ಹಠಯೋಗಕ್ಕೆ ದಿಗ್ವಿಜಯ್ಗೆ ಆಹ್ವಾನಿಸಿರಲಿಲ್ಲ; EC ನೊಟೀಸಿಗೆ ಕಂಪ್ಯೂಟರ್ ಬಾಬಾ ಉತ್ತರ
Team Udayavani, May 11, 2019, 11:08 AM IST
ಭೋಪಾಲ್ : ಭೋಪಾಲ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ಅವರ ವಿಜಯಕ್ಕೆ ಹಠಯೋಗ ಮಾಡಿದ್ದ ಕಾರಣಕ್ಕೆ ಚುನಾವಣಾ ಆಯೋಗದಿಂದ ನೊಟೀಸ್ ಪಡೆದಿದ್ದ ಸ್ವಘೋಷಿತ ದೇವ ಮಾನವ ಕಂಪ್ಯೂಟರ್ ಬಾಬಾ ಇಂದು ಶನಿವಾರ ನೊಟೀಸಿಗೆ ಉತ್ತರಿಸಿದ್ದಾರೆ.
‘ಹಠಯೋಗ ಶಿಬಿರಕ್ಕೆ ದಿಗ್ವಿಜಯ್ ಸಿಂಗ್ ಅವರನ್ನು ನಾವು ಆಹ್ವಾನಿಸಿಲ್ಲ ಮತ್ತು ಕಾರ್ಯಕ್ರಮದ ಖರ್ಚು ವೆಚ್ಚಗಳಿಗೆ ನಾವು ಹಣವನ್ನು ದೇಣಿಗೆ ಮತ್ತು ದಾನ-ಧರ್ಮದ ವಂತಿಗೆಯಿಂದ ಸಂಗ್ರಹಿಸಿದ್ದೇವೆ’ ಎಂದು ಕಂಪ್ಯೂಟರ್ ಬಾಬಾ, ಜಿಲ್ಲಾ ಚುನಾವಣಾಧಿಕಾರಿಗೆ ನೀಡಿರುವ ಲಿಖೀತ ಉತ್ತರದಲ್ಲಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
“ಹಠಯೋಗದ ಶಿಬಿರದಲ್ಲಿ ದಿಗ್ವಿಜಯ್ ಸಿಂಗ್ ಮತ್ತು ಅವರ ಪತ್ನಿ ಉಪಸ್ಥಿತರಿದ್ದರೋ ಇಲ್ಲವೋ ಎನ್ನುವುದು ನನಗೆ ಗೊತ್ತಿಲ್ಲ, ಏಕೆಂದರೆ ನಾನು ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿರಲಿಲ್ಲ; ಶಿಬಿರವನ್ನು ವಂತಿಗೆ ಮತ್ತು ದಾನದ ಹಣದಿಂದ ನೆರವೇರಿಸಲಾಗಿತ್ತು” ಎಂದು ಕಂಪ್ಯೂಟರ್ ಬಾಬಾ ಹೇಳಿದ್ದಾರೆ.
ಕಂಪ್ಯೂಟರ್ ಬಾಬಾ ಅವರ ನಿಜನಾಮ ನಾಮದಾಸ್ ತ್ಯಾಗಿ. ಇವರು ಭೋಪಾಲ್ ನ ಸೈಫಿಯಾ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರ ವಿಜಯಕ್ಕಾಗಿ ಹಠಯೋಗ ನಡೆಸಿದ್ದರು.
ನಾಮದಾಸ್ ತ್ಯಾಗಿ ಅಲಿಯಾಸ್ ಕಂಪ್ಯೂಟರ್ ಬಾಬಾ ಅವರು ಹಿಂದಿನ ಬಿಜೆಪಿ ಸರಕಾರದಲ್ಲಿ ಸಚಿವರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್