ಜೆಎನ್ ಯು ದಾಳಿ ಹೊಣೆ ಹೊತ್ತ ಹಿಂದೂ ರಕ್ಷಾ ದಳ; ಯಾರೀತ ಪಿಂಕಿ ಚೌಧರಿ?
ಜೆಎನ್ ಯು ದೇಶ ವಿರೋಧಿ ಚಟುವಟಿಕೆಗಳ ತಾಣವಾಗಿದೆ. ನಾವು ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ.
Team Udayavani, Jan 7, 2020, 1:08 PM IST
ನವದೆಹಲಿ: ದಿಲ್ಲಿಯ ಜವಾಹರಲಾಲ್ ನೆಹರು ವಿವಿಯಲ್ಲಿ (ಜೆಎನ್ ಯು) ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ಮೇಲೆ ಮುಸುಕುಧಾರಿ ಅನಾಮಧೇಯ ವ್ಯಕ್ತಿಗಳು ನಡೆಸಿದ ದಾಳಿ ಪ್ರಕರಣದ ಹೊಣೆಯನ್ನು ಪಿಂಕಿ ಚೌಧರಿ ನೇತೃತ್ವದ ಹಿಂದೂ ರಕ್ಷಾ ದಳ ಹೊತ್ತುಕೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
“ಜೆಎನ್ ಯು ದೇಶ ವಿರೋಧಿ ಚಟುವಟಿಕೆಗಳ ತಾಣವಾಗಿದೆ. ನಾವು ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಜೆಎನ್ ಯು ಮೇಲೆ ನಡೆದ ದಾಳಿಯ ಪೂರ್ಣ ಹೊಣೆಯನ್ನು ಹೊತ್ತುಕೊಳ್ಳುತ್ತೇವೆ. ಅಂದು ದಾಳಿ ನಡೆಸಿದವರು ನಮ್ಮ ಕಾರ್ಯಕರ್ತರು” ಎಂದು ಚೌಧರಿ ಎಎನ್ ಐ ನ್ಯೂಸ್ ಏಜೆನ್ಸಿಗೆ ತಿಳಿಸಿದ್ದಾರೆ.
ಜೆಎನ್ ಯು ಹಿಂಸಾಚಾರ ಸಂಬಂಧ ಸೋಮವಾರ ಕೆಲ ವಿಡಿಯೋ ಮತ್ತು ಫೋಟೋಗಳು ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಅಲ್ಲದೇ ಈ ಘಟನೆ ಬಗ್ಗೆ ದೇಶವ್ಯಾಪಿ ಆಕ್ರೋಶ ವ್ಯಕ್ತವಾಗಿತ್ತು. ಮುಸುಕುಧಾರಿಗಳಾಗಿ ಬಂದು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರು ಎಬಿವಿಪಿಗೆ ಸಂಬಂಧಿಸಿದವರು ಎಂಬಂತೆ ಕಂಡು ಬರುತ್ತಿದೆ ಎಂದು ಆರೋಪಿಸಲಾಗಿತ್ತು.
ಮುಸುಕುಧಾರಿ ವ್ಯಕ್ತಿಗಳು ಹರಿತವಾದ ಆಯುಧ, ಹ್ಯಾಮರ್ ಹಿಡಿದು ಜೆಎನ್ ಯು ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ್ದರು. ದಿಲ್ಲಿ ಪೊಲೀಸರು ಕೂಡಾ ಮುಖದ ಗುರುತು ಪತ್ತೆ ಹಚ್ಚುವ ತಂತ್ರಜ್ಞಾನ ಬಳಸಿ ಮುಸುಕುಧಾರಿಗಳನ್ನು ಗುರುತಿಸುವ ಕಾರ್ಯದಲ್ಲಿ ತೊಡಗಿರುವುದಾಗಿ ತಿಳಿಸಿದ್ದರು.
ಭಾನುವಾರ ರಾತ್ರಿ ನಡೆದ ದಾಳಿಯ ಹಿಂದೆ ಎಬಿವಿಪಿ ಮುಖಂಡರ ಕೈವಾಡ ಇದ್ದಿರುವುದಾಗಿ ಜೆಎನ್ ಯು ವಿದ್ಯಾರ್ಥಿ ಒಕ್ಕೂಟದ ಮುಖಂಡ ಐಶೆ ಘೋಷ್ ಆರೋಪಿಸಿದ್ದು, ಇದನ್ನು ಎಬಿವಿಪಿ ತಳ್ಳಿಹಾಕಿ, ದಾಳಿ ಹಿಂದೆ ಎಡಪಂಥೀಯ ಸಂಘಟನೆ ಇದ್ದಿರುವುದಾಗಿ ದೂರಿತ್ತು ಎಂದು ವರದಿ ತಿಳಿಸಿದೆ.
ಭೂಪೇಂದ್ರ ಟೋಮರ್ ಅಲಿಯಾಸ್ ಪಿಂಕಿ ಚೌಧರಿ:
ಹಿಂದೂ ರಕ್ಷಾ ದಳದ ಭೂಪೇಂದ್ರ ಟೋಮರ್ ಅಲಿಯಾಸ್ ಪಿಂಕಿ ಚೌಧರಿ ಈ ಸಂಘಟನೆಯ ಮುಖ್ಯಸ್ಥ. ಪಿಂಕಿ ಭಯ್ಯಾ ಎಂದೇ ಜನಪ್ರಿಯ ಆಗಿರುವ ಟೋಮರ್ ಈಗ ಜೆಎನ್ ಯು ವಿದ್ಯಾರ್ಥಿಗಳ ಮೇಲೆ ನಡೆಸಿದ ದಾಳಿಯ ಹೊಣೆಯನ್ನು ಹೊತ್ತುಕೊಂಡಿರುವುದಾಗಿ ಎಎನ್ ಐ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ