ಆರ್ಡರ್ಲಿ ವಿರುದ್ಧ ರೈಲ್ವೆ ಮಂತ್ರಿಗೆ ಪತ್ರ
Team Udayavani, Jul 18, 2018, 9:15 AM IST
ನವದೆಹಲಿ: ಆರ್ಡರ್ಲಿ ಪದ್ಧತಿ ವಿರುದ್ಧ ಧ್ವನಿ ಎತ್ತಿರುವ ಟ್ರ್ಯಾಕ್ ಮ್ಯಾನ್ ವೊಬ್ಬರು, ರೈಲ್ವೆ ಸಚಿವ ಪಿಯೂಷ್ ಗೋಯಲ್ಗೆ ಪತ್ರ ಬರೆದಿದ್ದು, ‘ನಾನು ಹಾಗೂ ನನ್ನ ಸಹೋದ್ಯೋಗಿಗಳು ರೈಲ್ವೆಗಾಗಿ ಮಾತ್ರ ಕಾರ್ಯನಿರ್ವಹಿಸುತ್ತೇವೆ. ಅಧಿಕಾರಿಗಳ ಮನೆ ಕಟ್ಟುವ ಕೆಲಸ ಮಾಡುವುದಿಲ್ಲ’ ಎಂದು ತಿಳಿಸಿದ್ದಾರೆ.
ವಿಭಾಗೀಯ ಎಂಜಿನಿಯರ್ ರಾಜ್ಕುಮಾರ್ ವರ್ಮಾ ಅವರು ತನ್ನನ್ನು ಸೇರಿದಂತೆ ಐವರು ಸಹೋದ್ಯೋಗಿಗಳನ್ನು ಮನೆ ಕಟ್ಟುವ ಕೆಲಸಕ್ಕೆ ಬಳಸಿಕೊಂಡಿದ್ದಾರೆ. ಗುಲಾಮರಂತೆ ನಡೆಸಿಕೊಳ್ಳುತ್ತಿದ್ದಾರೆ. ನಾವು ರೈಲ್ವೆಗಾಗಿ ಕೆಲಸಕ್ಕೆ ಸೇರಿದ್ದೇವೆ, ಅಧಿಕಾರಿಗಳ ಸೇವೆ ಮಾಡಲಿಕ್ಕಲ್ಲ ಎಂದು ಹೇಳಿದ್ದಾರೆ. ಜೊತೆಗೆ ನೌಕರರು ಕೆಲಸ ಮಾಡುವ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಕಳೆದ ಸೆಪ್ಟೆಂಬರ್ ನಲ್ಲಿ ರೈಲ್ವೆ ಮಂತ್ರಿ ಪಿಯೂಷ್ ಗೋಯಲ್, ನೌಕರರನ್ನು ಮನೆಗೆಲಸಗಳಿಗೆ ಬಳಸಿಕೊಂಡರೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದರು. ಇದರ ಹೊರತಾಗಿಯೂ ಆರ್ಡರ್ಲಿ ಪದ್ಧತಿ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು