ಬಹುಪತ್ನಿತ್ವ, ಬಾಲ್ಯವಿವಾಹ ತ್ಯಜಿಸಿ: ಬಾಂಗ್ಲಾದೇಶಿ ಮುಸ್ಲಿಮರಿಗೆ ಹಿಮಂತ ಶರ್ಮಾ ಷರತ್ತು
Team Udayavani, Mar 24, 2024, 3:33 PM IST
ಹೊಸದಿಲ್ಲಿ: ‘ಮಿಯಾ’ ಎಂದು ಕರೆಯಲ್ಪಡುವ ಬಂಗಾಳಿ ಮಾತನಾಡುವ ಬಾಂಗ್ಲಾದೇಶಿ ಮುಸ್ಲಿಮರನ್ನು ರಾಜ್ಯದಲ್ಲಿ ಸ್ಥಳೀಯ ಜನರು ಎಂದು ಗುರುತಿಸಲು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಶನಿವಾರ ಷರತ್ತುಗಳನ್ನು ವಿಧಿಸಿದ್ದಾರೆ. ಈ ತಿಂಗಳ ಆರಂಭದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನದ ನಂತರ ಅವರ ಈ ಹೇಳಿಕೆಗಳು ಮಹತ್ವ ಪಡೆದಿದೆ.
ಅಸ್ಸಾಂನಲ್ಲಿ ಮಿಯಾ ಸಮುದಾಯವನ್ನು ಗುರುತಿಸಲು, ಸಮುದಾಯದ ಜನರು ಕೆಲವು ಸಾಂಸ್ಕೃತಿಕ ಆಚರಣೆಗಳು ಮತ್ತು ರೂಢಿಗಳನ್ನು ಅನುಸರಿಸಬೇಕು ಎಂದು ಹಿಮಂತ ಶರ್ಮಾ ಪ್ರತಿಪಾದಿಸಿದರು.
ಕುಟುಂಬದ ಗಾತ್ರವನ್ನು ಎರಡು ಮಕ್ಕಳಿಗೆ ಸೀಮಿತಗೊಳಿಸುವುದು, ಬಹು ಪತ್ನಿತ್ವವನ್ನು ತಡೆಹಿಡಿಯುವುದು ಮತ್ತು ಅಪ್ರಾಪ್ತ ಹೆಣ್ಣುಮಕ್ಕಳ ವಿವಾಹವನ್ನು ತಡೆಯುವುದು ಮಿಯಾ ಸಮುದಾಯವನ್ನು ಈಶಾನ್ಯ ರಾಜ್ಯದಲ್ಲಿ ಸ್ಥಳೀಯರು ಎಂದು ಗುರುತಿಸಲು ಬೇಕಾದ ಕೆಲವು ಅವಶ್ಯಕತೆಗಳು ಎಂದು ಅವರು ಒತ್ತಿ ಹೇಳಿದರು.
“ಮಿಯಾಗಳು (ಬಂಗಾಳಿ ಮಾತನಾಡುವ ಮುಸ್ಲಿಮರು) ಸ್ಥಳೀಯರೇ ಅಥವಾ ಅಲ್ಲವೇ ಎಂಬುದು ಬೇರೆ ವಿಷಯ. ನಾವು ಹೇಳುತ್ತಿರುವುದು ಅವರು ಸ್ಥಳೀಯರಾಗಲು ಪ್ರಯತ್ನಿಸಿದರೆ ನಮಗೆ ಯಾವುದೇ ತೊಂದರೆಯಿಲ್ಲ. ಆದರೆ ಅದಕ್ಕಾಗಿ ಅವರು ಬಾಲ್ಯ ವಿವಾಹ ಮತ್ತು ಬಹುಪತ್ನಿತ್ವವನ್ನು ತ್ಯಜಿಸಬೇಕು. ಅಲ್ಲದೆ ಮಹಿಳಾ ಶಿಕ್ಷಣವನ್ನು ಪ್ರೋತ್ಸಾಹಿಸಬೇಕು” ಎಂದು ಹಿಮಂತ ಶರ್ಮಾ ಶನಿವಾರ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು