ಬಾಂಬ್ ಬೆದರಿಕೆ: ಗೋವಾದ ದಾಬೋಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್


Team Udayavani, Jan 10, 2023, 5:55 PM IST

ಬಾಂಬ್ ಬೆದರಿಕೆ: ಗೋವಾದ ದಾಬೋಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಪಣಜಿ: ಮಾಸ್ಕೋದಿಂದ ಗೋವಾದ  ದಾಬೋಲಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ರಷ್ಯಾದ ಚಾರ್ಟರ್ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ಗೋವಾ ಏರ್ ಟ್ರಾಫಿಕ್ ಕಂಟ್ರೋಲ್ ಗೆ ಸೋಮವಾರ ತಡರಾತ್ರಿ ಮಾಹಿತಿ ಲಭಿಸಿದೆ. ಇದರ ನಂತರ, 244 ಪ್ರಯಾಣಿಕರನ್ನು ಹೊತ್ತ ವಿಮಾನವನ್ನು ತಕ್ಷಣವೇ ಜಾಮ್‍ನಗರ-ಗುಜರಾತ್ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಯಿತು. ರಾತ್ರಿ 9.49ಕ್ಕೆ ವಿಮಾನ ಅಲ್ಲಿ ಸುರಕ್ಷಿತವಾಗಿ ಇಳಿಯಿತು. ಸದ್ಯ ವಿಮಾನವು ಐಸೋಲೇಶನ್‍ನಲ್ಲಿದ್ದು, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಈ ಬಾಂಬ್ ಬೆದರಿಕೆಯಿಂದಾಗಿ ಗೋವಾದ ದಾಬೋಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಮಾಸ್ಕೋದಿಂದ ಗೋವಾಕ್ಕೆ ತೆರಳುತ್ತಿದ್ದ ರಷ್ಯಾದ ವಿಮಾನಯಾನ ಸಂಸ್ಥೆ ಅಜುರ್ ಏರ್‍ನ ವಿಮಾನದಲ್ಲಿ ಸ್ಫೋಟಕ ಬಾಂಬ್ ಇದೆ ಎಂದು ಪೊಲೀಸರಿಗೆ ಕರೆ ಬಂದಿತ್ತು. ಅದೇ ಸಮಯದಲ್ಲಿ ಗೋವಾ ಏರ್ ಟ್ರಾಫಿಕ್ ಕಂಟ್ರೋಲ್ ಅದೇ ವಿಷಯವನ್ನು ಹೊಂದಿರುವ ಮೇಲ್ ಸ್ವೀಕರಿಸಿದೆ. ಇದಾದ ನಂತರ ಹೈ ಅಲರ್ಟ್ ಘೋಷಿಸಲಾಗಿದ್ದು, ವಿಮಾನದ ಪೈಲಟ್‍ಗೆ ಮಾಹಿತಿ ನೀಡಲಾಗಿದೆ.

ಗೋವಾದ ದಾಬೋಲಿಂ ವಿಮಾನ ನಿಲ್ದಾಣಕ್ಕೆ ಬಂದಿಳಿಯಬೇಕಿದ್ದ ಈ ವಿಮಾನವನ್ನು ತಕ್ಷಣವೇ ಗುಜರಾತ್‍ನ ಜಾಮ್‍ನಗರ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು. ಅಷ್ಟರಲ್ಲಾಗಲೇ ಜಾಮ್‍ನಗರದ ಎಲ್ಲಾ ಉನ್ನತ ಅಧಿಕಾರಿಗಳು ವಿಮಾನ ನಿಲ್ದಾಣವನ್ನು ತಲುಪಿದ್ದರು.

ವಿಮಾನದಲ್ಲಿ ಹಲವು ವಿದೇಶಿ ಪ್ರಯಾಣಿಕರಿದ್ದರು. ಭಾರತೀಯ ನಾಗರಿಕ ವಿಮಾನಯಾನ ಸಚಿವಾಲಯದ ಅಧಿಕಾರಿಗಳು ಕೂಡ ಸಂಪೂರ್ಣ ಘಟನೆಯನ್ನು ದೃಢಪಡಿಸಿದ್ದಾರೆ. ಜಾಮ್‍ನಗರದ ಆಡಳಿತ ಅಧಿಕಾರಿಗಳು, ಪೊಲೀಸರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ವಿಮಾನವನ್ನು ತಪಾಸಣೆ ನಡೆಸುತ್ತಿದ್ದಾರೆ. ಪ್ರಸ್ತುತ, ಜಾಮ್‍ನಗರ ವಿಮಾನ ನಿಲ್ದಾಣದೊಳಗೆ ಹೊರಗಿನವರ ಪ್ರವೇಶವನ್ನು ನಿಷೇಧಿಸಲಾಗಿದೆ.

ಈ ಘಟನೆಯಿಂದಾಗಿ ಗೋವಾ ಪೊಲೀಸರೂ ಅಲರ್ಟ್ ಆಗಿದ್ದು, ದಾಬೋಲಿ ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಈಗ ನಿಖರವಾಗಿ ಬಾಂಬ್ ಇ-ಮೇಲ್ ಎಲ್ಲಿಂದ ಬಂತು? ಯಾರು ಮಾಡಿದ್ದಾರೆ ಎಂಬ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ತಡರಾತ್ರಿ ಪೊಲೀಸರ ಉನ್ನತ ಸಭೆ ನಡೆದಿದೆ. ಬಾಂಬ್ ಇರುವ ಬಗ್ಗೆ ಮಾಹಿತಿ ಬಂದ ತಕ್ಷಣ ಬಾಂಬ್ ಪತ್ತೆ ದಳ ಹಾಗೂ ಅಗ್ನಿಶಾಮಕ ದಳ ದಾಬೋಲಿ ವಿಮಾನ ನಿಲ್ದಾಣಕ್ಕೆ ತಲುಪಿತು. ಇದಲ್ಲದೆ, ಸಿಐಎಫ್ ಅಧಿಕಾರಿಗಳು, ಜಿಲ್ಲಾಧಿಕಾರಿ ಮತ್ತು ಪೊಲೀಸ್ ಅಧೀಕ್ಷಕರು ಉಪಸ್ಥಿತರಿದ್ದರು.

ಮಂಗಳವಾರ ಮಧ್ಯಾಹ್ನ ಗೋವಾಕ್ಕೆ ಬಂದಿಳಿದ ವಿಮಾನ…!
ವಮಾಸ್ಕೋದಿಂದ ದಾಬೋಲಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲು ಸಿದ್ಧತೆ ನಡೆಸುತ್ತಿದ್ದ ರಷ್ಯಾದ ಚಾರ್ಟರ್ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ಸೋಮವಾರ ತಡರಾತ್ರಿ ಗೋವಾ ಏರ್ ಟ್ರಾಫಿಕ್ ಕಂಟ್ರೋಲ್ ಗೆ ಮಾಹಿತಿ ಲಭಿಸಿದೆ. ಇದರ ನಂತರ, 244 ಪ್ರಯಾಣಿಕರನ್ನು ಹೊತ್ತ ವಿಮಾನವನ್ನು ತಕ್ಷಣವೇ ಜಾಮ್‍ನಗರ-ಗುಜರಾತ್ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಯಿತು. ರಾತ್ರಿ 9.49ಕ್ಕೆ ವಿಮಾನ ಅಲ್ಲಿ ಸುರಕ್ಷಿತವಾಗಿ ಇಳಿಯಿತು. ಬಳಿಕ ಸುಮಾರು 6 ಗಂಟೆಗಳ ಕಾಲ ತನಿಖೆ ನಡೆಸಲಾಯಿತು. ಆದರೆ ತನಿಖೆಯ ನಂತರ ಏನೂ ಪತ್ತೆಯಾಗದ ಕಾರಣ, ಜಾಮ್‍ನಗರದಲ್ಲಿ ಬಂದಿಳಿದ ವಿಮಾನವನ್ನು ಗೋವಾಕ್ಕೆ ತಿರುಗಿಸಲಾಯಿತು. ಕೊನೆಗೆ ಮಾಸ್ಕೋ-ಗೋವಾ ವಿಮಾನ ಮಧ್ಯಾಹ್ನ ಗೋವಾಕ್ಕೆ ಬಂದಿಳಿದಿದೆ.

ಇದನ್ನೂ ಓದಿ: ವಿಮಾನದಲ್ಲಿ ನೀಡಿದ ಆಹಾರದಲ್ಲಿ ಕಲ್ಲು: ಮತ್ತೊಮ್ಮೆ ಟೀಕೆಗೆ ಗುರಿಯಾದ ಏರ್ ಇಂಡಿಯಾ

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.