ಮುಂಬಯಿಯಲ್ಲಿ HDFC ಉಪಾಧ್ಯಕ್ಷ ನಾಪತ್ತೆ; ಪರಿತ್ಯಕ್ತ ಕಾರು ಪತ್ತೆ
Team Udayavani, Sep 8, 2018, 12:28 PM IST
ಮುಂಬಯಿ : ಎಚ್ ಡಿ ಎಫ್ ಸಿ ಬ್ಯಾಂಕಿನ ಉಪಾಧ್ಯಕ್ಷ ಸಿದ್ಧಾರ್ಥ ಕಿರಣ್ ಸಾಂಘವಿ ಅವರು ಸೆ.5ರ ಬುಧವಾರದಿಂದ ನಗರದ ಕಮಲಾ ಮಿಲ್ಸ್ ಪ್ರದೇಶದಲ್ಲಿನ ತಮ್ಮ ಕಚೇರಿಯಿಂದ ನಾಪತ್ತೆಯಾಗಿದ್ದು ಅವರನ್ನು ಹುಡುಕುವ ಪೊಲೀಸರ ಯತ್ನಕ್ಕೆ ಈ ತನಕ ಯಾವುದೇ ಯಶಸ್ಸು ಸಿಕ್ಕಿಲ್ಲ ಎಂದು ವರದಿಯಾಗಿದೆ.
ಸೆ.6ರ ಗುರುವಾರದಂದು ನವೀ ಮುಂಬಯಿಯ ಕೋಪರ್ ಖೈರ್ನೆ ಪ್ರದೇಶದಲ್ಲಿ ಸಿದ್ಧಾರ್ಥ ಅವರ ಪರಿತ್ಯಕ್ತ ಕಾರನ್ನು ಪೊಲೀಸರು ಪತ್ತೆ ಮಾಡಿದ್ದರು. ಎನ್ಎಂ ಜೋಷಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ನಾಪತ್ತೆಯ ಕೇಸನ್ನು ದಾಖಲಿಸಿಕೊಂಡಿದ್ದರು.
ಇಂಡಿಯನ್ ಎಕ್ಸ್ಪ್ರೆಸ್ ವರದಿಯ ಪ್ರಕಾರ ಸಿದ್ಧಾರ್ಥ ಅವರು ಸೆ.5ರಂದು ಬೆಳಗ್ಗೆ 8.30ಕ್ಕೆ ತಮ್ಮ ಮನೆಯಿಂದ ಆಫೀಸಿಗೆ ಹೋಗಿದ್ದರು; ರಾತ್ರಿ 7.30ಕ್ಕೆ ಅಲ್ಲಿ ಮನೆಗೆ ಹೊರಟಿದ್ದರು. ವರದಿಯ ಪ್ರಕಾರ ನವೀ ಮುಂಬಯಿಯಲ್ಲಿ ಪತ್ತೆಯಾಗಿದ್ದ ಸಿದ್ಧಾರ್ಥ ಅವರ ಪರಿತ್ಯಕ್ತ ಕಾರಿನ ಸೀಟಿನಲ್ಲಿ ರಕ್ತದ ಕಲೆಗಳು ಇದ್ದವು.
ಇನ್ನೊಂದು ವರದಿಯ ಪ್ರಕಾರ ಸಿದ್ಧಾರ್ಥ ಅವರ ಕಾರಿನಲ್ಲಿ ಬೇರೋಬ್ಬ ವ್ಯಕ್ತಿ ಇದ್ದ ಎಂದು ಪೊಲೀಸರು ಶಂಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ