ಅಸ್ಸಾಂ ಭಾರೀ ಮಳೆ: ಆಸ್ಪತ್ರೆಗೂ ನೀರು; ರಸ್ತೆಯಲ್ಲೇ ಕೀಮೋ ಥೆರಪಿ
Team Udayavani, Jun 28, 2022, 1:06 AM IST
ಗುವಾಹಾಟಿ: ಅಸ್ಸಾಂನಲ್ಲಿ ಭಾರೀ ಮಳೆ ಯಿಂದಾಗಿ ಪ್ರವಾಹ ಸ್ಥಿತಿ ಇನ್ನೂ ಮುಂದುವರಿದಿದೆ.
ನೆರೆಯಿಂದಾಗಿ ಕಾಚಾರ್ ಜಿಲ್ಲೆಯ ಕಾಚಾರ್ ಕ್ಯಾನ್ಸರ್ ಆಸ್ಪತ್ರೆಯೂ ಜಲಾವೃತವಾಗಿದೆ. ಇದರಿಂದಾಗಿ ವೈದ್ಯಕೀಯ ಸಿಬಂದಿ ಕ್ಯಾನ್ಸರ್ ಪೀಡಿತರಿಗೆ ರಸ್ತೆಯಲ್ಲೇ ಕೀಮೋ ಥೆರಪಿ ನಡೆಸುವ ಅನಿವಾರ್ಯ ಸ್ಥಿತಿ ಉಂಟಾಗಿದೆ.
“ಆಸ್ಪತ್ರೆಯ ಹೊರಭಾಗದಲ್ಲೂ ಮಾಡಬಹುದಾದಂತಹ ಕೀಮೋ, ಪ್ರಾಥಮಿಕ ವೈದ್ಯಕೀಯ ಪರಿಶೀಲನೆ ಯನ್ನು ರಸ್ತೆಯ ಬದಿಯಲ್ಲೇ ಮಾಡಲಾರಂಭಿಸಿದ್ದೇವೆ. ಮಳೆ ಇಲ್ಲದ ಸಮಯ ನೋಡಿಕೊಂಡು ಈ ರೀತಿ ಚಿಕಿತ್ಸೆ ಕೊಡಲಾಗುತ್ತಿದೆ. ಪ್ರವಾಹಕ್ಕೂ ಮೊದಲು ವಾರಕ್ಕೆ 20ಕ್ಕೂ ಹೆಚ್ಚು ಶಸ್ತ್ರಚಿಕಿತ್ಸೆ ಮಾಡಲಾಗುತ್ತಿತ್ತು.
ಆದರೆ ಈಗ ಅತೀ ತುರ್ತಾಗಿರುವ ಕೆಲವೇ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ. ಪ್ರವಾಹ ಆರಂಭವಾ ದಾಗಿನಿಂದ ಕೇವಲ 3 ಶಸ್ತ್ರಚಿಕಿತ್ಸೆ ನಡೆದಿದೆ’ ಎಂದು ಆಸ್ಪತ್ರೆಯ ಸಂಪನ್ಮೂಲ ಕ್ರೋಢೀ ಕರಣ ಇಲಾಖೆಯ ನಿರ್ವಾಹಕರಾಗಿರುವ ದರ್ಶನ ತಿಳಿಸಿದ್ದಾರೆ. ಆಸ್ಪತ್ರೆಗೆ ಕುಡಿಯುವ ನೀರು, ವಿದ್ಯುತ್ ಇಲ್ಲದಿದ್ದಾಗ ಬಳಕೆಗೆ ಡೀಸೆಲ್, ಅಡುಗೆ ಅನಿಲದ ಪೂರೈಕೆಯ ಆವಶ್ಯಕತೆಯಿದೆ ಎಂದಿದ್ದಾರೆ ಅವರು.
ಇನ್ನೊಂದೆಡೆ, ಪ್ರಮುಖ ನದಿಗಳಲ್ಲಿ ನೀರಿನ ಮಟ್ಟ ತಗ್ಗುತ್ತಿದೆ. ಪ್ರವಾಹದಿಂದಾಗಿ 22 ಲಕ್ಷ ಮಂದಿ ಸಂಕಷ್ಟದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್