ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಪ್ರಧಾನಿ ಸಮಿತಿಯಿಂದ 65 ವರ್ಷದ ಜನಸಂಖ್ಯಾ ವರದಿ

Team Udayavani, May 9, 2024, 7:25 AM IST

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಹೊಸದಿಲ್ಲಿ: 1950ರಿಂದ 2015ರ ಅವಧಿಯಲ್ಲಿ ಭಾರತದಲ್ಲಿ ಬಹು ಸಂಖ್ಯಾಕರಾಗಿರುವ ಹಿಂದೂಜನಸಂಖ್ಯೆಯಲ್ಲಿ ಶೇ.7.8 ರಷ್ಟು ಕುಸಿತವಾಗಿದ್ದರೆ, ಅಲ್ಪ ಸಂಖ್ಯಾಕರ ಜನಸಂಖ್ಯೆ ಹೆಚ್ಚಳವಾಗಿದೆ. ಈ ಬಗ್ಗೆ ಪ್ರಧಾನಿಗಳ ಆರ್ಥಿಕ ಸಲಹಾ ಸಮಿತಿ (ಇಎಸಿ-ಪಿಎಂ)ಯ ಅಧ್ಯಯನ ವರದಿ ತಿಳಿಸಿದೆ.

ಭಾರತದಲ್ಲಿ ಬಹುಸಂಖ್ಯಾಕರ ಜನಸಂಖ್ಯೆಯಲ್ಲಿ ಕುಸಿತ ವಾಗಿದ್ದರೆ, ಇದಕ್ಕೆ ವಿರುದ್ಧವಾಗಿ ನೆರೆಯ ಬಾಂಗ್ಲಾದೇಶ ಮತ್ತು ಪಾಕಿಸ್ಥಾನದಲ್ಲಿರುವ ಬಹುಸಂಖ್ಯಾಕರ ಜನಸಂಖ್ಯೆಯಲ್ಲಿ ಹೆಚ್ಚಳವಾಗಿದೆ. 1950-2015ರ ಅವಧಿಯಲ್ಲಿ ಭಾರತದ ಮುಸ್ಲಿಮರ ಪಾಲು ಶೇ.43.15, ಕ್ರೈಸ್ತರು 5.38, ಸಿಕ್ಖರ ಪಾಲು ಶೇ.6.58 ರಷ್ಟು ಏರಿಕೆಯಾಗಿದೆ. ಬೌದ್ಧರ ಸಂಖ್ಯೆಯಲ್ಲಿ ತುಸು ಏರಿಕೆಯಾದ್ದರೆ, ಜೈನ ಮತ್ತು ಪಾರ್ಸಿ ಸಂಖ್ಯೆ ಕುಸಿತವಾಗಿದೆ.

ಭಾರತದ ಜನಸಂಖ್ಯೆಯಲ್ಲಿ ಹಿಂದೂಗಳ ಪಾಲು 1950ರಲ್ಲಿ ಶೇ.84ರಿಂದ 2015ರಲ್ಲಿ ಶೇ.78 ಕ್ಕೆ ಕಡಿಮೆಯಾಗಿದೆ, ಆದರೆ ಮುಸ್ಲಿಮರ ಸಂಖ್ಯೆ ಅದೇ ಅವಧಿಯಲ್ಲಿ (65 ವರ್ಷಗಳಲ್ಲಿ) ಶೇ.9.84ರಿಂದ ಶೇ.14.09 ಏರಿಕೆ ಕಂಡಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಒಟ್ಟಾರೆ ಜಾಗತಿಕ ಪ್ರವೃತ್ತಿಯನ್ನು ಪರಿಗಣಿಸು ವುದಾದರೆ, ವಿಶ್ವದ 167 ರಾಷ್ಟ್ರ ಗಳಲ್ಲೂ ಬಹುಸಂಖ್ಯಾಕರ ಜನ ಸಂಖ್ಯೆಯಲ್ಲಿ ಕುಸಿತವಾಗಿದೆ ಎಂದು ವರದಿ ತಿಳಿಸಿದೆ.

ಸಿಎಎಗೆ ಬಲ
ನೀಡಿದ ವರದಿ?
ಪ್ರಧಾನಿಗಳ ಆರ್ಥಿಕ ಸಲಹಾ ಸಮಿತಿಯ ಅಧ್ಯಯನ ವರದಿಯ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬಲ ನೀಡಲಿದೆ. ಯಾಕೆಂದರೆ ನೆರೆಯ ರಾಷ್ಟ್ರಗಳಲ್ಲಿ ಬಹುಸಂಖ್ಯಾಕರ ಜನಸಂಖ್ಯೆಯ ಪಾಲು ಹೆಚ್ಚುತ್ತಿರುವ ಪರಿಣಾಮ, ಅಲ್ಪಸಂಖ್ಯಾಕರಾದ ಹಿಂದೂಗಳು, ಸಿಕ್ಖರು ಮತ್ತು ಕ್ರೈಸ್ತರು ಆಶ್ರಯಕ್ಕಾಗಿ ಭಾರತಕ್ಕೆ ವಲಸೆ ಬರುತ್ತಿದ್ದಾರೆ. ಅವರಿಗೆ ತ್ವರಿತವಾಗಿ ಪೌರತ್ವ ನೀಡುವುದು ಅತ್ಯಗತ್ಯವಾಗಿದೆ. 2019ರಲ್ಲಿ ಜಾರಿಗೆ ತಂದ ಸಿಎಎಗೆ ಎರಡು ತಿಂಗಳ ಹಿಂದೆಯಷ್ಟೇ ಮಾರ್ಗಸೂಚಿ ಪ್ರಕಟಿಸಲಾಗಿದೆ.

ಪ್ರಮುಖ ಅಂಶಗಳೇನು?
-ಭಾರತದಲ್ಲಿ ಹಿಂದೂಗಳ ಪ್ರಮಾಣ ಶೇ.7.8 ರಷ್ಟು ಕುಸಿತ
-1950ರಿಂದ 2015ರ ಅವಧಿಯಲ್ಲಿ ಮುಸ್ಲಿಮರ ಪ್ರಮಾಣ ಶೇ.43 ಏರಿಕೆ
-123 ದೇಶಗಳಲ್ಲಿ ಬಹುಸಂಖ್ಯಾಕರ ಸಂಖ್ಯೆ ಇಳಿಕೆ; ಅಲ್ಪಸಂಖ್ಯಾಕರ ವೃದ್ಧಿ
-ಜಗತ್ತಿನ 44 ರಾಷ್ಟ್ರಗಳಲ್ಲಿ ಮಾತ್ರ ಬಹುಸಂಖ್ಯಾಕರ ಸಂಖ್ಯೆ ಹೆಚ್ಚಳ
-ಬಾಂಗ್ಲಾದಲ್ಲಿ ಶೇ.18.5, ಪಾಕಿಸ್ಥಾನದಲ್ಲಿ ಮುಸ್ಲಿಮರ ಸಂಖ್ಯೆ ಶೇ.3.7ರಷ್ಟು ವೃದ್ಧಿ

ಅಲ್ಪಸಂಖ್ಯಾಕರ
ಏರಿಕೆಗೆ ಏನು ಕಾರಣ?
-ಸರಕಾರ ಜಾರಿಗೆ ತಂದ ನೀತಿಗಳು
-ಕೈಗೊಳ್ಳಲಾದ ರಾಜಕೀಯ ನಿರ್ಧಾರಗಳು
-ವೈವಿಧ್ಯತೆಯನ್ನು ಪೋಷಿಸುವಂಥ ವಾತಾವರಣ ಸೃಷ್ಟಿ
-ಅಲ್ಪಸಂಖ್ಯಾಕರ ಉತ್ತಮ ಬದುಕಿಗೆ ನೀತಿಗಳು ಜಾರಿ ಮತ್ತು ಸಂಸ್ಥೆಗಳ ರಚನೆ

ಟಾಪ್ ನ್ಯೂಸ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Will Dhoni play IPL next year too..?; What did Rayudu say?

IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

IMD

47.8 degrees; ಉತ್ತರ ಭಾರತದ ಹಲವೆಡೆ ಶಾಖದ ಅಲೆ ಅಲರ್ಟ್‌!

trai

TRAI ವ್ಯಾಪ್ತಿಗೆ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌, ಎಕ್ಸ್‌?

Agri

Report; 4 ವರ್ಷಗಳಲ್ಲಿ ದೇಶದ ಕೃಷಿ ಪ್ರದೇಶದ 50 ಲಕ್ಷ ಮರಗಳು ಕಣ್ಮರೆ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

2-sirsi

Sirsi: ತಂಜಾವೂರಿನಲ್ಲಿ ನಡೆಯುವ ಭಾರತದ ರಾಜವಂಶಸ್ಥರ ಬೈಟಕ್ ಗೆ ಸೋಂದಾ

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.