ಹಿಂದೂ ಸೇನಾದ ತೆರವು ಬೆದರಿಕೆ : ಶಹೀನಾ ಬಾಘ್ ನಲ್ಲಿ ಪೊಲೀಸ್ ಸರ್ಪಗಾವಲು
Team Udayavani, Mar 1, 2020, 2:19 PM IST
ನವದೆಹಲಿ: ಇಲ್ಲಿನ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಸಮೀಪವಿರುವ ಶಹೀನ್ ಬಾಘ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಕಳೆದ ಡಿಸೆಂಬರ್ 15ರಿಂದ ನಡೆಯುತ್ತಿರುವ ಪ್ರತಿಭಟನೆಯನ್ನು ನಿಲ್ಲಿಸಿ ಪ್ರತಿಭಟನಾ ಸ್ಥಳವನ್ನು ತೆರವುಗೊಳಿಸಲು ಹಿಂದು ಸೇನಾ ಸಂಘಟನೆಯೊಂದು ಮಾರ್ಚ್ 1ಕ್ಕೆ ಅಂತಿಮ ಗಡು ನೀಡಿದ್ದ ಹಿನ್ನಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಈ ಪ್ರದೇಶದಲ್ಲಿ ಇಂದು ಪೊಲೀಸ್ ಸರ್ಪಗಾವಲನ್ನು ಹಾಕಲಾಗಿದೆ.
ಕಳೆದ ಎರಡು ತಿಂಗಳುಗಳಿಂದ ಶಹೀನಾಬಾಘ್ ರಸ್ತೆಯಲ್ಲಿ ಸಾವಿರಾರು ಪ್ರತಿಭಟನಾಕಾರರು ನಿರಂತರ ಪ್ರತಿಭಟನೆ ನಡೆಸುತ್ತಿದ್ದು ಇವರಲ್ಲಿ ಹೆಚ್ಚಿನವರು ಮಹಿಳೆಯರೇ ಆಗಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಹಿಂದೂ ಸೇನಾ ಎಂಬ ಬಲಪಂಥೀಯ ಸಂಘಟನೆಯೊಂದು ಶಹೀನಾ ಬಾಘ್ ರಸ್ತೆಯನ್ನು ಮಾರ್ಚ್ 1ರ ಒಳಗಾಗಿ ತೆರವುಗೊಳಿಸುವಂತೆ ಪ್ರತಿಭಟನಾಕಾರರಿಗೆ ಅಂತಿಮ ಗಡುವನ್ನು ವಿಧಿಸಿತ್ತು.
ಆದರೆ ಪೊಲೀಸರ ಒತ್ತಡಕ್ಕೆ ಮಣಿದು ಇಂದು ನಡೆಸಲುದ್ದೇಶಿಸಿದ್ದ ಪ್ರತಿಭಟನೆಯನ್ನು ಹಿಂದೆ ಪಡೆದುಕೊಂಡಿರುವುದಾಗಿ ಹಿಂದೂ ಸೇನಾ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಆದರೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಈ ಪ್ರದೇಶದಲ್ಲಿ ಇದೀಗ ಬಿಗು ಬಂದೋಬಸ್ತ್ ಏರ್ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು