ಹಿಂದಿ ಟೀಕಿಸುವ ಭರದಲ್ಲಿ ಡಿಎಂಕೆ ಸಂಸದ ಎಡವಟ್ಟು
Team Udayavani, Jun 7, 2022, 12:09 AM IST
ಚೆನ್ನೈ: ಹಿಂದಿ ಹೇರಿಕೆ ವಿರುದ್ಧ ಮಾತನಾಡುವ ರಭಸದಲ್ಲಿ ಡಿಎಂಕೆ ರಾಜ್ಯಸಭಾ ಸದಸ್ಯ ಟಿ.ಕೆ.ಎಸ್.ಇಳಂಗೋವನ್ ಎಡವಟ್ಟು ಮಾಡಿಕೊಂಡಿದ್ದಾರೆ.
“ಹಿಂದಿ ಭಾಷೆ ಹೇರಿಕೆಯಿಂದಾಗಿ ತಮಿಳರು ಶೂದ್ರರ ಮಟ್ಟಕ್ಕೆ ಇಳಿಯಲಿದ್ದಾರೆ’ ಎಂದಿದ್ದಾರೆ. ಜತೆಗೆ ಆ ಭಾಷೆಯನ್ನು ಮಾತನಾ ಡುವ ರಾಜ್ಯ ಗಳು ಅಭಿವೃದ್ಧಿ ಸಾಧಿಸಿಲ್ಲ ಎಂದು ಪ್ರತಿಪಾದಿ ಸಿದ್ದಾರೆ.
“ಹಿಂದಿಯೇ ಪ್ರಧಾನ ಭಾಷೆ ಆಗಿಲ್ಲದ ಪಶ್ಚಿಮ ಬಂಗಾಲ, ಒಡಿಶಾ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಕರ್ನಾಟಕ, ಮಹಾರಾಷ್ಟ್ರ ಮತ್ತು ಗುಜರಾತ್ ಬೆಳವಣಿಗೆ ಸಾಧಿಸಿವೆ. ಈ ಎಲ್ಲ ರಾಜ್ಯಗಳಲ್ಲಿ ಹಿಂದಿ ಮಾತೃಭಾಷೆ ಆಗಿಲ್ಲ ಎಂದು ಪ್ರತಿಪಾದಿಸುವುದೇ ನನ್ನ ಉದ್ದೇಶ.
ಮಧ್ಯಪ್ರದೇಶ, ಉತ್ತರ ಪ್ರದೇಶ, ಬಿಹಾರ, ರಾಜಸ್ಥಾನ, ಮತ್ತು ಉತ್ತರಾಖಂಡ ಹಿಂದಿ ಭಾಷೆ ಮಾತನಾಡುವ ರಾಜ್ಯಗಳು. ಅವುಗಳು ಅಭಿವೃದ್ಧಿಯಾಗಿಲ್ಲ. ಹೀಗಾಗಿ, ನಾನೇಕೆ ಆ ಭಾಷೆಯನ್ನು ಕಲಿಯಬೇಕು’ ಎಂದು ಪ್ರಶ್ನಿಸಿದ್ದಾರೆ.
ಈ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇಳಂಗೋವನ್ ಅವರ ಹೇಳಿಕೆಯು ಉತ್ತರ ಭಾರತ ಮತ್ತು ದಕ್ಷಿಣ ಭಾರತದ ನಡುವೆ ವೈಷಮ್ಯ ಹುಟ್ಟಿಸುವಂತಿದೆ ಎಂದು ಆಕ್ರೋಶ ಹೊರಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್