ಕೇರಳದಲ್ಲಿ ಮಳೆಗೆ ಒಂದೇ ದಿನ 6 ಸಾವು: ನಾಳೆ 10 ಜಿಲ್ಲೆಗಳಿಗೆ ರೆಡ್ ಅಲರ್ಟ್
ನೀರಿನ ಹರಿವಿನಲ್ಲಿ ಸಿಲುಕಿದ ಆನೆ: ವಿಡಿಯೋ ವೈರಲ್
Team Udayavani, Aug 2, 2022, 8:22 PM IST
ತಿರುವನಂತಪುರಂ: ಕೇರಳದಾದ್ಯಂತ ಮಂಗಳವಾರ ಸುರಿದ ಮುಸಲಧಾರೆಯಿಂದ ಹಲವೆಡೆ ಭೂಕುಸಿತಗಳು ಸಂಭವಿಸಿದ್ದು, ನದಿಗಳ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದೆ. ಮಳೆ ಸಂಬಂಧಿ ಘಟನೆಗಳಿಗೆ ಒಂದೇ ದಿನ 6 ಮಂದಿ ಬಲಿಯಾಗಿದ್ದು, 3 ಮಂದಿ ನಾಪತ್ತೆಯಾಗಿದ್ದಾರೆ. ನಿರಂತರ ಮಳೆ ಸುರಿಯುತ್ತಿದ್ದು, ಬುಧವಾರವೂ ತಿರುವನಂತಪುರಂ, ಕೊಲ್ಲಂ, ಪಟ್ಟಣಂತಿಟ್ಟ, ಕಾಸರಗೋಡು ಸೇರಿದಂತೆ 10 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಸಾವಿರಾರು ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ, ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಆ.5ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ವರುಣನ ಅಬ್ಬರ, ದಿಢೀರ್ ಪ್ರವಾಹ, ಭೂಕುಸಿತದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು 95 ಪರಿಹಾರ ಶಿಬಿರಗಳನ್ನು ಸ್ಥಾಪಿಸಿದೆ. ಜು.31ರಿಂದ ಆ.2ರವರೆಗೆ ಅಂದರೆ 3 ದಿನಗಳಲ್ಲಿ ಒಟ್ಟು 12 ಮಂದಿ ಸಾವಿಗೀಡಾಗಿದ್ದು, 126 ಮನೆಗಳಿಗೆ ಹಾನಿಯಾಗಿವೆ. 27 ಮನೆಗಳು ಸಂಪೂರ್ಣವಾಗಿ ನಾಶವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಕಾಮನ್ವೆಲ್ತ್ ಗೇಮ್ಸ್: ಉದ್ದಜಿಗಿತ: ಮುರಳಿ ಶ್ರೀಶಂಕರ್, ಯಾಹಿಯ ಫೈನಲ್ಗೆ
ನೀರಿನ ಹರಿವಿನಲ್ಲಿ ಸಿಲುಕಿದ ಆನೆ: ವಿಡಿಯೋ ವೈರಲ್
ರಾತ್ರಿಪೂರ್ತಿ ಮಳೆಯಾದ ಕಾರಣ ತ್ರಿಶೂರ್ ಜಿಲ್ಲೆಯ ಚಾಲಕುಡಿ ನದಿಯ ನೀರಿನ ಮಟ್ಟ 5 ಅಡಿ ಏರಿಕೆಯಾಗಿದೆ. ಮಂಗಳವಾರ ಬೆಳಗ್ಗೆ ನದಿ ದಾಟುವ ಪ್ರಯತ್ನದಲ್ಲಿದ್ದ ಆನೆಯೊಂದು ನೀರಿನ ಹರಿವಿನಲ್ಲಿ ಸಿಲುಕಿ ಬಹಳ ಹೊತ್ತು ಒದ್ದಾಡಿದ ದೃಶ್ಯಗಳು ವೈರಲ್ ಆಗಿವೆ. ನೀರಿನಲ್ಲಿ ಕೊಚ್ಚಿಹೋದ ಆನೆ ಕೊನೆಗೆ ಒಂದು ಮರದಡಿ ಆಶ್ರಯ ಪಡೆದು, ಹರಸಾಹಸ ಪಟ್ಟು ದಡ ಸೇರಿ ಬಚಾವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
MUST WATCH
ಹೊಸ ಸೇರ್ಪಡೆ
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ