ಕೇರಳದಲ್ಲಿ ಮತ್ತೆ ಭಾರೀ ಮಳೆ ಸಂಭವ
Team Udayavani, Oct 5, 2018, 4:50 AM IST
ಕೊಚ್ಚಿ/ಚೆನ್ನೈ: ಭೀಕರ ಪ್ರವಾಹಕ್ಕೆ ಸಿಲುಕಿ ನಲುಗಿರುವ ಕೇರಳ ಮತ್ತೂಂದು ಸುತ್ತಿನ ಅವಘಡಕ್ಕೆ ಸಾಕ್ಷಿಯಾಗಲಿದೆಯೇ? ಕಳೆದೆರಡು ದಿನಗಳಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಶುಕ್ರವಾರದಿಂದ ಮಳೆಯ ತೀವ್ರತೆ ಅತಿಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ, ಕೇರಳಿಗರು ಮತ್ತೆ ಭೀತಿಗೊಳಗಾಗಿದ್ದಾರೆ. ಅಲ್ಲದೆ, ಕಾಸರಗೋಡು ಸೇರಿದಂತೆ ಹಲವು ಪ್ರದೇಶಗಳಲ್ಲಿ ಗುರುವಾರ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿ, ಅಪಾರ ಹಾನಿ ಸಂಭವಿಸಿದೆ.
ಶುಕ್ರವಾರದಿಂದ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಸರ್ಕಾರ ಎಲ್ಲ ರೀತಿಯ ಸಿದ್ಧತೆಗಳನ್ನು ಆರಂಭಿಸಿದೆ. ಅ.7ರಂದು ವರುಣ ಆರ್ಭಟಿಸಲಿದ್ದು, ಕೇರಳದಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಲಪ್ಪುರಂ ಅಣೆಕಟ್ಟಿನ 4 ಕ್ರಸ್ಟ್ ಗೇಟ್ಗಳನ್ನು ಗುರುವಾರವೇ ತೆರೆಯಲಾಗಿದೆ. ಮಳೆಯಿಂದಾಗಿ ಕಾಸರಗೋಡಿನ ಬಸ್ ನಿಲ್ದಾಣದ ಚಾವಣಿ ಕುಸಿದುಬಿದ್ದಿದೆ. ಮೊಬೈಲ್ ಟವರ್ಗಳು, ಮರಗಳು, ಜಾಹೀರಾತು ಫಲಕಗಳು ಧರೆಗುರುಳಿವೆ.
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಶುಕ್ರವಾರ ಅದು ಚಂಡಮಾರುತವಾಗಿ ಮಾರ್ಪಾಡಾಗಿ ಒಮನ್ ಕಡೆಗೆ ಸಾಗಲಿದೆ. ಆದರೆ, ಅದರ ಪರಿಣಾಮವೆಂಬಂತೆ, ಕೇರಳ, ತಮಿಳುನಾಡು, ಪುದುಚೇರಿಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಮೀನುಗಾರರಿಗೆ ಸೂಚನೆ: ಕೇರಳ, ತಮಿಳುನಾಡು ಹಾಗೂ ಕರ್ನಾಟಕದಲ್ಲಿ ಅ.5-8ರವರೆಗೆ ಯಾವುದೇ ಕಾರಣಕ್ಕೂ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಈಗಾಗಲೇ ಮೀನುಗಾರಿಕೆಗೆಂದು ತೆರಳಿರುವವರಿಗೆ ಅ.5 ರೊಳಗೆ ವಾಪಸ್ ಬರುವಂತೆ ಸಂದೇಶ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತ.ನಾಡಿನಲ್ಲೂ ರೆಡ್ ಅಲರ್ಟ್: ಹವಾಮಾನ ಇಲಾಖೆ ಎಚ್ಚರಿಕೆ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರವು ಅ.7ರಂದು ಎಲ್ಲ ಜಿಲ್ಲೆಗಳಲ್ಲೂ ರೆಡ್ ಅಲರ್ಟ್ ಘೋಷಿಸಿದೆ. ನೀರಿನ ಹರಿವಿನ ಪ್ರದೇಶಗಳಲ್ಲಿ ಒತ್ತುವರಿ ತೆರವು ಮಾಡಲು ಸರ್ಕಾರ ಈಗಾಗಲೇ 100 ಕೋಟಿ ರೂ. ಬಿಡುಗಡೆ ಮಾಡಿದೆ. ರಾಜ್ಯಾದ್ಯಂತ ಕೊಳಚೆ ತೆರವು ಕಾರ್ಯವೂ ನಡೆಯುತ್ತಿದೆ. ವಿಪತ್ತು ನಿರ್ವಹಣಾ ಪಡೆ ಕೂಡ ಸನ್ನದ್ಧವಾಗಿದೆ ಎಂದು ಕಂದಾಯ ಸಚಿವ ಉದಯಕುಮಾರ್ ತಿಳಿಸಿದ್ದಾರೆ.
ಪ್ರವಾಸಿಗರು ಅತಂತ್ರ
ತಮಿಳುನಾಡಿನ ಕಡಲೂರು ಜಿಲ್ಲೆಯ ಕಟ್ಟುಮನ್ನಾರ್ಕೊಯಿಲ್ ಮತ್ತು ತಿರುಚಿರಾಪಳ್ಳಿಯ ಕುಲ್ಲಂಬಾಡಿಯಲ್ಲಿ 24 ಗಂಟೆಗಳ ಅವಧಿಯಲ್ಲಿ 11 ಸೆಂ.ಮೀ. ಮಳೆ ದಾಖಲಾಗಿದೆ. ರಾಮೇಶ್ವರದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಕಾರಣ, ಪ್ರವಾಸಿಗರು ಅತಂತ್ರರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!