ಮುಖ್ಯಮಂತ್ರಿಯ ಬಗ್ಗೆ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ: ಖರ್ಗೆ
Team Udayavani, May 14, 2023, 6:57 PM IST
ಹೊಸದಿಲ್ಲಿ: ಕರ್ನಾಟಕದ ಮುಖ್ಯಮಂತ್ರಿ ನೇಮಕದ ಬಗ್ಗೆ ಪಕ್ಷದ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
“ನಮ್ಮ ವೀಕ್ಷಕರು ಬೆಂಗಳೂರಿಗೆ ಹೋಗಿದ್ದಾರೆ, ನಂತರ ಸಿಎಲ್ಪಿ ಸಭೆ ನಡೆಯಲಿದೆ, ಸಿಎಲ್ಪಿ ಸಭೆಯ ನಂತರ ಅವರು ತಮ್ಮ ಅಭಿಪ್ರಾಯವನ್ನು ಹೈಕಮಾಂಡ್ ನೊಂದಿಗೆ ಹಂಚಿಕೊಳ್ಳುತ್ತಾರೆ, ನಂತರ ಅವರು (ಹೈಕಮಾಂಡ್) ತಮ್ಮ ನಿರ್ಧಾರವನ್ನು ಇಲ್ಲಿಂದ ಕಳುಹಿಸುತ್ತಾರೆ” ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಭರ್ಜರಿ ಜಯ ಸಾಧಿಸಿದೆ. ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದುಕೊಂಡಿದೆ.
ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಅಂತಿಮಗೊಳಿಸಿದೆ ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳು ಸೂಚಿಸುತ್ತಿದ್ದರೂ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಬಲ ಸ್ಪರ್ಧಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ