ಕೋವಿಡ್ ಪಾಸಿಟಿವ್ ಎಂದು ಪತ್ನಿಗೆ ಹೇಳಿ ನಾಪತ್ತೆಯಾಗಿದ್ದ ಪತಿಯ ಅಸಲಿ ಗುಟ್ಟು ಬಯಲು!

ನಾನಿನ್ನು ಬದುಕುವುದರಲ್ಲಿ ಅರ್ಥವಿಲ್ಲ ಎಂದು ಬಡಬಡಿಸಿ ಹೇಳಿದ್ದ.

Team Udayavani, Sep 18, 2020, 1:46 PM IST

ಕೋವಿಡ್ ಪಾಸಿಟಿವ್ ಎಂದು ಪತ್ನಿಗೆ ಹೇಳಿ ನಾಪತ್ತೆಯಾಗಿದ್ದ ಪತಿಯ ಅಸಲಿ ಗುಟ್ಟು ಬಯಲು!

Representative Image

ಮುಂಬೈ:ದೇಶಾದ್ಯಂತ ಕೋವಿಡ್ 19 ಸೋಂಕಿನಿಂದ ಬಹುತೇಕ ಜನರು ತೊಂದರೆ ಅನುಭವಿಸಿದ್ದರೆ, ನವಿ ಮುಂಬೈಯ 28 ವರ್ಷದ ಯುವಕನೊಬ್ಬ ಜುಲೈ ತಿಂಗಳಿನಲ್ಲಿ ಪತ್ನಿಗೆ ಕರೆ ಮಾಡಿ ತನಗೆ ಕೋವಿಡ್ 19 ಪಾಸಿಟಿವ್ ಬಂದಿರುವುದಾಗಿ ತಿಳಿಸಿದ ಮೇಲೆ ನಾಪತ್ತೆಯಾಗಿದ್ದ. ಇದೀಗ ಪೊಲೀಸರು ಪ್ರಕರಣದ ಜಾಡು ಹಿಡಿದು ತನಿಖೆ ನಡೆಸಿದಾಗ ಆತನ ಅಸಲಿ ಕಥೆ ಬಯಲಾಗಿದೆ ಎಂದು ವರದಿ ತಿಳಿಸಿದೆ.

ಕೋವಿಡ್ 19 ಕಥೆ ಕಟ್ಟಿದ್ದ ಪತಿ:

ಜುಲೈ 24ರಂದು ಪತಿ ನಾಟಕೀಯವಾಗಿ ಪತ್ನಿಗೆ ಕರೆ ಮಾಡಿ, ನನ್ನ ಕೋವಿಡ್ 19 ಪರೀಕ್ಷೆಯ ವರದಿ ಬಂದಿದೆ. ಅದರಲ್ಲಿ ಪಾಸಿಟಿವ್ ಎಂದಿದೆ. ಹೀಗಾಗಿ ನಾನಿನ್ನು ಬದುಕುವುದರಲ್ಲಿ ಅರ್ಥವಿಲ್ಲ ಎಂದು ಬಡಬಡಿಸಿ ಹೇಳಿದ್ದ. ಆದರೆ ಹೆಂಡತಿ ಪ್ರಶ್ನೆ ಕೇಳುವ ಮುನ್ನವೇ ಮೊಬೈಲ್ ಕರೆಯನ್ನು ಕಟ್ ಮಾಡಿದ್ದ. ನಂತರ ಆಕೆ ತನ್ನ ಸಹೋದರನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಳು. ಕೊನೆಗೆ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದರು.

ಇದನ್ನೂ ಓದಿ: ಆರ್ ಸಿ ಬಿ ಥೀಮ್ ಸಾಂಗ್ ರಿಲೀಸ್ : ಕನ್ನಡ ಸಾಹಿತ್ಯ ಇಲ್ಲದ್ದಕ್ಕೆ ಅಭಿಮಾನಿಗಳು ಗರಂ..!

ತನಿಖೆಯ ಸಂದರ್ಭದಲ್ಲಿ ವ್ಯಕ್ತಿಯ ಬೈಕ್, ಹೆಲ್ಮೆಟ್, ಬ್ಯಾಗ್ ಹಾಗೂ ಕೀ ವಾಶಿ ಸೆಕ್ಟರ್ 17ರ ರಸ್ತೆಯಲ್ಲಿ ಪತ್ತೆಯಾಗಿತ್ತು. ಆದರೆ ಈ ವ್ಯಕ್ತಿಯ ಬಗ್ಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲವಾಗಿತ್ತು. ಎಸಿಪಿ ವಿನಾಯಕ್ ವಾಟ್ಸ್ ಪ್ರಕಾರ, ದೂರಿನ ಆಧಾರದಲ್ಲಿ ತನಿಖೆಯನ್ನು ಚುರುಕುಗೊಳಿಸಿದ್ದರು.

ಸಮೀಪದ ಸಿಸಿಟಿವಿ ಫೂಟೇಜ್ ಅನ್ನು ಪರಿಶೀಲಿಸಿದ್ದರು. ಪೊಲೀಸರು ಕೂಡಾ ಮೊಬೈಲ್ ಲೋಕೇಶನ್ ಪತ್ತೆ ಹಚ್ಚಲು ಪ್ರಯತ್ನಿಸಿದ್ದರು. ಕೊನೆಗೆ ಈ 28ವರ್ಷದ ಯುವಕ ನಾಪತ್ತೆಯಾಗಿದ್ದ ರಾತ್ರಿ ಎರಡು ಬಾರಿ ಪೊಲೀಸ್ ಕಂಟ್ರೋಲ್ ರೂಂ “100”ಕ್ಕೆ ಕರೆ ಮಾಡಿರುವುದು ಪತ್ತೆಯಾಗಿತ್ತು. ಆತ ತನ್ನ ಪ್ರಕರಣದ ಬಗ್ಗೆ ತಿಳಿದುಕೊಳ್ಳಲು ಯತ್ನಿಸಿದ್ದ ಎಂದು ವರದಿ ಹೇಳಿದೆ.

ಎಲ್ಲಾ ದಿಕ್ಕಿನಿಂದಲೂ ತನಿಖೆ ನಡೆಸಿದ ಪೊಲೀಸರಿಗೆ ಈತನಿಗೆ ಮತ್ತೊಂದು ಸಂಬಂಧ ಇದ್ದಿರುವುದು ಪತ್ತೆಯಾಗಿತ್ತು. ಸುಮಾರು ಒಂದು ತಿಂಗಳ ಕಾಲ ಶೋಧ ನಡೆಸಿದ್ದ ಪೊಲೀಸರಿಗೆ ನಾಪತ್ತೆಯಾಗಿದ್ದ ವ್ಯಕ್ತಿ ಇಂಧೋರ್ ನಲ್ಲಿ ಇದ್ದಿರುವುದನ್ನು ಪತ್ತೆಹಚ್ಚಿದ್ದರು.

ಇದನ್ನೂ ಓದಿ: ಮಂಗಳೂರು: ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!

ವಾಶಿ ಪೊಲೀಶ್ ಠಾಣಾಧಿಕಾರಿ ಸಂಜೀವ್ ಧುಮಾಲ್ ಅವರನ್ನು ಇಂದೋರ್ ಗೆ ಕಳುಹಿಸಿದಾಗ, ನಾಪತ್ತೆಯಾಗಿದ್ದ ವ್ಯಕ್ತಿ ಪ್ರಿಯತಮೆ ಜತೆ ಪತ್ತೆಯಾಗಿದ್ದು, ಇಬ್ಬರನ್ನೂ ಸೆಪ್ಟೆಂಬರ್ 15ರಂದು ಮುಂಬೈಗೆ ವಾಪಸ್ ಕರೆತರಲಾಗಿತ್ತು ಎಂದು ಎಸಿಪಿ ವಿನಾಯಕ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.