ಚಿದಂಬರಂ ಆರೋಗ್ಯ ಉತ್ತಮವಾಗಿದೆ;ಏಮ್ಸ್ ವರದಿ, ಬೇಲ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್
Team Udayavani, Nov 1, 2019, 6:53 PM IST
ನವದೆಹಲಿ:ಐಎನ್ ಎಕ್ಸ್ ಮೀಡಿಯಾ ಹಣಕಾಸು ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಅವರ ಆರೋಗ್ಯ ಉತ್ತಮವಾಗಿದ್ದು, ಆಸ್ಪತ್ರೆಗೆ ದಾಖಲಾಗಬೇಕಾದ ಅಗತ್ಯವಿಲ್ಲ ಎಂಬ ಏಮ್ಸ್ ವರದಿಯ ಆಧಾರದಲ್ಲಿ ದೆಹಲಿ ಹೈಕೋರ್ಟ್ ಶುಕ್ರವಾರ ಜಾಮೀನು ನಿರಾಕರಿಸಿದ್ದು, ತಿಹಾರ್ ಜೈಲುವಾಸ ಮುಂದುವರಿಸುವಂತಾಗಿದೆ.
ಶುಕ್ರವಾರ ಚಿದಂಬರಂ ಅವರ ಆರೋಗ್ಯದ ಕುರಿತು ಏಮ್ಸ್ ವೈದ್ಯರು ನೀಡಿರುವ ವರದಿಯನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ದೆಹಲಿ ಹೈಕೋರ್ಟ್ ಗೆ ಸಲ್ಲಿಸಿದ್ದರು. ಚಿದಂಬರಂ ಅವರು ಆಸ್ಪತ್ರೆಗೆ ದಾಖಲಾಗಬೇಕಾದ ಅಗತ್ಯವಿಲ್ಲ, ಅವರ ಆರೋಗ್ಯ ಉತ್ತಮವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.
ಏಮ್ಸ್ ವೈದ್ಯರ ವರದಿಯ ನಂತರ ಜಾಮೀನು ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್, ಚಿದಂಬರಂಗೆ ಶುಚಿತ್ವದ ಕೋಣೆ, ಮಿನರಲ್ ನೀರು, ಮನೆ ಅಡುಗೆ ಹಾಗೂ ಸೊಳ್ಳೆಯಿಂದ ರಕ್ಷಣೆ ನೀಡುವ ವ್ಯವಸ್ಥೆ ಮಾಡುವಂತೆ ತಿಹಾರ್ ಜೈಲು ಅಧಿಕಾರಿಗಳಿಗೆ ಸೂಚಿಸಿದೆ.
ಕೇಂದ್ರದ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಅವರ ಆರೋಗ್ಯದ ಬಗ್ಗೆ ಆರೋಗ್ಯ ಮಂಡಳಿ ಅಭಿಪ್ರಾಯ ನೀಡುವಂತೆ ಏಮ್ಸ್ ನಿರ್ದೇಶಕರಿಗೆ ದೆಹಲಿ ಹೈಕೋರ್ಟ್ ಗುರುವಾರ ನಿರ್ದೇಶನ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ