ರಾಹುಲ್ ನಿರ್ಣಾಯಕ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ
Team Udayavani, Mar 19, 2017, 3:50 AM IST
ಹೊಸದಿಲ್ಲಿ: ಚುನಾವಣೆಗಳಲ್ಲಿ ಪದೇ ಪದೆ ಎಡವುತ್ತಿರುವ ಕಾಂಗ್ರೆಸ್ನಲ್ಲಿ ಅಮೂಲಾಗ್ರ ಬದಲಾಣೆಗೆ ಆಗ್ರಹಗಳು ಕೇಳಿಬರುತ್ತಿರುವಂತೆಯೇ, ಇವುಗಳ ಬಗ್ಗೆ ನಿರ್ಣಾಯಕ ನಿರ್ಧಾರಗಳನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರೇ ಕೈಗೊಳ್ಳಬೇಕು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಉತ್ತರಾಖಂಡ, ಉತ್ತರಪ್ರದೇಶದಲ್ಲಿ ಪಕ್ಷದ ಸೋಲಿನ ಕುರಿತಂತೆ ಇಂಡಿಯನ್ ಎಕ್ಸ್ಪ್ರೆಸ್ ಐಡಿಯಾ ಎಕ್ಸ್ಚೇಂಜ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮಗೀಗ ಹೊಸ ಕಾಂಗ್ರೆಸ್ ಬೇಕಾಗಿದೆ. ಹೊಸ ದಾರಿ, ಹೊಸ ರೀತಿಯ, ಹೊಸ ಪ್ರಚಾರ ಕಾರ್ಯ, ಹೊಸ ಆಲೋಚನೆಗಳುಳ್ಳ ಪಕ್ಷ ಬೇಕಾಗಿದೆ. ಆದರೆ ಈ ವಿಚಾರದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ನಿರ್ಣಾಯಕ ತೀರ್ಮಾನಗಳನ್ನು ಕೈಗೊಳ್ಳುತ್ತಿಲ್ಲ. ಕಾಂಗ್ರೆಸ್ ಪಾಲಿಗೆ ರಾಹುಲ್ ಅವರಿಗಿಂತ ಸೂಕ್ತ ವ್ಯಕ್ತಿ ಬೇರಾರೂ ಇಲ್ಲ. ರಾಹುಲ್ ತಕ್ಕ ನಿರ್ಣಯ ಕೈಗೊಳ್ಳುತ್ತಿಲ್ಲ ಎಂಬುದೇ ನನ್ನ ದೂರು. ನನ್ನ ಈ ಮಾತುಗಳನ್ನು ಪದೇ ಪದೆ ಕೇಳಿ ಕೆಲವೊಮ್ಮೆ ಅವರು ಕೋಪಗೊಂಡಿದ್ದೂ ಇದೆ ಎಂದು ದಿಗ್ವಿಜಯ್ ಹೇಳಿದ್ದಾರೆ.
2014 ಚುನಾವಣೆ ಬಳಿಕ ಎ.ಕೆ.ಆ್ಯಂಟನಿ ಸಮಿತಿ ಕಾಂಗ್ರೆಸ್ ಸುಧಾರಣೆ ಕುರಿತಾಗಿ ಕೊಟ್ಟ ವರದಿಯೂ ಅನುಷ್ಠಾನಗೊಂಡಿಲ್ಲ ಎಂಬುದನ್ನು ಅವರು ಬೊಟ್ಟುಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ