ದೇಶದ ಮಣ್ಣಿನಲ್ಲಿ ಹಿಂದುತ್ವದ DNA ಇದೆ:ಸ್ವಾಮಿ


Team Udayavani, Nov 14, 2017, 12:28 PM IST

13-Isckon-Event.jpg

ನಾಸಿಕ್‌: ಹಿಂದೂಸ್ಥಾನ ಹಿಂದೂ ರಾಷ್ಟ್ರ ವಾಗಿದ್ದು, ಈ ದೇಶದ ಮಣ್ಣಿನಲ್ಲಿ ಹಿಂದುತ್ವದ ಡಿಎನ್‌ಎ ಇದೆ ಎಂದು ಇಲ್ಲಿ ಬಿಜೆಪಿಯ ಹಿರಿಯ ನಾಯಕ ಸುಬ್ರಹ್ಮಣ್ಯನ್‌ ಸ್ವಾಮಿ ಅವರು ಹೇಳಿದ್ದಾರೆ.

ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ಮುಸಲ್ಮಾನರು ಸಹಕರಿಸಬೇಕೇ ಹೊರತೂ ಅದಕ್ಕೆ ಅಡ್ಡಿಪಡಿಸಬಾರದು ಎಂದು ಕರೆ ನೀಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ರಾಷ್ಟ್ರೀಯ ಕಾರ್ಯಕಾರಿಣಿಯ ಎಲ್ಲ ಸದಸ್ಯರಿಗೆ ತಿಹಾರ್‌ ಜೈಲಿನ ಪ್ರವಾಸವನ್ನು ಮಾಡಿಸಲಾಗುವುದು ಎಂದೂ ಅವರು ಈ ಸಂದರ್ಭದಲ್ಲಿ ಅಣಕವಾಡಿದ್ದಾರೆ.

ಸ್ವಾಮಿ ಅವರು ನಾಸಿಕ್‌ನ ಶ್ರೀ ರಾಧಾ ಮದನ್‌ ಗೋಪಾಲ ಇಸ್ಕಾನ್‌ ದೇವಾಲಯದಲ್ಲಿ ಭಗವದ್ಗೀತಾ ಪ್ರಜ್ಞಾಶೋಧ್‌ ಪರೀಕ್ಷಾ ಪುರಸ್ಕಾರ ವಿತರಣೆ ಸಮಾರಂಭದಲ್ಲಿ  ಮಾತನಾಡಿದರು. ವೇದಿಕೆಯಲ್ಲಿ ಶಾಸಕ ದೇವಯಾನಿ ಫರಾಂದೆ, ಮಂದಿರದ ವಿಶ್ವಶ§ ಶಿಕ್ಷಾಷ್ಟಕಮ್‌ ಪ್ರಭು ಅವರು ಉಪಸ್ಥಿತರಿದ್ದರು.

ಹಿಂದಿಯಲ್ಲಿ ತಮ್ಮ ಭಾಷಣವನ್ನು ಆರಂಭಿಸಿದ ಸುಬ್ರಹ್ಮಣ್ಯನ್‌ ಸ್ವಾಮಿ ಅವರು ಅಯೋಧ್ಯೆ ಸೇರಿದಂತೆ ಮಥುರಾ ಮತ್ತು ವಾರಾಣಸಿಯಲ್ಲಿ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ  ಶೀಘ್ರ ಹೈಕೋರ್ಟ್‌ ತನ್ನ 
ತೀರ್ಪು ಪ್ರಕಟಿಸಲಿದೆ. ಈ ಕೆಲಸದಲ್ಲಿ ಮುಸ್ಲಿಮರು ಕೂಡ ಸಹಕರಿಸ ಬೇಕು ಹಾಗೂ ಮಂದಿರ ನಿರ್ಮಾಣದ ಹಾದಿಯನ್ನು ಸುಗಮಗೊಳಿಸಬೇಕು ಎಂದರು.

ಮೊಘಲರು  ಸುಮಾರು 750 ವರ್ಷಗಳಿಗೂ ಹೆಚ್ಚು ಕಾಲ ದೇಶದಲ್ಲಿ ಆಳ್ವಿಕೆ ನಡೆಸಿದ್ದರು. ಇದರ ಹೊರತಾಗಿಯೂ ದೇಶದಲ್ಲಿ ಹಿಂದೂ ಧರ್ಮದ ಅಸ್ತಿತ್ವವು ದೃಢವಾಗಿ ನಿಂತಿದ್ದು, ಛತ್ರಪತಿ ಶಿವಾಜಿ ಮಹಾರಾಜರಿಂದ ಹಿಡಿದು ರಾಜಸ್ಥಾನದ ಮಹಾರಾಣಾ ಪ್ರತಾಪ್‌ ಅವರಂಥ  ವಿವಿಧ ಯೋಧರ ಮೂಲಕ ಮಾಡಲಾದ ಯುದ್ಧಗಳು ಇದಕ್ಕೆ ಏಕಮಾತ್ರ ಕಾರಣವಾಗಿದೆ ಎಂದವರು ಹೇಳಿದರು.

ಹಿಂದೂ ಭಯೋತ್ಪಾದನೆ ಸೃಷ್ಟಿಯಾಗಲು ಸಾಧ್ಯವೇ ಇಲ್ಲ. ಯಾಕೆಂದರೆ, ಈ ಧರ್ಮದ ಧರ್ಮಗ್ರಂಥ ಭಗವದ್ದೀತೆ ಆಗಿದ್ದು, ಗೀತೆಯು ಭಯೋತ್ಪಾದನೆಯನ್ನು ಕಲಿಸುವುದಿಲ್ಲ. ಆದರೆ,  ನಿಜವಾದ ಹಿಂದೂ ಭಯೋತ್ಪಾದನೆ ಏನೆಂಬುದು, ಚಿದಂಬರಂ ಜೈಲಿಗೆ ಹೋದ ಬಳಿಕ ಅನುಭವವಾಗಲಿದೆ ಎಂದು ಅವರು ಕಿಡಿಕಾರಿದರು.

ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್‌ ರಾಷ್ಟ್ರೀಯ ಕಾರ್ಯಕಾರಿಣಿಯ ಎಲ್ಲಾ ಸದಸ್ಯರಿಗೆ ತಿಹಾರ್‌ ಜೈಲಿನ ಪ್ರವಾಸವನ್ನು ಮಾಡಿಸಲಾಗುವುದು. ಪಿ. ಚಿದಂಬರಂಗೆ ಹಿಂದೂ ಭಯೋತ್ಪಾದನೆ ಹೇಳಲು ಹಕ್ಕಿಲ್ಲ. ನಾನು ಧರ್ಮ-ಸಂಸ್ಕೃತಿಯ ರಕ್ಷಕನಾಗಿದ್ದೇನೆ ಮತ್ತು ಸತ್ಯವನ್ನು ಹೇಳುತ್ತೇನೆ. ದೇಶದಲ್ಲಿರುವ ಎಲ್ಲಾ ಭ್ರಷ್ಟಾಚಾರಿಗಳು ಹಾಗೂ ಜಾತ್ಯತೀತರಿಗೆ ಜೈಲಿನಲ್ಲಿ ವ್ಯವಸ್ಥೆ ಮಾಡಬೇಕಾದ ಆವಶ್ಯಕತೆಯಿದೆ ಎಂದು ಸ್ವಾಮಿ ಅವರು ನುಡಿದರು.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.