Himachal Pradesh; 6 ಕೈ ಶಾಸಕರ ಅನರ್ಹತೆ ಆದೇಶಕ್ಕೆ ತಡೆ ಇಲ್ಲ: ಸುಪ್ರೀಂ
Team Udayavani, Mar 19, 2024, 12:56 AM IST
ಹೊಸದಿಲ್ಲಿ: ಹಿಮಾಚಲ ಪ್ರದೇಶದ ಕಾಂಗ್ರೆಸ್ನ ಉಚ್ಚಾಟಿತ 6 ಮಂದಿ ಶಾಸಕರಿಗೆ ಹಿನ್ನಡೆಯಾಗಿದೆ. ಇತ್ತೀಚೆಗೆ ಮುಕ್ತಾಯವಾಗಿದ್ದ ರಾಜ್ಯಸಭೆ ಚುನಾ ವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪಕ್ಷದ ವಿಪ್ ಉಲ್ಲಂ ಸಿ ಮತ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ದಂತೆ ವಿಧಾನಸಭೆ ಸ್ಪೀಕರ್ ನೀಡಿದ್ದ ಅನ ರ್ಹತೆ ಆದೇಶಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ನ್ಯಾ| ಸಂಜೀವ್ ಖನ್ನಾ ಮತ್ತು ದೀಪಂ ಕರ್ ದತ್ತಾ ನೇತೃತ್ವದ ನ್ಯಾಯ ಪೀಠ ಸೋಮವಾರ ಈ ಬಗ್ಗೆ ಆದೇಶ ನೀಡಿದೆ. ಜತೆಗೆ ಸ್ಪೀಕರ್ ಕುಲದೀಪ್ ಸಿಂಗ್ ಪಥಾ ನಿಯಾ ಅವರ ಕಚೇರಿಗೆ ನೋಟಿಸ್ ಜಾರಿ ಮಾಡಿದೆ.
“ಈ ಕೋರ್ಟ್ ಸ್ಪೀಕರ್ ನೀಡಿದ ಶಾಸಕರ ಅನರ್ಹತೆ ಆದೇಶದ ವಿರುದ್ಧ ತಡೆಯಾಜ್ಞೆ ನೀಡುವುದಿಲ್ಲ. ಅದಕ್ಕೆ ಅನುಮತಿಯೂ ಇಲ್ಲ. ಜತೆಗೆ ಅನರ್ಹ ಗೊಂಡ ಶಾಸಕರ ಕ್ಷೇತ್ರಗಳಿಗೆ ಚುನಾ ವಣ ಆಯೋಗ ಚುನಾವಣೆ ನಡೆಸುವ ಬಗ್ಗೆ ಆದೇಶ ನೀಡಿದೆ. ಈ ಬಗ್ಗೆ ನಾವು ಪರಿಶೀ ಲಿಸಬೇಕಾಗಿದೆ’ ಎಂದು ನ್ಯಾಯಪೀಠ ಹೇಳಿತು.
ಖ್ಯಾತ ನ್ಯಾಯವಾದಿ ಹರೀಶ್ ಸಾಳ್ವೆ ಅನರ್ಹ ಶಾಸಕರ ಪರ ವಾದಿಸಿದರು. ನ್ಯಾಯಪೀಠ ಮೇ 6ಕ್ಕೆ ಪ್ರಕರಣದ ವಿಚಾರಣೆಯನ್ನು ನಿಗದಿಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ