ತಮಿಳುನಾಡಿನಾದ್ಯಂತ ಪಥ ಸಂಚಲನ ನಡೆಸಲು ಆರ್ಎಸ್ಎಸ್ ಗೆ ಅನುಮತಿ ನೀಡಿದ ಕೋರ್ಟ್
6 ಸ್ಥಳಗಳಲ್ಲಿ ಮಾತ್ರ ಅಹಿತಕರ ಘಟನೆಗಳು ಸಂಭವಿಸುವ ಸಾಧ್ಯತೆ
Team Udayavani, Nov 4, 2022, 7:03 PM IST
ಚೆನ್ನೈ: ನವೆಂಬರ್ 6 ರಂದು ತಮಿಳುನಾಡಿನಾದ್ಯಂತ 44 ಸ್ಥಳಗಳಲ್ಲಿ ಪಥ ಸಂಚಲನ ನಡೆಸಲು ಆರ್ಎಸ್ಎಸ್ಗೆ ಮದ್ರಾಸ್ ಹೈಕೋರ್ಟ್ ಶುಕ್ರವಾರ ಅನುಮತಿ ನೀಡಿದೆ.
50 ರಲ್ಲಿ 44 ಸ್ಥಳಗಳಲ್ಲಿಮೆರವಣಿಗೆಗೆ ಅನುಮತಿ ನೀಡಬಹುದು ಎಂದು ಮದ್ರಾಸ್ ಹೈಕೋರ್ಟ್ನ ನ್ಯಾಯಮೂರ್ತಿ ಜಿಕೆ ಇಳಂತಿರಾಯನ್ ಹೇಳಿದ್ದಾರೆ. ಎಲ್ಲಾ ಸ್ಥಳಗಳಿಗೆ ಸಂಬಂಧಿಸಿದಂತೆ ಗುಪ್ತಚರ ವರದಿಗಳಲ್ಲಿ ತನಗೆ ಪ್ರತಿಕೂಲವಾದ ಏನೂ ಕಂಡುಬಂದಿಲ್ಲ ಮತ್ತು 6 ಸ್ಥಳಗಳಲ್ಲಿ ಮಾತ್ರ ಅಹಿತಕರ ಘಟನೆಗಳು ಸಂಭವಿಸುವ ಸಾಧ್ಯತೆಗಳಿವೆ ಎಂದು ಅವರು ಹೇಳಿದರು.
ಮೆರವಣಿಗೆಗಳನ್ನು ಶಾಂತಿಯುತವಾಗಿ ನಡೆಸಬೇಕು, ಇಲ್ಲದಿದ್ದರೆ ಪರಿಣಾಮಗಳನ್ನು ಎದುರಿಸಬೇಕು ಎಂದು ನ್ಯಾಯಾಲಯ ತೀರ್ಪು ನೀಡಿದೆ. ಕೊಯಮತ್ತೂರು, ಪೊಲ್ಲಾಚಿ ಮತ್ತು ನಾಗರ್ಕೋಯಿಲ್ ಸೇರಿದಂತೆ ಆರು ಕೋಮು ಸೂಕ್ಷ್ಮ ಸ್ಥಳಗಳಲ್ಲಿ ಮೆರವಣಿಗೆಗೆ ನ್ಯಾಯಾಲಯ ಅನುಮತಿ ನಿರಾಕರಿಸಿದೆ.
ಗುಪ್ತಚರ ಸಂಸ್ಥೆಗಳ ವರದಿಗಳಲ್ಲಿ ವ್ಯತಿರಿಕ್ತವಾಗಿ ಏನೂ ಕಂಡುಬಂದಿಲ್ಲ ಎಂದು ತೀರ್ಪು ನೀಡಿದ ನ್ಯಾಯಾಲಯ, ಎರಡು ತಿಂಗಳ ನಂತರ ಇತರ ಆರು ಸ್ಥಳಗಳಲ್ಲಿ ಮೆರವಣಿಗೆಗೆ ಅನುಮತಿ ಪಡೆಯಲು ಆರ್ಎಸ್ಎಸ್ಗೆ ಅನುಮತಿ ನೀಡಿದೆ.
ಕೊಯಮತ್ತೂರು ಇತ್ತೀಚೆಗೆ ದೀಪಾವಳಿಯ ಒಂದು ದಿನದ ಮೊದಲು ಕಾರ್ ಸ್ಫೋಟಕ್ಕೆ ಸಾಕ್ಷಿಯಾಗಿತ್ತು, ಇದರಲ್ಲಿ ಜಮೀಶಾ ಮುಬಿನ್ ಎಂಬ ಉಗ್ರ ನಂಟು ಹೊಂದಿದ್ದವ ಸಾವನ್ನಪ್ಪಿದ್ದ. ಷ್ಟ್ರೀಯ ತನಿಖಾ ಸಂಸ್ಥೆಯು ಈ ಪ್ರಕರಣದ ತನಿಖೆ ನಡೆಸುತ್ತಿದೆ.
ಈ ಹಿಂದೆ ಆರ್ಎಸ್ಎಸ್ ಸಂಘಟನೆಯು ಕೋರಿದ್ದ 50 ಸ್ಥಳಗಳ ಪೈಕಿ ಮೂರರಲ್ಲಿ ಮಾತ್ರ ಮೆರವಣಿಗೆಗೆ ರಾಜ್ಯ ಸರಕಾರ ಅನುಮತಿ ನೀಡಿತ್ತು. ನಂತರ ಆರ್ಎಸ್ಎಸ್ ಕೋರ್ಟ್ ಗೆ ನಿಂದನೆ ಅರ್ಜಿಯನ್ನು ಸಲ್ಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ