ಆಂತರಿಕ ವಿಚಾರದಲ್ಲಿ ಮೂಗು ತೂರಿಸಬೇಡಿ: ವಿದೇಶಗಳಿಗೆ ಭಾರತದ ವಿದೇಶಾಂಗ ಇಲಾಖೆ ಸೂಚನೆ


Team Udayavani, Feb 13, 2022, 7:10 AM IST

ಆಂತರಿಕ ವಿಚಾರದಲ್ಲಿ ಮೂಗು ತೂರಿಸಬೇಡಿ: ವಿದೇಶಗಳಿಗೆ ಭಾರತದ ವಿದೇಶಾಂಗ ಇಲಾಖೆ ಸೂಚನೆ

ನವದೆಹಲಿ: ಹಿಜಾಬ್‌ ವಿವಾದವು ಭಾರತದ ಆಂತರಿಕ ವಿಚಾರವಾಗಿದ್ದು, ಬೇರೆ ರಾಷ್ಟ್ರಗಳು ಪ್ರೇರಿತ ಪ್ರತಿಕ್ರಿಯೆಗಳನ್ನು ಕೊಡುವುದು ಬೇಕಿಲ್ಲ. ಅದನ್ನು ನಾವು ಸ್ವಾಗತಿಸುವುದೂ ಇಲ್ಲ ಎಂದು ಭಾರತದ ವಿದೇಶಾಂಗ ಸಚಿವಾಲಯ ಹೇಳಿದೆ. ಇಲ್ಲಿನ ಹಿಜಾಬ್‌ ವಿವಾದದ ವಿಚಾರವಾಗಿ ಪಾಕಿಸ್ತಾನ, ಅಮೆರಿಕದಂತಹ ರಾಷ್ಟ್ರಗಳು ಪ್ರತಿಕ್ರಿಯೆ ನೀಡಿದ ಬೆನ್ನಲ್ಲೇ ಸಚಿವಾಲಯವು ಇಂಥ ಖಡಕ್‌ ಎಚ್ಚರಿಕೆ ನೀಡಿದೆ.

“ಕರ್ನಾಟಕದ ಶಾಲೆಯ ಸಮವಸ್ತ್ರದ ವಿಚಾರ ಹೈಕೋರ್ಟ್‌ನಲ್ಲಿದೆ. ನಮ್ಮ ಸಾಂವಿಧಾನಿಕ ಚೌಕಟ್ಟಿನ ಒಳಗಿರುವ ಸಮಸ್ಯೆಯನ್ನು ನಾವು ಬಗೆಹರಿಸಿಕೊಳ್ಳುತ್ತೇವೆ. ಭಾರತದ ಬಗ್ಗೆ ತಿಳಿದುಕೊಂಡವರು ಈ ವಾಸ್ತವದ ಬಗ್ಗೆಯೂ ಸರಿಯಾಗಿ ತಿಳಿದಿರುತ್ತಾರೆ ಎಂದು ಭಾವಿಸುತ್ತೇವೆ’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್‌ ಬಗ್ಚಿ ಹೇಳಿದ್ದಾರೆ.

ಸುಪ್ರೀಂಗೆ ಪಿಐಎಲ್‌:

ಹಿಜಾಬ್‌ ವಿವಾದದ ಬೆನ್ನಲ್ಲೇ ದೇಶಾದ್ಯಂತ ಸಮಾನ ವಸ್ತ್ರಸಂಹಿತೆ ಜಾರಿಗೊಳಿಸುವಂತೆ ಕೇಂದ್ರ, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ಸೂಚಿಸಬೇಕೆಂದು ಕೋರಿ ಶನಿವಾರ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.  ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಮೌಲ್ಯಗಳನ್ನು ಹೆಚ್ಚಿಸಿ, ದೇಶದ ಏಕತೆ ಕಾಪಾಡಲು ತಜ್ಞರ ಸಮಿತಿ ಅಥವಾ ನ್ಯಾಯಾಂಗ ಸಮಿತಿ ರಚಿಸುವಂತೆಯೂ ಅರ್ಜಿಯಲ್ಲಿ ಕೋರಲಾಗಿದೆ. ನಿಖೀಲ್‌ ಉಪಾಧ್ಯಾಯ ಎಂಬವರು ಈ ಪಿಐಎಲ್‌ ಸಲ್ಲಿಸಿದ್ದಾರೆ.

ಪ್ರತಿ ಸಂಘಟನೆ ತಮ್ಮದೇ ಆದ ಡ್ರೆಸ್‌ ಕೋಡ್‌ ಅನುಷ್ಠಾನ ಮಾಡಿಕೊಳ್ಳಬಹುದು. ಆದರೆ ಸರ್ಕಾರಿ ವ್ಯವಸ್ಥೆಯಲ್ಲಿ ಸಂವಿಧಾನ ನಡೆಯುತ್ತದೆಯೇ ಹೊರತು ಶರಿಯಾ ನಿಯಮವಲ್ಲ. ಯೋಗಿ ಆದಿತ್ಯನಾಥ, ಉ.ಪ್ರದೇಶ ಸಿಎಂ

ಭಾರತದ ಹೆಣ್ಣು ಮಕ್ಕಳ ಘನತೆಯೊಂದಿಗೆ ಆಟವಾಡಲು ಹೊರಟರೆ, ಹೆಣ್ಣು ಮಕ್ಕಳೆಲ್ಲರೂ ಝಾನ್ಸಿ ರಾಣಿ, ರಜಿಯಾ ಸುಲ್ತಾನರಾಗಿ ಬದಲಾಗಿ, ಹಿಜಾಬ್‌ಗ ಕೈ ಹಾಕುವ ಕೈಯನ್ನು ಕತ್ತರಿಸುತ್ತಾರೆ. ಹಿಜಾಬ್‌ ಭಾರತ ಸಂಸ್ಕೃತಿಯ ಅವಿಭಾಜ್ಯ ಅಂಗ. ರುಬೀನಾ ಖಾನಂ, ಎಸ್‌ಪಿ ನಾಯಕಿ

ಬುರ್ಖಾವು ಕರಾಳ ಯುಗದ ಚಾಸ್ಟಿಟಿ ಬೆಲ್ಟ್(ಲೈಂಗಿಕ ಕ್ರಿಯೆ ನಡೆಸದಂತೆ ತಡೆಯಲು ಇರುವ ಸಾಧನ) ಇದ್ದಂತೆ. ಎಲ್ಲ ಘರ್ಷಣೆ ಅಂತ್ಯಗೊಳಿಸುವುದಕ್ಕೆ ಸಮವಸ್ತ್ರ ಅವಶ್ಯಕ. ಧರ್ಮದ ಹಕ್ಕು ಶಿಕ್ಷಣದ ಹಕ್ಕಿಗಿಂತ ದೊಡ್ಡದಲ್ಲ. ತಸ್ಲೀಮಾ ನಸ್ರೀನ್‌, ಬಾಂಗ್ಲಾದೇಶದ ಲೇಖಕಿ

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.