ಹಿಮಾಚಲ ಪ್ರದೇಶ : ಕಂದರಕ್ಕೆ ಕಾರು ಉರುಳಿ ಬಿದ್ದು 8 ಸಾವು
Team Udayavani, Mar 3, 2018, 5:56 PM IST
ಅಮೃತ್ಸರ : ಚಂಡೀಗಢ – ಮನಾಲಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ಸ್ವರಘಾಟ್ನಿಂದ ಎಂಟು ಕಿ.ಮೀ. ದೂರದಲ್ಲಿ ಆಳದ ಕಂದರಕ್ಕೆ ಕಾರು ಬಿದ್ದು ಎಂಟು ಯಾತ್ರಿಕರು ಮೃತಪಟ್ಟು ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ನಿನ್ನೆ ಶುಕ್ರವಾರ ನಡೆದಿದೆ.
ಕಾಂಗ್ರೆಸ್ ಶಾಸಕ ರಾಜ್ ಕುಮಾರ್ ವರ್ಕಾ ಅವರು ಪಂಜಾಬ್ ಸರಕಾರದ ವತಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಕೊಡಿಸಲಾಗುವುದು ಎಂದು ಹೇಳಿದ್ದಾರೆ.
ಅಮೃತ್ಸರ ಪಶ್ಚಿಮ ಕ್ಷೇತ್ರದ ಶಾಸಕರಾಗಿರುವ ವರ್ಕಾ ಅವರು ಮೃತರ ಕುಟುಂಬ ಸದಸ್ಯರನ್ನು ನಗರದಲ್ಲಿ ಭೇಟಿಯಾದರು.
ಕಾರಿನಲ್ಲಿದ್ದವರು ಅಮೃತಸರದಿಂದ ಮಣಿಕರಣಕ್ಕೆ ಮರಳುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿತು. ಮೃತರನ್ನು ಗುರೀಂದರ್ ಸಿಂಗ್, ಜಸ್ಬೀರ್ ಸಿಂಗ್ (ಸಹೋದರರು), ಮನ್ದೀಪ ಸಿಂಗ್, ಸೋನು (ಸಹೋದರರು), ದವೀಂದರ್ ಸಿಂಗ್, ಕವಲ್ಜಿತ್ ಸಿಂಗ್, ಲವಪ್ರೀತ್ ಸಿಂಗ್ ಮತ್ತು ಬಲ್ಜಿತ್ ಸಿಂಗ್ – ಇವರೆಲ್ಲರೂ ರಾಜಸಂಸಿ ಗ್ರಾಮದವರೆಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ