ಅತ್ತಿಗೆಯನ್ನು ಕೊಂದು ಶವ ವಿಲೇವಾರಿಗೆ ಕ್ಯಾಬ್ ಬುಕ್ ಮಾಡಿದ ಮೈದುನ… ಮುಂದೆ ನಡೆದದ್ದೇ ಬೇರೆ


Team Udayavani, Jul 17, 2023, 2:36 PM IST

ಅತ್ತಿಗೆಯನ್ನು ಕೊಂದು ಶವ ವಿಲೇವಾರಿಗೆ ಕ್ಯಾಬ್ ಬುಕ್ ಮಾಡಿದ ಮೈದುನ… ಮುಂದೆ ನಡೆದದ್ದೇ ಬೇರೆ

ಕಾನ್ಪುರ: ನಲ್ವತ್ತು ಕೋಟಿ ರೂಪಾಯಿ ಆಸ್ತಿ ಆಸೆಗಾಗಿ ಮೈದುನನೊಬ್ಬ ತನ್ನ ಸಂಬಂಧಿಕರ ಜೊತೆಗೂಡಿ ಅತ್ತಿಗೆಯನ್ನೇ ಕೊಲೆಗೈದು ಮೃತದೇಹ ವಿಲೇವಾರಿಗೆ ಬಾಡಿಗೆ ಕಾರು ಬುಕ್ ಮಾಡಿದ್ದು ಬಾಡಿಗೆ ಕಾರು ಚಾಲಕ ಮಾಡಿದ ಈ ಒಂದು ಕೆಲಸದಿಂದ ನಲ್ವತ್ತು ಕೋಟಿ ರುಪಾಯಿಗೆ ಆಸೆ ಪಟ್ಟ ಮೈದುನ ಇದೀಗ ಠಾಣೆಯಲ್ಲಿ ಕಂಬಿ ಎಣಿಸುತ್ತಿದ್ದಾನೆ.

ಏನಿದು ಪ್ರಕರಣ:
ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿ ಮೈದುನನೊಬ್ಬ ತನ್ನ ಅತ್ತಿಗೆಯನ್ನೇ ಕೊಲೆಗೈದಿದ್ದಾನೆ. ಇದಾದ ಬಳಿಕ ಮೃತ ದೇಹವನ್ನು ವಿಲೇವಾರಿ ಮಾಡಲು ವಾಹನ ಬೇಕಾಗಿರುವುದರಿಂದ ಓಲಾ ಕ್ಯಾಬ್ ಬುಕ್ ಮಾಡಿದ್ದಾನೆ. ಕಾರು ಬುಕ್ ಮಾಡಿದ ಜಾಗಕ್ಕೆ ಓಲಾ ಕಾರು ಬಂದಿದೆ ಈ ವೇಳೆ ಆರೋಪಿ ಮೈದುನ ತನ್ನ ಅತ್ತಿಗೆಯ ಮೃತ ದೇಹವನ್ನು ಒಂದು ಗೋಣಿ ಚೀಲದಲ್ಲಿ ತುಂಬಿಸಿ ಕಾರಿನಲ್ಲಿ ಸಾಗಿಸುವ ಯೋಚನೆ ಮಾಡಿದ್ದಾನೆ ಅದರಂತೆ ಕಾರು ಬರುವ ಮೊದಲು ತನ್ನ ಇನ್ನೋರ್ವ ಸಂಬಂಧಿಯ ಜೊತೆಗೂಡಿ ಮೃತದೇಹವನ್ನು ಚೀಲಕ್ಕೆ ತುಂಬಿಸಿ ವಿಲೇವಾರಿಗೆ ತಯಾರು ಮಾಡಿ ಇಟ್ಟಿದ್ದಾರೆ. ಕಾರು ಚಾಲಕ ಬಂದ ವೇಳೆ ಕಾರಿನ ಡಿಕ್ಕಿ ತೆರೆದು ಅದರೊಳಗೆ ಮೃತದೇಹವಿದ್ದ ಚೀಲವನ್ನು ತುಂಬಿಸಿದ್ದಾನೆ ಇದನ್ನು ಕಂಡ ಚಾಲಕನಿಗೆ ಏನೋ ಅನುಮಾನವಾಗಿದೆ ಅಲ್ಲದೆ ಇಬ್ಬರೂ ಯುವಕರ ಮುಖದಲ್ಲಿ ಬೆವರು ಸುರಿಯುತ್ತಿತ್ತು ಅಲ್ಲದೆ ಗಾಬರಿಗೊಂಡಿದ್ದರು, ಅಷ್ಟರಲ್ಲೇ ಚಾಲಕನಿಗೆ ಡಿಕ್ಕಿಗೆ ತುಂಬಿಸಿದ ಚೀಲದಲ್ಲಿ ರಕ್ತದ ಕಲೆ ಕಾಣಿಸಿದೆ. ಇದರಿಂದ ಎಚ್ಚೆತ್ತುಕೊಂಡ ಚಾಲಕ ಬಾಡಿಗೆಯನ್ನು ಆಪ್ ಮೂಲಕ ಕ್ಯಾನ್ಸಲ್ ಮಾಡಿ ಡಿಕ್ಕಿಯಲ್ಲಿದ್ದ ಚೀಲವನ್ನು ತೆಗೆಯುವಂತೆ ಹೇಳಿದ್ದಾನೆ ಇದಕ್ಕೆ ಒಪ್ಪದಿದ್ದ ಯುವಕರು ಹೆಚ್ಚು ದುಡ್ಡು ನೀಡುವುದಾಗಿ ಚಾಲಕನಿಗೆ ಆಮಿಷ ಒಡ್ಡಿದ್ದಾರೆ ಆದರೆ ಇದ್ಯಾವುದಕ್ಕೂ ಜಗ್ಗದ ಚಾಲಕ ಡಿಕ್ಕಿಯಲ್ಲಿದ್ದ ಚೀಲವನ್ನು ತೆಗೆಯುವಂತೆ ಹೇಳಿ ಅಲ್ಲಿಂದ ತೆರಳಿದ್ದಾನೆ. ಅಲ್ಲೇ ಸ್ವಲ್ಪ ಮುಂದೆ ಹೋದ ಚಾಲಕ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾನೆ ಅಷ್ಟು ಮಾತ್ರವಲ್ಲದೆ ಗಸ್ತು ತಿರುಗುತ್ತಿದ್ದ ಪೊಲೀಸರಿಗೂ ಮಾಹಿತಿ ನೀಡಿದ್ದಾನೆ.

ಚಾಲಕನ ಮಾಹಿತಿಯಿಂದ ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ಚಾಲಕ ಹೇಳಿದ ವಿಳಾಸಕ್ಕೆ ತೆರಳಿ ಯುವಕರನ್ನು ವಿಚಾರಣೆ ನಡೆಸಿದ್ದಾರೆ ಈ ವೇಳೆ ಗಾಬರಿಗೊಂಡ ಯುವಕರು ತಾವು ಮಾಡಿದ ಕೃತ್ಯವನ್ನು ಬಾಯಿ ಬಿಟ್ಟಿದ್ದಾರೆ. ಕೂಡಲೇ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ಮಹಿಳೆಯ ಮೃತದೇಹವನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ಸಾಗಿಸಿದ್ದಾರೆ.

ಜುಲೈ 11 ರಂದು ಈ ಘಟನೆ ನಡೆದಿದ್ದು ನೋಯ್ಡಾದಿಂದ ಕಾನ್ಪುರದ ಮಹಾರಾಜಪುರಕ್ಕೆ ತೆರಳಲು ಕಾರು ಬುಕ್ ಮಾಡಿದ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ. ಸಧ್ಯ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ವಶಕ್ಕೆ ಪಡೆದುಕೊಂಡಿದ್ದು ತನಿಖೆ ಮುಂದುವರೆದಿದೆ.

ಇದನ್ನೂ ಓದಿ: Chikkamagaluru; ಮಹಿಳೆಯ ಅನುಮಾನಾಸ್ಪದ ಸಾವು: ಎಸ್ಪಿ ಕಚೇರಿಯ ಮುಂದೆ ಗೋಳಾಡಿದ ಕುಟುಂಬ

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.