ಹೆತ್ತವರನ್ನು ಕಳಕೊಂಡ ಮಕ್ಕಳಿಗೆ ನೆರವಾಗಿ: ರಾಜ್ಯ ಸರಕಾರಗಳಿಗೆ ಸುಪ್ರೀಂ ನಿರ್ದೇಶನ
ಪರಿಹಾರ ಕೊಡದ ಆಂಧ್ರ, ಬಿಹಾರ ಸರಕಾರಗಳಿಗೆ ತರಾಟೆ
Team Udayavani, Jan 20, 2022, 7:50 AM IST
ಹೊಸದಿಲ್ಲಿ: ಕೊರೊನಾದಿಂದಾಗಿ ಹೆತ್ತವ ರನ್ನು ಕಳೆದುಕೊಂಡ ಹತ್ತು ಸಾವಿರ ಮಕ್ಕಳಿಗೆ ನೆರವಾಗಬೇಕು ಎಂದು ಸುಪ್ರೀಂ ಕೋರ್ಟ್ ರಾಜ್ಯ ಸರಕಾರಗಳಿಗೆ ಬುಧವಾರ ನಿರ್ದೇಶನ ನೀಡಿದೆ.
ಜತೆಗೆ ಅವರಿಗೆ ಪರಿಹಾರವನ್ನೂ ನೀಡಬೇಕು ಎಂದು ನ್ಯಾ| ಎಂ.ಆರ್.ಶಾ ಮತ್ತು ನ್ಯಾ| ಸಂಜೀವ್ ಖನ್ನಾ ನೇತೃತ್ವದ ನ್ಯಾಯಪೀಠ ಈ ಆದೇಶ ನೀಡಿದೆ.
ಆಂಧ್ರಪ್ರದೇಶ ಮತ್ತು ಬಿಹಾರಗಳಲ್ಲಿ ಹೆತ್ತವರನ್ನು ಕಳೆದುಕೊಂಡ ಮಕ್ಕಳಿಗೆ 50 ಸಾವಿರ ರೂ. ಪರಿಹಾರ ವಿತರಿಸಲಾಗಿಲ್ಲ ಎಂದು ಆಕ್ಷೇಪಿಸಿ ಸಲ್ಲಿಸ ಲಾಗಿದ್ದ ಅರ್ಜಿಯ ವಿಚಾರಣೆ ವೇಳೆ, ನ್ಯಾಯಪೀಠ ಈ ನಿರ್ದೇಶನ ನೀಡಿದೆ.
ಜತೆಗೆ ಎರಡೂ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳನ್ನು ಆನ್ಲೈನ್ ಮೂಲಕ ವಿಚಾರಣೆಯಲ್ಲಿ ಹಾಜರಾಗುವಂತೆ ಸೂಚಿಸಿ, “ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳದೇ ಇದ್ದುದಕ್ಕೆ ಏಕೆ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳ ಬಾರದು’ ಎಂದು ಪ್ರಶ್ನಿಸಿತು. ಜತೆಗೆ ಎರಡೂ ರಾಜ್ಯ ಸರಕಾರಗಳ ಅಧಿಕಾರಿಗಳು ಮಕ್ಕಳಿಗೆ ಪರಿಹಾರ ವಿತರಿಸಿ, ಅದರ ಬಗ್ಗೆ ಪೂರ್ಣ ವಿವರ ಸಲ್ಲಿಸಬೇಕು. ಗುರುವಾರ ಈ ಬಗ್ಗೆ ಪೂರ್ಣ ಆದೇಶ ನೀಡುವುದಾಗಿ ಹೇಳಿತು.
ಏರಿಕೆ-ಇಳಿಕೆ: ಮುಂಬಯಿಯಲ್ಲಿ 6,032, ಕೋಲ್ಕತಾದಲ್ಲಿ 2,154 ಹೊಸ ಕೇಸುಗಳು ದೃಢಪಟ್ಟು ಇಳಿಕೆಯ ಹಂತ ತೋರಿಸಿವೆ. ಆದರೆ ಗುಜರಾತ್, ಕೇರಳಗ ಳಲ್ಲಿ ಸೋಂಕು ಸಂಖ್ಯೆ ಏರಿಕೆಯ ಹಾದಿಯಲ್ಲಿದೆ.
159.54 ಕೋಟಿ ಡೋಸ್: ಬುಧವಾರ ರಾತ್ರಿ 7 ಗಂಟೆ ವೇಳೆಗೆ 62 ಲಕ್ಷ ಡೋಸ್ ಲಸಿಕೆ ನೀಡಲಾಗಿದೆ. ಈ ಮೂಲಕ ದೇಶದಲ್ಲಿ ಇದುವರೆಗೆ 159.54 ಕೋಟಿ ಡೋಸ್ ಲಸಿಕೆ ನೀಡಿದಂತಾಗಿದೆ. ಈ ಪೈಕಿ 15-18ನೇ ವಯಸ್ಸಿನ ಮಕ್ಕಳಿಗೆ 3.82 ಕೋಟಿ ಡೋಸ್ ನೀಡಲಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.
232 ದಿನಗಳ ಗರಿಷ್ಠ: ಮಂಗಳವಾರದಿಂದ ಬುಧವಾರದ ಅವಧಿಯಲ್ಲಿ ದೇಶದಲ್ಲಿ 2,82,970 ಹೊಸ ಕೇಸುಗಳು ಮತ್ತು 441 ಮಂದಿ ಸಾವಿನ ಪ್ರಕರಣಗಳು ದೃಢಪಟ್ಟಿವೆ. ಇದು 232 ದಿನಗಳ ಗರಿಷ್ಠದ್ದಾಗಿದೆ. ಕಳೆದ ವರ್ಷದ ಮೇ 31ರ ಬಳಿಕ ಸಕ್ರಿಯ ಸೋಂಕು ಗರಿಷ್ಠ ಅಂದರೆ 18,95,520ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ