ಕಾರ್ಮಿಕರ ಸಮಸ್ಯೆ ಆಲಿಸಲು 20 ಕಂಟ್ರೋಲ್ ರೂಮ್ ; ದೂರು ನೀಡುವುದು ಹೇಗೆ?
Team Udayavani, Apr 15, 2020, 6:34 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ರಾಜ್ಯ ಸರಕಾರದ ಸಮನ್ವಯದೊಂದಿಗೆ ಈ ಕಂಟ್ರೋಲ್ ರೂಮ್ಗಳು ಕಾರ್ಯ ನಿರ್ವಹಿಸಲಿವೆ. ಫೋನ್, ವಾಟ್ಸ್ಆ್ಯಪ್ , ಇಮೇಲ್ಗಳ ಮೂಲಕ ಕಂಟ್ರೋಲ್ ರೂಮ್ಗೆ ಸಮಸ್ಯೆ ಮುಟ್ಟಿಸಬಹುದು.
ಆಲಿಸುವವರು ಯಾರು?
ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಸಹಾಯಕ ಕಾರ್ಮಿಕ ಆಯುಕ್ತರು, ಪ್ರಾದೇಶಿಕ ಕಾರ್ಮಿಕ ಆಯಕ್ತರು ಮತ್ತು ಆಯಾ ಪ್ರದೇಶಗಳ ಉಪ ಮುಖ್ಯ ಕಾರ್ಮಿಕ ಆಯುಕ್ತರು ಈ ಕಂಟ್ರೋಲ್ ರೂಮ್ಗೆ ಸಮನ್ವಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಕೆಲಸದ ಅವಧಿ ಹೆಚ್ಚಿಸಲು ಅಧ್ಯಾದೇಶ?
ಲಾಕ್ಡೌನ್ ಮೇ 3ರ ವರೆಗೆ ವಿಸ್ತರಣೆಗೊಂಡಿರುವುದರಿಂದ ಎಲ್ಲಾ ಕ್ಷೇತ್ರಗಳ ನೌಕರರ ಕೆಲಸದ ಅವಧಿ ಹೆಚ್ಚಲಿದೆ. ಈ ಬಗ್ಗೆ ಕೇಂದ್ರ ಸರಕಾರ ಶೀಘ್ರವೇ ಅಧ್ಯಾದೇಶ ಹೊರಡಿಸುವ ಸಾಧ್ಯತೆ ಇದೆ. ಸದ್ಯ ಎಂಟು ಗಂಟೆಯ ಅವಧಿ 12 ಗಂಟೆಗೆ ಏರಿಕೆಯಾಗುವ ಸಾಧ್ಯತೆ ಇದೆ.
ಸದ್ಯದ ಪರಿಸ್ಥಿತಿ ಹಿನ್ನೆಲೆಯಲ್ಲಿ ಮತ್ತು ಉದ್ಯೋಗದ ಸ್ಥಳದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಲಾಕ್ಡೌನ್ ಮುಗಿದ ಬಳಿಕ ಈ ವ್ಯವಸ್ಥೆ ಜಾರಿಯಾಗಲಿದೆ. ಕಾರ್ಮಿಕ ಕಾಯ್ದೆಗಳನ್ನು ಸಮ್ಮಿಳನಗೊಳಿಸಿದ ಸಂಹಿತೆ ಸಂಸತ್ ಮುಂದೆ ಇರುವುದರಿಂದ ಅಧ್ಯಾದೇಶ ಜಾರಿಗೊಳಿಸಲಾಗುತ್ತಿದೆ.
ಕೈಗಾರಿಕಾ ಸಂಘಟನೆಗಳು ಮತ್ತು ಉದ್ಯೋಗದಾತರ ಒಕ್ಕೂಟಗಳು ಕೆಲಸದ ಅವಧಿ ಹೆಚ್ಚಿಸುವ ಬಗ್ಗೆ ಕೇಂದ್ರಕ್ಕೆ ಮನವಿ ಮಾಡಿಕೊಂಡಿದ್ದವು. ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಿರುವುದರಿಂದ ಇಂಥ ಪರಿಸ್ಥಿತಿ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್