ಫೇಲ್ ಆಗಿದ್ದಕ್ಕೆ ಜಾಹೀರಾತು ಕಾರಣವಂತೆ! 75 ಲಕ್ಷ ಪರಿಹಾರ ಕೋರಿ ಸುಪ್ರೀಂ ಮೆಟ್ಟಿಲೇರಿದ ಯುವಕ
ಜಾಹೀರಾತು ಇಷ್ಟವಿಲ್ಲದಿದ್ದರೆ ನೋಡಲೇಬೇಡಿ ಎಂದ ಕೋರ್ಟ್
Team Udayavani, Dec 10, 2022, 7:45 AM IST
ನವದೆಹಲಿ:“ಯೂಟ್ಯೂಬ್ನಲ್ಲಿ ಜಾಹೀರಾತು ನೋಡಲು ಇಷ್ಟವಿಲ್ಲದಿದ್ದರೆ ನೋಡುವುದೇ ಬೇಡ’. ಹೀಗೆಂದು ಹೇಳಿದ್ದು ಸುಪ್ರೀಂಕೋರ್ಟ್ನ ನ್ಯಾ.ಸಂಜಯ ಕಿಶನ್ ಕೌಲ್ ಮತ್ತು ನ್ಯಾ.ಎ.ಎಸ್.ಓಕಾ ನೇತೃತ್ವದ ನ್ಯಾಯಪೀಠ. ಜತೆಗೆ ಅರ್ಜಿದಾರರಿಗೆ 25 ಸಾವಿರ ರೂ. ದಂಡವನ್ನೂ ವಿಧಿಸಿದೆ.
ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ನಿಟ್ಟಿನಲ್ಲಿ ಆನಂದ್ ಕಿಶೋರ್ ಚೌಧರಿ ಎಂಬವರು ಯೂಟ್ಯೂಬ್ನಲ್ಲಿ ಲಭ್ಯವಿರುವ ಅಧ್ಯಯನ ವಿಡಿಯೋಗಳನ್ನು ನೋಡಿ ಸಿದ್ಧತೆ ನಡೆಸಿದ್ದರು. ಆದರೆ, ಅವರು ಪರೀಕ್ಷೆ ಬರೆದರೂ ಅದರಲ್ಲಿ ಉತ್ತೀರ್ಣರಾಗಿರಲಿಲ್ಲ. ಯೂಟ್ಯೂಬ್ನಲ್ಲಿ ಇರುವ ಹೆಚ್ಚಿನ ಪ್ರಮಾಣದ ಜಾಹೀರಾತಿನಿಂದಲೇ ತನಗೆ ತೇರ್ಗಡೆಯಾಗಲು ಅಸಾಧ್ಯವಾಯಿತು.
ಹೀಗಾಗಿ, ಗೂಗಲ್ ವತಿಯಿಂದ ನನಗೆ 75 ಲಕ್ಷ ರೂ. ಪರಿಹಾರ ಕೊಡಿಸಬೇಕು ಎಂದು ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಪೀಠ “ನಿಮಗೆ ಮನಸ್ಸಿಲ್ಲದಿದ್ದರೆ ಜಾಹೀರಾತು ನೋಡಬೇಡಿ. ಏಕಾಗ್ರತೆ ಸಾಧಿಸಲು ಸಾಧ್ಯವಿಲ್ಲ ಎಂದಾದರೆ ಅದು ಬೇಕೆ? ಇಂಥ ಅರ್ಜಿಗಳು ನ್ಯಾಯಾಂಗದ ಸಮಯ ಹಾಳು ಮಾಡುತ್ತವೆ. ಈ ಅರ್ಜಿಯನ್ನು ತಿರಸ್ಕರಿಸುತ್ತೇವೆ ಮತ್ತು ಅರ್ಜಿದಾರರು 4 ವಾರಗಳ ಒಳಗಾಗಿ 25 ಸಾವಿರ ರೂ. ದಂಡವನ್ನು ನ್ಯಾಯಾಲಯದ ಮಧ್ಯಸ್ಥಿಕೆ ಕೇಂದ್ರಕ್ಕೆ ಜಮೆ ಮಾಡಬೇಕು’ ಎಂದು ತೀರ್ಪು ನೀಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ