ಅಕ್ರಮ ಆಸ್ತಿ ಕೇಸು ವಜಾಕ್ಕೆ ಕೋರ್ಟ್ ನಕಾರ:ಸಿಎಂ ವೀರಭದ್ರಗೆ ಹಿನ್ನಡೆ
Team Udayavani, Mar 31, 2017, 12:28 PM IST
ಹೊಸದಿಲ್ಲಿ : ಸಿಬಿಐ ತಮ್ಮ ವಿರುದ್ಧ ದಾಖಲಿಸಿರುವ ಆದಾಯ ಮೀರಿದ ಆಸ್ತಿ ಕೇಸನ್ನು ರದ್ದು ಮಾಡಬೇಕೆಂದು ಕೋರಿ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ಮತ್ತು ಅವರ ಪತ್ನಿ ಸಲ್ಲಿಸಿದ್ದ ಮನವಿಯನ್ನು ದಿಲ್ಲಿ ಹೈಕೋರ್ಟ್ ವಜಾ ಮಾಡಿದೆ.
2015ರ ಅಕ್ಟೋಬರ್ 1ರಂದು ಹಿಮಾಚಲ ಪ್ರದೇಶ ಹೈಕೋರ್ಟ್ ಹೊರಡಿಸಿದ್ದ, “ನ್ಯಾಯಾಲಯದ ಅನುಮತಿ ಇಲ್ಲದೆ ಬಂಧಿಸುವ, ಪ್ರಶ್ನಿಸುವ ಅಥವಾ ಚಾರ್ಜ್ ಶೀಟ್ ಸಲ್ಲಿಸುವಲ್ಲಿ ಸಿಬಿಐ ಅನ್ನು ನಿರ್ಬಂಧಿಸುವ’ ತಾತ್ಕಾಲಿಕ ಆದೇಶವನ್ನು ಕೂಡ ಜಸ್ಟಿಸ್ ವಿಪಿನ್ ಸಾಂಘಿ ಅವರು ತೆರವುಗೊಳಿಸಿ, ಸಿಬಿಐ ನ ಮಾರ್ಗವನ್ನು ಸುಗಮಗೊಳಿಸಿದರು.
“ರಿಟ್ ಪಿಟಿಷನ್ ಅನ್ನು ವಜಾ ಮಾಡಲಾಗಿದೆ; ಸ್ಟೇ ತೆರವುಗೊಳಿಸಲಾಗಿದೆ’ ಎಂದು ನ್ಯಾಯಾಲಯ ಹೇಳಿತು.
ಸಿಂಗ್ ಅವರು ತಮ್ಮ ಹಾಗೂ ಪತ್ನಿಯ ವಿರುದ್ಧ ದಾಖಲಿಸಲಾಗಿದ್ದ ಎಫ್ಐಆರ್ ಅನ್ನು ವಜಾ ಮಾಡುವಂತೆ ಕೋರಿದ್ದರು. ತಮ್ಮ ಮನೆಗೆ ದಾಳಿ ನಡೆಸುವ ಮೂಲಕ ಸಿಬಿಐ ತನ್ನ ಅಧಿಕಾರ ವ್ಯಾಪ್ತಿಯನ್ನು ಮೀರಿತ್ತು ಮಾತ್ರವಲ್ಲದೆ ತನ್ನ ವಿರುದ್ದದ ಸಿಬಿಐ ಕ್ರಮವು ರಾಜಕೀಯ ವೈಷಮ್ಯ ಹಾಗೂ ಸೇಡಿನ ಕ್ರಮವಾಗಿತ್ತು ಎಂದು ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!