ಹಿಮಾಚಲ ಮೊದಲ ಹಂತ : 65.92% ಶಾಂತಿಯುತ ಮತದಾನ
ಮತ ಚಲಾಯಿಸಿ ಮಾದರಿಯಾದ 105 ವರ್ಷ ವಯಸ್ಸಿನ ವೃದ್ದೆ
Team Udayavani, Nov 12, 2022, 7:40 PM IST
ಶಿಮ್ಲಾ: ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯ ಮೊದಲ ಹಂತದ 68 ಕ್ಷೇತ್ರಗಳಲ್ಲಿ ಶನಿವಾರ (ನವೆಂಬರ್ 12) ಶಾಂತಿಯುತ ಮತದಾನ ನಡೆದಿದೆ. ಗುಡ್ಡಗಾಡು ಪ್ರದೇಶದ ಮತದಾರರು ಚುನಾವಣೆಯಲ್ಲಿ ಮುಖ್ಯಮಂತ್ರಿ ಜೈರಾಮ್ ಠಾಕೂರ್, ಮಾಜಿ ಸಿಎಂ ವೀರಭದ್ರ ಸಿಂಗ್ ಅವರ ಪುತ್ರ ವಿಕ್ರಮಾದಿತ್ಯ ಸಿಂಗ್ ಮತ್ತು ಬಿಜೆಪಿಯ ಮಾಜಿ ಅಧ್ಯಕ್ಷ ಸತ್ಪಾಲ್ ಸಿಂಗ್ ಸತ್ತಿ ಸೇರಿದಂತೆ 412 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಸಂಜೆ 5 ಗಂಟೆಯವರೆಗೆ 65.92% ಮತದಾನವಾಗಿದೆ.ಸಿರ್ಮೋರ್ ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 72.35ರಷ್ಟು ಮತದಾನವಾಗಿದ್ದು,ಉನಾದಲ್ಲಿಶೇ 68.48 ಮತ್ತು ಲಹೌಲ್ ಮತ್ತು ಸ್ಪಿತಿಯಲ್ಲಿ ಶೇ 67.5 ರಷ್ಟು ಮತದಾನವಾಗಿದೆ.
ಗುಡ್ಡಗಾಡು ರಾಜ್ಯದ 68 ವಿಧಾನಸಭಾ ಕ್ಷೇತ್ರಗಳ ಪೈಕಿ ಶಿಲ್ಲೈನಲ್ಲಿ ಅತಿ ಹೆಚ್ಚು ಶೇಕಡ 77ರಷ್ಟು ಮತದಾನವಾಗಿದ್ದು, ಸರ್ಕಾಘಾಟ್ನಲ್ಲಿ ಅತಿ ಕಡಿಮೆ ಶೇಕಡ 55.40ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಲಾಹೌಲ್ ಮತ್ತು ಸ್ಪಿತಿಯ ತಾಶಿಗಂಗ್ನಲ್ಲಿರುವ ವಿಶ್ವದ ಅತಿ ಎತ್ತರದ ಮತಗಟ್ಟೆ ಬೂತ್ನಲ್ಲಿ ಶನಿವಾರ 98.08% ಮತದಾನವಾಗಿದೆ. 52 ನೋಂದಾಯಿತ ಮತದಾರರಲ್ಲಿ, 51 ಮಂದಿ ಹಿಮಾಚಲ ಪ್ರದೇಶದಲ್ಲಿ ಮತದಾನದ ನಡುವೆ ಹೊಸ ರಾಜ್ಯ ಸರ್ಕಾರವನ್ನು ಆಯ್ಕೆ ಮಾಡಲು ಮತ ಚಲಾಯಿಸಿದ್ದಾರೆ.
105 ವರ್ಷ ವಯಸ್ಸಿನ ಮತದಾರೆ ನರೋ ದೇವಿ, ಚುರಾ ಅಸೆಂಬ್ಲಿ ಕ್ಷೇತ್ರದಲ್ಲಿ ಮತ ಚಲಾಯಿಸಿ ಯುವ ಜನತೆಗೆ ಮಾದರಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು