ಹಿಜಾಬ್ ವಿವಾದ: ಹೈಕೋರ್ಟ್ ಸೂಚನೆ ಪ್ರಶ್ನಿಸಿ ಮತ್ತೆ ಸುಪ್ರೀಂ ಮೆಟ್ಟಿಲೇರಿದ ವಿದ್ಯಾರ್ಥಿಗಳು


Team Udayavani, Feb 11, 2022, 10:14 AM IST

ಹಿಜಾಬ್ ವಿವಾದ: ಹೈಕೋರ್ಟ್ ಸೂಚನೆ ಪ್ರಶ್ನಿಸಿ ಮತ್ತೆ ಸುಪ್ರೀಂ ಮೆಟ್ಟಿಲೇರಿದ ವಿದ್ಯಾರ್ಥಿಗಳು

ಹೊಸದಿಲ್ಲಿ: ವಿವಾದಿತ ಹಿಜಾಬ್- ಕೇಸರಿ ವಸ್ತ್ರ ಪ್ರಕರಣದ ಬಗ್ಗೆ ತೀರ್ಪು ಬರುವವರೆಗೂ ಶಾಲೆ ಕಾಲೇಜುಗಳಲ್ಲಿ ಯಾವುದೇ ಧಾರ್ಮಿಕ ಉಡುಪು ಧರಿಸುವಂತಿಲ್ಲ ಎಂಬ ಹೈಕೋರ್ಟ್ ನ ಮಧ್ಯಂತರ ಮೌಖಿಕ ಸೂಚನೆಯನ್ನು ಪ್ರಶ್ನಿಸಿ ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಮಧ್ಯಂತರ ಆದೇಶವು ವ್ಯಕ್ತಿಗಳ, ವಿಶೇಷವಾಗಿ ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳ ಆತ್ಮಸಾಕ್ಷಿಯ ಆಯ್ಕೆಯನ್ನು ಪ್ರಶ್ನಿಸಿದೆ ಎಂದು ಅರ್ಜಿದಾರರ ವಿದ್ಯಾರ್ಥಿ ಹೇಳಿದರು. ಮುಸ್ಲಿಂ ಮಹಿಳೆಯರ ವೃತ್ತಿ ಮತ್ತು ಭವಿಷ್ಯವು ಅತಂತ್ರದಲ್ಲಿದೆ, ಅವರ ಮೂಲಭೂತ ಹಕ್ಕನ್ನು ಮೊಟಕುಗೊಳಿಸಲಾಗಿದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ. ತ್ರಿಸದಸ್ಯ ಪೀಠದ ಮುಂದೆ ನಡೆಯುತ್ತಿರುವ ವಿಚಾರಣೆಗಳು ಹಾಗೂ ಹಿಜಾಬ್ ಸಮಸ್ಯೆಯ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್‌ನ ನಿರ್ದೇಶನಕ್ಕೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದೆ.

ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ಮುಗಿಯುವವರೆಗೆ ಶಾಲಾ-ಕಾಲೇಜುಗಳಲ್ಲಿ ಯಾರೊಬ್ಬರೂ ಧಾರ್ಮಿಕ ವಸ್ತ್ರಗಳನ್ನು ಧರಿಸುವಂತಿಲ್ಲ ಎಂದು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ನ್ಯಾಯಪೀಠ ಗುರುವಾರ ಮೌಖೀಕ ಸೂಚನೆ ನೀಡಿದೆ.

ಇದನ್ನೂ ಓದಿ:ಹಿಂದುತ್ವ ಗುಂಪುಗಳು ಮುಸ್ಲಿಂ ಹುಡುಗಿಯರಿಗೆ ಕಿರುಕುಳ ನೀಡುತ್ತಿದೆ: ಫುಟ್ ಬಾಲ್ ತಾರೆ ಪೋಗ್ಬಾ

ಅಷ್ಟೇ ಅಲ್ಲದೆ, ಶಾಲಾ ಕಾಲೇಜುಗಳನ್ನು ತೆರೆಯಿರಿ ಎಂದು ನಿರ್ದೆಶನ ನೀಡಿದೆ. ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ನ್ಯಾಯಪೀಠ ಸದ್ಯ ರಾಜ್ಯದಲ್ಲಿ ಶಾಂತಿ- ಸುವ್ಯವಸ್ಥೆ ನೆಲೆಸಬೇಕಿದೆ. ಆದ್ದರಿಂದ ಶಿಕ್ಷಣ ಸಂಸ್ಥೆಗಳು ಆರಂಭವಾಗಲಿ. ಹೈಕೋರ್ಟ್‌ನಲ್ಲಿ ವಿಚಾರಣೆ ವೇಳೆ ಧಾರ್ಮಿಕ ಉಡುಗೆ ಧರಿಸಲು ವಿದ್ಯಾರ್ಥಿಗಳನ್ನು ಒತ್ತಾಯಿಸಬಾರದು ಎಂದು ಮಧ್ಯಂತರ ಆದೇಶ ನೀಡುವುದಾಗಿ ಹೇಳಿತು.

ಗುರುವಾರ ಕರ್ನಾಟಕದಲ್ಲಿ ಹಿಜಾಬ್‌ ವಿಚಾರಕ್ಕೆ ಸಂಬಂಧಿಸಿದ ಅರ್ಜಿಯನ್ನು ಸದ್ಯಕ್ಕೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್‌ನಿರಾಕರಿಸಿತ್ತು. “ಮೊದಲು ಕರ್ನಾಟಕ ಹೈಕೋರ್ಟ್‌ ನಿರ್ಧರಿಸಲಿ, ಆಮೇಲೆ ನೋಡೋಣ’ ಎಂದು ಸ್ಪಷ್ಟಪಡಿಸಿತ್ತು. ಸಿ.ಜೆ.ಐ. ಎನ್‌.ವಿ.ರಮಣ ನೇತೃತ್ವದ ನ್ಯಾಯ ಪೀಠದ ಮುಂದೆ ಗುರುವಾರ ನ್ಯಾಯವಾದಿ ಕಪಿಲ್‌ ಸಿಬಲ್‌ ಕರ್ನಾಟಕದ ಪ್ರಕರಣವನ್ನು ಪರಿಗಣಿಸುವಂತೆ ಮನವಿ ಸಲ್ಲಿಸಿದರು. ಈ ಅರಿಕೆಗೆ ಉತ್ತರಿಸಿದ ನ್ಯಾಯಪೀಠ ಮೊದಲು ಹೈಕೋರ್ಟ್‌ ನಲ್ಲಿ ನಡೆಯುತ್ತಿರುವ ವಿಚಾರಣೆ ಪೂರ್ತಿಗೊಳ್ಳಲಿ. ನಾವಿಲ್ಲಿ ಅದನ್ನು ಪರಿಗಣಿಸಿದರೆ ಹೈಕೋರ್ಟ್‌ ವಿಚಾರಣೆ ನಡೆಸದೆ ಇರಬಹುದು. ಇಷ್ಟು ಬೇಗ ಮಧ್ಯಪ್ರವೇಶ ಬೇಡ. ನಂತರ ಈ ಬಗ್ಗೆ ತೀರ್ಮಾನಿಸೋಣ’ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.

ಇದೀಗ ಹೈಕೋರ್ಟ್ ನ ಮೌಖಿಕ ಸೂಚನೆಯನ್ನು ಪ್ರಶ್ನಿಸಿ  ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಾಗಿದೆ.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.