
‘ಆತ ಯಾರೆಂದು ಗೊತ್ತಿಲ್ಲ’ ಎಂದಿದ್ದ ಅಸ್ಸಾಂ ಸಿಎಂಗೆ ಮಧ್ಯರಾತ್ರಿ ಕರೆ ಮಾಡಿದ ಶಾರುಖ್ ಖಾನ್
Team Udayavani, Jan 22, 2023, 1:40 PM IST

ಗುವಾಹಟಿ: “ಶಾರುಖ್ ಖಾನ್ ಯಾರು? ನನಗೆ ಆತನ ಬಗೆಗಾಗಲಿ ಅಥವಾ ಆತನ ಸಿನಿಮಾ ಪಠಾಣ್ ಬಗೆಗಾಗಲಿ ಗೊತ್ತಿಲ್ಲ” ಎಂದು ಸುದ್ದಿಯಾಗಿದ್ದ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರಿಗೆ ಇಂದು ಸ್ವತಃ ಶಾರುಖ್ ಖಾನ್ ಅವರು ಕರೆ ಮಾಡಿ ಮಾತನಾಡಿದ್ದಾರೆ.
ಈ ಬಗ್ಗೆ ಸ್ವತಃ ಹಿಮಂತ್ ಬಿಸ್ವಾ ಶರ್ಮಾ ಅವರೇ ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ.
“ಬಾಲಿವುಡ್ ನಟ ಶಾರುಖ್ ಖಾನ್ ಅವರು ನನಗೆ ಕರೆ ಮಾಡಿದರು. ನಾವು ಇಂದು ಬೆಳಗಿನ ಜಾವ ಎರಡು ಗಂಟೆಗೆ ಮಾತನಾಡಿದೆವು. ಅವರು ತಮ್ಮ ಚಿತ್ರದ ಪ್ರದರ್ಶನದ ಸಂದರ್ಭದಲ್ಲಿ ಗುವಾಹಟಿಯಲ್ಲಿ ನಡೆದ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರದ ಕರ್ತವ್ಯ ಎಂದು ನಾನು ಅವರಿಗೆ ಭರವಸೆ ನೀಡಿದ್ದೇನೆ. ಇಂತಹ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುತ್ತೇವೆ: ಎಂದು ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಟ್ವೀಟ್ ಮಾಡಿದ್ದಾರೆ.
Bollywood actor Shri @iamsrk called me and we talked today morning at 2 am. He expressed concern about an incident in Guwahati during screening of his film. I assured him that it’s duty of state govt to maintain law & order. We’ll enquire and ensure no such untoward incidents.
— Himanta Biswa Sarma (@himantabiswa) January 22, 2023
ಅಸ್ಸಾಂನಲ್ಲಿ ಪಠಾಣ್ ಸಿನಿಮಾ ಪ್ರದರ್ಶನದ ವಿರುದ್ಧ ಕೆಲ ಬಲಪಂಥೀಯ ಸಂಘಟನೆಗಳು ಪ್ರತಿಭಟನೆ ನಡೆಸಿ, ಸಿನಿಮಾ ಪೋಸ್ಟರ್ ಗಳಿಗೆ ಬೆಂಕಿ ಹಚ್ಚಿದ ಘಟನೆಯ ಬಗ್ಗೆ ವರದಿಯಾಗಿದೆ.
ಇದನ್ನೂ ಓದಿ:ರಾಯ್ಪುರದಲ್ಲಿ ಹೀನಾಯ ಸೋಲು: ಐಸಿಸಿ ರ್ಯಾಂಕಿಂಗ್ ನಲ್ಲಿ ಮೊದಲ ಸ್ಥಾನ ಕಳೆದುಕೊಂಡ ಕಿವೀಸ್
ಇದಕ್ಕೆ ಸಂಬಂಧಿಸಿದಂತೆ ಪತ್ರಕರ್ತರು ಸಿಎಂ ಹಿಮಂತ್ ಅವರನ್ನು ಶನಿವಾರ ಪ್ರಶ್ನಿಸಿದಾಗ, ಶಾರುಖ್ ಖಾನ್ ಯಾರು? ನನಗೆ ಆತನ ಬಗೆಗಾಗಲಿ ಅಥವಾ ಆತನ ಸಿನಿಮಾ ಪಠಾಣ್ ಬಗೆಗಾಗಲಿ ಗೊತ್ತಿಲ್ಲ ಎಂದು ಉತ್ತರಿಸಿದ್ದರು. ಕಾನೂನು ಸುವ್ಯವಸ್ಥೆಗೆ ಅಡ್ಡಿಯಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದರು. ಇನ್ನು ಖಾನ್ ಬಾಲಿವುಡ್ ಸ್ಟಾರ್ ಎನ್ನುತ್ತಿದ್ದಂತೆ ಪ್ರತಿಕ್ರಿಯಿಸಿರುವ ಶರ್ಮಾ, ರಾಜ್ಯದ ಜನತೆ ಅಸ್ಸಾಮಿಗಳ ಬಗ್ಗೆ ಯೋಚಿಸ್ಬೇಕು ಹಿಂದಿ ಸಿನಿಮಾಗಳ ಬಗ್ಗೆ ಅಲ್ಲ ಎಂದು ಚಾಟಿ ಬೀಸಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cardiologist: ಸಾವಿರಾರು ಹೃದಯ ಸಂಬಂಧಿ ಸರ್ಜರಿ ಮಾಡಿದ್ದ ಖ್ಯಾತ ವೈದ್ಯ ಹೃದಯಾಘಾತದಿಂದ ನಿಧನ

ಜೀವಂತವಾಗಿದ್ದರೂ ದಾಖಲೆಯಲ್ಲಿ ʼಮೃತ ವ್ಯಕ್ತಿʼ: ಎಡವಟ್ಟಿನಿಂದ ವೃದ್ಧಾಪ್ಯ ವೇತನವೇ ಗೋತಾ.!

Viral Video: ಯುವತಿಯನ್ನು ಅಪಹರಣ ಮಾಡಿ ಬಲವಂತವಾಗಿ ಸಪ್ತಪದಿ ವಿಧಾನ ನೆರವೇರಿಸಿದ ಯುವಕ.!

Borewell: ಆಟ ಆಡುವ ವೇಳೆ 300 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಎರಡೂವರೆ ವರ್ಷದ ಮಗು

ನಕಲಿ ಬ್ಯಾಂಕ್ ಅಧಿಕಾರಿಗಳ “KYC ಅಪ್ಡೇಟ್” ಖೆಡ್ಡಾ !
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
ಹೊಸ ಸೇರ್ಪಡೆ

ಮನೆ ಯಜಮಾನಿ ಯಾರು ಎಂದು ಮನೆಯವರೇ ತೀರ್ಮಾನ ಮಾಡಬೇಕು: ಡಿ.ಕೆ.ಶಿವಕುಮಾರ್

ದ.ಕ ಜಿಲ್ಲೆಯ ಯಾವ ಮೂಲೆಗೂ ನೀರಿನ ಸಮಸ್ಯೆ ಆಗದಂತೆ ನೋಡುತ್ತೇವೆ: ಜಿಲ್ಲಾಧಿಕಾರಿ

Cardiologist: ಸಾವಿರಾರು ಹೃದಯ ಸಂಬಂಧಿ ಸರ್ಜರಿ ಮಾಡಿದ್ದ ಖ್ಯಾತ ವೈದ್ಯ ಹೃದಯಾಘಾತದಿಂದ ನಿಧನ

Shivamogga: ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಪೋಸ್ಟ್ ಮಾರ್ಟಮ್ ಮಾಡಿದ ವೈದ್ಯರು

ಜೀವಂತವಾಗಿದ್ದರೂ ದಾಖಲೆಯಲ್ಲಿ ʼಮೃತ ವ್ಯಕ್ತಿʼ: ಎಡವಟ್ಟಿನಿಂದ ವೃದ್ಧಾಪ್ಯ ವೇತನವೇ ಗೋತಾ.!