ಭಾರೀ ಮಳೆ ಮುನ್ಸೂಚನೆ: ನೌಕಾದಳ ಸರ್ವ ಸನ್ನದ್ಧ
Team Udayavani, Oct 6, 2018, 7:19 AM IST
ಕೊಚ್ಚಿ: ಅರಬೀ ಸಮುದ್ರದಲ್ಲಿ ಉಂಟಾಗಿರುವ ವಾಯು ಭಾರ ಕುಸಿತದಿಂದ ಚಂಡ ಮಾರುತ ಸೃಷ್ಟಿಯಾಗಿ ಭಾರೀ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿರುವುದರಿಂದ ಕೇರಳದಾದ್ಯಂತ ಕಟ್ಟೆಚ್ಚರ ವಹಿಸಲಾಗು ತ್ತಿದೆ. ನೌಕಾದಳ ಸರ್ವ ಸನ್ನದ್ಧ ವಾಗಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.
ಹವಾಮಾನ ಇಲಾಖೆ ರೆಡ್ಅಲರ್ಟ್ ಘೋಷಿಸಿರುವುದರಿಂದ ನೌಕಾದಳವು ಹಿಂದಿ, ಇಂಗ್ಲಿಷ್, ಮಲಯಾಳಂ ಮತ್ತು ತೆಲುಗು ಭಾಷೆಗಳಲ್ಲಿ ಎಚ್ಚರಿಕೆ ಗಳನ್ನು ಬಿತ್ತರಿಸಲಾರಂಭಿಸಿದೆ. ನೌಕಾದಳದ ಹಡಗು, ವಿಮಾನಗಳು ತುರ್ತು ಸಂದರ್ಭಕ್ಕೆ ಸ್ಪಂದಿಸಲು ಕೇರಳ ಮತ್ತು ಲಕ್ಷದ್ವೀಪಗಳ ಕಿನಾರೆಯಲ್ಲಿ ಸಿದ್ಧವಾಗಿ ನಿಂತಿವೆ ಎಂದು ವಕ್ತಾರರು ವಿವರಿಸಿದ್ದಾರೆ.
ವಾಯುಭಾರ ಕುಸಿತ
ಅರಬಿ ಸಮುದ್ರದಲ್ಲಿ ಉಂಟಾಗಿದ್ದ ನಿಮ್ನ ಒತ್ತಡವು ಮತ್ತಷ್ಟು ತೀವ್ರಗೊಂಡು ವಾಯುಭಾರ ಕುಸಿತವಾಗಿ ಮಾರ್ಪಟ್ಟಿದೆ. ಇದು ಮುಂದಿನ 36 ಗಂಟೆಗಳಲ್ಲಿ ಚಂಡ ಮಾರುತವಾಗಲಿದೆ. ಅನಂತರ ಅದು ಒಮಾನ್ ಕರಾವಳಿಯತ್ತ ಸಾಗಿದರೂ ಇದರಿಂದಾಗಿ ಕೇರಳ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಸಿಡಿಲು, ಗಾಳಿ ಸಹಿತ ಭಾರೀ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
MUST WATCH
ಹೊಸ ಸೇರ್ಪಡೆ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ