ಶಬರಿಮಲೆಯಲ್ಲಿ ಕಿಕ್ಕಿರಿದು ಸೇರಿದ ಭಕ್ತರು ; ಮಳೆ ನಡುವೆಯೂ ಮೇರೆ ಮೀರಿದ ಭಕ್ತಿ
Team Udayavani, Nov 18, 2019, 6:21 AM IST
ಶಬರಿಮಲೆ: ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಯಾತ್ರೆಯ ಎರಡನೇ ದಿನವಾಗಿರುವ ರವಿವಾರ ದೇಶದ ಎಲ್ಲೆಡೆಯಿಂದ ಆಗಮಿಸಿದ್ದ ಭಕ್ತರು ಕಿಕ್ಕಿರಿದು ಸೇರಿದ್ದರು. ಮುಖ್ಯ ಅರ್ಚಕ ಎ.ಕೆ. ಸುಧೀರ್ ನಂಬೂದಿರಿ ಬೆಳಗ್ಗೆ 3 ಗಂಟೆಗೆ ದೇಗುಲದ ಬಾಗಿಲು ತೆರೆದು ದರ್ಶನಕ್ಕೆ ಅವಕಾಶ ಮಾಡಿಕೊಟ್ಟರು. ಈ ಸಂದರ್ಭ ದಲ್ಲಿ ತುಪ್ಪದ ಅಭಿಷೇಕ (ನೈಯ್ಯಭಿಷೇಕಂ), ಮಹಾ ಗಣಪತಿ ಹೋಮ ನಡೆಸಲಾಯಿತು. ಕೇರಳ ಮುಜರಾಯಿ ಸಚಿವ ಕಡಕಂಪಳ್ಳಿ ಸುರೇಂದ್ರನ್, ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಅಧ್ಯಕ್ಷ ಎನ್.ವಾಸು ಸೇರಿದಂತೆ ಪ್ರಮುಖರಿದ್ದರು.
ತಡೆಯಾಜ್ಞೆ ರೀತಿಯ ವ್ಯವಸ್ಥೆ ಇದೆ
ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ತಡೆಯಾಜ್ಞೆ ರೀತಿಯ ವ್ಯವಸ್ಥೆ ಇದೆ ಎಂದು ಕೇರಳ ಕಾನೂನು ಸಚಿವ ಎ.ಕೆ. ಬಾಲನ್ ಅವರು ತಿರುವನಂತಪುರದಲ್ಲಿ ತಿಳಿಸಿದ್ದಾರೆ. ಸದ್ಯ ಈ ಪ್ರಕರಣದಲ್ಲಿ ಕೋರ್ಟ್ ಆದೇಶ ಏನಿದೆಯೋ ಅದನ್ನು ಪಾಲನೆ ಮಾಡು ವುದು ಮಾತ್ರ ಸರಕಾರದ ಕರ್ತವ್ಯವಾಗಿದೆ.
ನ. 14ರಂದು ಸುಪ್ರೀಂಕೋರ್ಟ್ ನೀಡಿದ ತೀರ್ಪಿನಲ್ಲಿ ಹಿಂದಿನ ಆದೇಶಕ್ಕೆ ತಡೆಯಾಜ್ಞೆ ನೀಡಿದೆಯೋ ಇಲ್ಲವೋ ಎನ್ನುವುದು ಪ್ರಶ್ನೆ. ನಿಜವಾಗಿ ಹೇಳುವುದಿದ್ದರೆ ತಡೆಯಾಜ್ಞೆ ಇಲ್ಲ. ಆದರೆ ತಡೆಯಾಜ್ಞೆ ಇರುವಂಥ ಸ್ಥಿತಿ ಇದೆ’ ಎಂದು ಅವರು ಹೇಳಿದ್ದಾರೆ. ಇದೇ ವೇಳೆ ದೇಗುಲ ಪ್ರವೇಶಕ್ಕೆ ಅವಕಾಶ ಸಿಗದೆ ಇದ್ದುದಕ್ಕೆ ಆಂಧ್ರಪ್ರದೇಶದ ಮಹಿಳೆ ನಿರಾಸೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ