ದಿಲ್ಲಿಯಲ್ಲಿ ಭಾರಿ ಮಳೆಗೆ ಇಬ್ಬರು ಬಲಿ: ಮೋರಿಯಲ್ಲಿ ಕೊಚ್ಚಿಹೋದ ಮನೆ!
Team Udayavani, Jul 19, 2020, 3:27 PM IST
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಭಾರಿ ಮಳೆಯಾಗುತ್ತಿದೆ. ವರುಣನ ಆರ್ಭಟಕ್ಕೆ ರಾಜಧಾನಿಯ ಜನತೆ ಕಂಗಾಲಾಗಿದೆ. ಭಾರಿ ಮಳೆ ಸುರಿದ ಪರಿಣಾಮ ರಸ್ತೆಯೊಂದು ಕುಸಿದು, ಮನೆಯೊಂದು ಕೊಚ್ಚಿಹೋದ ಘಟನೆ ರವಿವಾರ ನಡೆದಿದೆ.
ದಿಲ್ಲಿ, ಅಸ್ಸಾಂ, ಬಿಹಾರ, ಒರಿಸ್ಸಾ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕೋವಿಡ್ ಸೋಂಕಿನ ಆರ್ಭಟಕ್ಕೆ ನಲುಗಿದ್ದ ಜನತೆ ಈಗ ಮಳೆಯ ಆರ್ಭಟಕ್ಕೆ ತತ್ತರಿಸುತ್ತಿದ್ದಾರೆ.
ರಸ್ತೆಯಲ್ಲಿ ಮಳೆ ನೀರು ಚರಂಡಿಯಂತೆ ತುಂಬಿ ಹರಿಯುತ್ತಿದೆ. ಕಾರು, ಟ್ಯಾಕ್ಸಿ ವಾಹನಗಳು ನೀರಿನಲ್ಲಿ ಮುಳುಗುತ್ತಿದೆ. ದಿಲ್ಲಿಯಲ್ಲಿ ಮಳೆಯ ಕಾರಣದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಮಿಂಟೋ ಸೇತುವೆ ಬಳಿ ಒಬ್ಬರ ಶವ ಪತ್ತೆಯಾಗಿದೆ. ಮತ್ತೊಬ್ಬರು ಜಹಾಗಿರ್ ಪುರ ಪ್ರದೇಶದಲ್ಲಿ ಸಾವನ್ನಪ್ಪಿದ್ದಾರೆ.
ಮಳೆಯ ನೀರಿನ ರಭಸಕ್ಕೆ ರಸ್ತೆಯೊಂದು ಬಾಯ್ತೆರೆದಿದೆ. ಇದರ ಪಕ್ಕದಲ್ಲಿದ್ದ ಮನೆಯೊಂದು ಕುಸಿದು ಆ ಗುಂಡಿಯೊಳಗೆ ಬಿದ್ದಿದೆ. ಅಣ್ಣಾ ನಗರ ಸ್ಲಮ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇರದ ಕಾರಣ ಯಾವುದೇ ರೀತಿಯ ಜೀವಹಾನಿ ಸಂಭವಿಸಿಲ್ಲ ಎನ್ನಲಾಗಿದೆ.
No, it’s not Bihar, this is our national capital New Delhi after merely two hours of heavy rainfall. One person drowned at Minto Road, houses washed away in sink hole near ITO, neck deep waterlogged streets. It was supposed to be a ‘ world class city’!#DelhiRains #DelhiDrowns pic.twitter.com/y4QA6OfCbA
— Abhishek Anand (@abhishekanandji) July 19, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ