ಗೋವಾ ಬೆಳಗಾವಿ ಸಂಪರ್ಕ ಸೇತುವೆ: ಚೋರ್ಲಾ ಘಾಟ್ನಲ್ಲಿ ಗುಡ್ಡ ಕುಸಿತ
Team Udayavani, Jun 22, 2021, 12:14 PM IST
ಪಣಜಿ: ಗೋವಾ ಬೆಳಗಾವಿ ಸಂಪರ್ಕ ಸೇತುವೆಯಾಗಿರುವ ಚೋರ್ಲಾ ಘಾಟ್ನಲ್ಲಿ ಗುಡ್ಡ ಕುಸಿತವುಂಟಾಗುತ್ತಿದ್ದು ವಾಹನ ಸಂಚಾರಕ್ಕೆ ಹೆಚ್ಚಿನ ತೊಂದರೆಯುಂಟಾಗುವಂತಾಗಿದೆ.
ಮಂಗಳವಾರ ಬೆಳಗಿನ ಜಾವ ಚೋರ್ಲಾ ಘಾಟ್ನಲ್ಲಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತವುಂಟಾಗಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಅನಮೋಡ ಘಾಟ್ ಮೂಲಕ ಬದಲಿ ಮಾರ್ಗದ ಮೂಲಕ ವಾಹನ ಸಂಚಾರ ನಡೆಸಲಾಗುತ್ತಿದೆ. ಇಷ್ಟೇ ಅಲ್ಲದೆಯೇ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಭಾರಿ ವಾಹನಗಳ ಓಡಾಟಕ್ಕೆ ಡಿಸೆಂಬರ್ 31 ರ ವರೆಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಚೋರ್ಲಾ ಘಾಟ್ನಲ್ಲಿ ಮಂಗಳವಾರ ಗುಡ್ಡ ಕುಸಿತವುಂಟಾಗಿರುವುದನ್ನು ತೆರವುಗೊಳಿಸಲು ಒಂದೆರಡು ದಿನಗಳೇ ಹಿಡಿಯಲಿದೆ, ಅಷ್ಟೊಂದು ಬೃಹತ್ ಪ್ರಮಾಣದ ಗುಡ್ಡ ಕುಸಿತವುಂಟಾಗಿದೆ.
ಇದನ್ನೂ ಓದಿ: ದನ ಕಟ್ಟಿ ಹಾಕುವ ವಿಚಾರ: ಮಗನನ್ನು ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ
ಗೋವಾ-ಬೆಳಗಾವಿಗೆ ಪ್ರತಿದಿನ ಚೋರ್ಲಾ ಘಾಟ ಮಾರ್ಗವಾಗಿ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳ ಓಡಾಟ ಕಂಡುಬರುತ್ತದೆ. ಕಳೆದ ನಾಲ್ಕೈದು ದಿನಗಳ ಹಿಂದೆ ಭಾರಿ ಮಳೆಯಾಗುತ್ತಿದ್ದ ಸಂದರ್ಭದಲ್ಲಿಯೂ ಚೋರ್ಲಾ ಘಾಟ್ನಲ್ಲಿ ಗುಡ್ಡಕುಸಿತವುಂಟಾಗಿ ಕೆಲ ಗಂಟೆಗಳ ಕಾಲ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಮಂಗಳವಾರವೂ ಕೂಡ ಚೋರ್ಲಾ ಘಾಟ್ನಲ್ಲಿ ಗುಡ್ಡಕುಸಿತವುಂಟಾಗಿ ಸಂಚಾರಕ್ಕೆ ಸಂಪೂರ್ಣ ಬಂದ್ ಆಗಿದೆ.
ಇಷ್ಟೇ ಅಲ್ಲದೆಯೇ ಚೋರ್ಲಾ ಘಾಟ್ ಮಾರ್ಗದಲ್ಲಿ ಭಾರಿ ವಾಹನಗಳ ಓಡಾಟ ಹೆಚ್ಚಾಗಿರುವುದರಿಂದ ಮತ್ತು ಕಿರಿದಾದ ರಸ್ತೆಯಾಗಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಅಪಘಾತ ಸಂಭವಿಸುತ್ತದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 31 ರವರೆಗೆ ಚೋರ್ಲಾ ಘಾಟ್ ಮಾರ್ಗವಾಗಿ ಭಾರಿ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಕಳೆದ ವರ್ಷ ಮಳೆಗಾಲದ ಸಂದರ್ಭದಲ್ಲಿ ಚೋರ್ಲಾ ಘಾಟ್ನಲ್ಲಿ ಭಾರಿ ಪ್ರಾಣದಲ್ಲಿ ಗುಡ್ಡ ಕುಸಿತವುಂಟಾಗಿ ಹೆಚ್ಚಿನ ತೊಂದರೆಯುಂಟಾಗಿತ್ತು. ಕಳೆದ ವರ್ಷವೂ ಕೂಡ ಮಳೆಗಾಲದ ಸಂದರ್ಭದಲ್ಲಿ ಈ ಮಾರ್ಗದಲ್ಲಿ ಭಾರಿ ವಾಹನಗಳ ಒಡಾಟಕ್ಕೆ ನಿರ್ಬಂಧ ಹೇರಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
MUST WATCH
ಹೊಸ ಸೇರ್ಪಡೆ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?