗಳು ಸ್ವಾಗತಾರ್ಹವಾದರೂ ಪ್ರಸ್ತುತ ಇ-ಹರಾಜುಗಳು ಯಶಸ್ವಿಯಾಗುತ್ತವೆ ಎಂದು ಹೇಳಲಾಗುವುದಿಲ್ಲ. ಏಕೆಂದರೆ ಹಿಂದಿನ ಹರಾಜುಗಳು ವಿಫಲವಾಗಿವೆ. ಗಣಿಗಾರಿಕೆ ಆರಂಭವಾಗುವ ಬಗ್ಗೆ ಅನುಮಾನವಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಮಹದಾಯಿ ನದಿ ನೀರನ್ನು ಕರ್ನಾಟಕ ಸರ್ಕಾರ ತಿರುಗಿಸಿದೆ ಎಂದು ಗೋವಾ ಫಾರ್ವರ್ಡ್ ಮಾಡಿರುವ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ದಿನೇಶ್ ಗುಂಡೂರಾವ್, ಕರ್ನಾಟಕದ ಕಾಂಗ್ರೆಸ್ ಅಲ್ಲಿನ ಜನರೊಂದಿಗೆ ನಿಲ್ಲುತ್ತದೆ. ಇದು ಅಲ್ಲಿನ ಸ್ಥಳೀಯ ಜನರು ಮತ್ತು ಸರ್ಕಾರದ ನಿರ್ಧಾರವಾಗಿರುತ್ತದೆ ಮತ್ತು ಎಲ್ಲರೂ ಗೌರವಿಸಬೇಕು ಎಂದರು.
ಇದನ್ನೂ ಓದಿ: ‘ಎಮರ್ಜೆನ್ಸಿ’… ಸಂಸತ್ನಲ್ಲಿ ಚಿತ್ರೀಕರಣಕ್ಕೆ ಅನುಮತಿ ಕೋರಿದ ಬಾಲಿವುಡ್ ನಟಿ ಕಂಗನಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ