ಭಾರೀ ಮಳೆ ಹಿನ್ನಲೆ: ಮುಂಬಯಿ ಶಾಲಾ, ಕಾಲೇಜುಗಳಿಗೆ ರಜೆ
Team Udayavani, Sep 19, 2019, 8:00 AM IST
ಮುಂಬೈ: ಭಾರೀ ಮಳೆಯಿಂದ ತತ್ತರಿಸಿ ಹೋಗಿರುವ ಮುಂಬೈನಲ್ಲಿ ಇಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ವರುಣಾಘಾತ ಹಿನ್ನಲೆ ಹವಾಮಾನ ಇಲಾಖೆ ಮುಂಬೈ ಮತ್ತು ಸುತ್ತಮುತ್ತಲಿನ ನಗರಗಳಿಗೆ ರೆಡ್ ಅಲರ್ಟ್ ಘೋಷಣೇ ಮಾಡಿದ್ದು, ಮಳೆ ಕೊರತೆ ಎದುರಿಸುತ್ತಿರುವ ಲಾತೂರ್, ಬೀಢ್ ಮತ್ತು ನಾಂದೇಡ್ ಪ್ರದೇಶಗಳಿಗೂ ಸಹ ಹವಾಮಾನ ಇಲಾಖೆ ‘ಹಳದಿ ಎಚ್ಚರಿಕೆ’ ನೀಡಿದೆ. ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಇಲಾಖೆ ಎಚ್ಚರಿಕೆ ಸೂಚನೆಯನ್ನು ರವಾನಿಸಿದೆ.
ಇತರ ಕಡೆಗಳಲ್ಲಿ ಪರಿಸ್ಥಿತಿ ಅವಲೋಕಿಸಿಕೊಂಡು ರಜೆ ನೀಡುವಂತೆ ಜಿಲ್ಲಾಡಳಿತಕ್ಕೆ ಮಹಾ ರಾಷ್ಟ್ರ ಶಿಕ್ಷಣ ಸಚಿವ ಆಶೀಶ್ ಶೆ್ಲ್ಲಾರ್ ಸೂಚನೆ ನೀಡಿದ್ದಾರೆ.
ವಾಣಿಜ್ಯ ನಗರಿಯಲ್ಲಿ ಈ ಬಾರಿ ಸಮೃದ್ಧ ಮಳೆಯಾಗಿದೆ. ಸೆಪ್ಟಂಬರ್ ತಿಂಗಳಲ್ಲಿ ಇಲ್ಲಿಯವರೆಗೆ ನಗರದಲ್ಲಿ 915 ಮಿಲಿ ಮೀಟರ್ ಮಳೆಯಾಗಿರುವುದು ದಾಖಲೆಯಾಗಿದೆ. ಈ ಮುಂಗಾರು ಋತುವಿನಲ್ಲಿ ಮುಂಬಯಿ ನಗರದಲ್ಲಿ ಒಟ್ಟಾರೆಯಾಗಿ 2366 ಮಿಲಿಮೀಟರ್ ಮಳೆಯಾಗಿದ್ದು ಇದು ನಗರದಲ್ಲಿ ಪ್ರತೀವರ್ಷ ಸುರಿಯುವ ಸರಾಸರಿ ಮಳೆಗಿಂತ (1800 ಮಿ.ಮಿ.) 26 ಪ್ರತಿಶತ ಅಧಿಕವಾಗಿದೆ.
In view of heavy rainfall forecasts. As a precautionary measure, holiday is declared for all schools & junior colleges in Mumbai, Thane, Konkan region for today 19 Sep 2019. District collectors in other parts of Maharashtra to decide, based on local conditions. #rain
— ashish shelar (@ShelarAshish) September 18, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?