ಎಲ್‌ಎಸಿ ಕಣ್ಗಾವಲಿಗೆ ಸುಧಾರಿತ ಡ್ರೋನ್‌ ಅಸ್ತ್ರ; ಬೆಂಗಳೂರಿನ ಎಚ್‌ಎಎಲ್‌ನಲ್ಲಿ ಅಭಿವೃದ್ಧಿ

ಕೃತಕ ಬುದ್ಧಿಮತ್ತೆ ಚಾಲಿತ 60 ಡ್ರೋನ್‌ ತಯಾರಿಕೆ ಗುರಿ

Team Udayavani, Aug 8, 2022, 7:15 AM IST

ಎಲ್‌ಎಸಿ ಕಣ್ಗಾವಲಿಗೆ ಸುಧಾರಿತ ಡ್ರೋನ್‌ ಅಸ್ತ್ರ; ಬೆಂಗಳೂರಿನ ಎಚ್‌ಎಎಲ್‌ನಲ್ಲಿ ಅಭಿವೃದ್ಧಿ

ನವದೆಹಲಿ: ವಾಸ್ತವಿಕ ಗಡಿ ನಿಯಂತ್ರಣ ರೇಖೆ(ಎಲ್‌ಎಸಿ) ಸೇರಿದಂತೆ ಪರ್ವತಪ್ರದೇಶಗಳಲ್ಲಿ ಶತ್ರು ರಾಷ್ಟ್ರಗಳ ಚಲನವಲನಗಳ ಮೇಲೆ ನಿಗಾ ಇಡುವ “ಅಸ್ತ್ರ’ವೊಂದು ನಮ್ಮ ರಾಜ್ಯದಲ್ಲೇ ತಯಾರಾಗುತ್ತಿದೆ!

ಹೌದು, ಕೃತಕ ಬುದ್ಧಿಮತ್ತೆ ಚಾಲಿತ, ಸುಧಾರಿತ ಮತ್ತು ದೀರ್ಘಾವಧಿಗೆ ಸಂಚರಿಸಬಲ್ಲ, ವ್ಯೂಹಾತ್ಮಕ ಕಾರ್ಯಯೋಜನೆಗಳಿಗೆ ತಕ್ಕುದಾದ ಡ್ರೋನ್‌ಗಳನ್ನು ಬೆಂಗಳೂರಿನ ಸರ್ಕಾರಿ ಸ್ವಾಮ್ಯದ ಹಿಂದುಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌(ಎಚ್‌ಎಎಲ್‌) ಅಭಿವೃದ್ಧಿಪಡಿಸುತ್ತಿದೆ.

ಎಲ್‌ಎಸಿಯಲ್ಲಿ ನೆರೆರಾಷ್ಟ್ರ ಚೀನದ ಚಟುವಟಿಕೆಗಳು ಹೆಚ್ಚುತ್ತಿರುವಂಥ ಈ ಹೊತ್ತಲ್ಲಿ ಭಾರತದ ಸಶಸ್ತ್ರಪಡೆಗಳಿಗೆ ಈ ಡ್ರೋನ್‌ಗಳು ವರವಾಗಿ ಪರಿಣಮಿಸಲಿವೆ ಎಂದು ಮೂಲಗಳು ಹೇಳಿವೆ.

ವೈಶಿಷ್ಟ್ಯವೇನು?:
ಕ್ಷಿಪಣಿಗಳು, ಸೆನ್ಸರ್‌ಗಳು ಸೇರಿದಂತೆ 40 ಕೆ.ಜಿ. ತೂಕದ ಲೋಡ್‌ ಹೊರುವ ಸಾಮರ್ಥ್ಯ ಈ ರೋಟರಿ-ವಿಂಗ್‌ ಡ್ರೋನ್‌ಗಿದೆ. ಕೃತಕ ಬುದ್ಧಿಮತ್ತೆ ಚಾಲಿತ ಆಪರೇಟಿಂಗ್‌ ಸಿಸ್ಟಂ ಈ ಡ್ರೋನ್‌ಗಳಲ್ಲಿ ಇರಲಿವೆ. ಮುಂದಿನ ವರ್ಷದ ಮಧ್ಯಭಾಗದಲ್ಲಿ ಈ ಡ್ರೋನ್‌ನ ಪ್ರಾಯೋಗಿಕ ಹಾರಾಟ ನಡೆಸಲು ಎಚ್‌ಎಎಲ್‌ ನಿರ್ಧರಿಸಿದ್ದು, ಇಂತಹ 60 ಡ್ರೋನ್‌ಗಳನ್ನು ಅಭಿವೃದ್ಧಿಪಡಿಸುವ ಗುರಿ ಹಾಕಿಕೊಳ್ಳಲಾಗಿದೆ. ಕ್ಷಿಪಣಿಗಳು, ಸೆನ್ಸರ್‌ಗಳು ಮತ್ತಿತರ ಅಗತ್ಯ ವಸ್ತುಗಳ ಸಾಗಣೆ ಸೇರಿದಂತೆ ಹಲವು ಉದ್ದೇಶಗಳಿಗಾಗಿ ಸೇನೆಯು ಈ ಡ್ರೋನ್‌ಗಳನ್ನು ಬಳಸಬಹುದಾಗಿದೆ.

ಪೂರ್ವ ಲಡಾಖ್‌ನಲ್ಲಿ ಚೀನದೊಂದಿಗೆ ಸಂಘರ್ಷ ಹಾಗೂ ಕಳೆದ ವರ್ಷ ಜಮ್ಮು ಏರ್‌ಬೇಸ್‌ನಲ್ಲಿ ನಡೆದ ಡ್ರೋನ್‌ ದಾಳಿಯ ಬಳಿಕ ಭಾರತದ ಸೇನಾ ಪಡೆಗಳು ಶಸ್ತ್ರಸಜ್ಜಿತ ಡ್ರೋನ್‌ಗಳ ಖರೀದಿಯತ್ತ ಹೆಚ್ಚು ಆಸಕ್ತಿ ವಹಿಸಿವೆ. ಅದರ ಭಾಗವಾಗಿಯೇ ಈಗ ಎಚ್‌ಎಎಲ್‌ ಈ ಡ್ರೋನ್‌ಗಳ ಅಭಿವೃದ್ಧಿಯಲ್ಲಿ ತೊಡಗಿದೆ. ಇದಲ್ಲದೇ, ಅಮೆರಿಕದಿಂದ ಸುಮಾರು 3 ಶತಕೋಟಿ ಡಾಲರ್‌ ವೆಚ್ಚದಲ್ಲಿ ಮಲ್ಟಿ-ಮಿಷನ್‌ ಪ್ರಿಡೇಟರ್‌ ಡ್ರೋನ್‌ಗಳನ್ನು ಖರೀದಿಸಲೂ ಭಾರತ ಚಿಂತನೆ ನಡೆಸಿದೆ. 2020ರ ನವೆಂಬರ್‌ನಲ್ಲಿ ಭಾರತೀಯ ನೌಕಾಪಡೆಯು ಅಮೆರಿಕದಿಂದ ಎರಡು ಎಂಕ್ಯೂ-9ಬಿ ಸೀ ಗಾರ್ಡಿಯನ್‌ ಡ್ರೋನ್‌ಗಳನ್ನು ಖರೀದಿಸಿದೆ.

ಸೇನೆಗೆ ಆಗುವ ಅನುಕೂಲತೆಗಳು
– ಪರ್ವತ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ಇಡಲು
– ಅವಶ್ಯಕ ಸಾಮಗ್ರಿಗಳ ಸಾಗಾಟ ಮಾಡಲು
– ಸೆನ್ಸರ್‌ಗಳು, ಕ್ಷಿಪಣಿಗಳು, ಇತರೆ ಶಸ್ತ್ರಾಸ್ತ್ರ ಸೇರಿ ಸೇನಾ ಸಂಬಂಧಿ ವ್ಯವಸ್ಥೆಗಳ ಹೊತ್ತೂಯ್ಯಲು

ಚೊಚ್ಚಲ ಪರೀಕ್ಷಾರ್ಥ ಹಾರಾಟ ಯಾವಾಗ?- 2023ರಲ್ಲಿ
ಎಷ್ಟು ಲೋಡ್‌ ಹೊರಬಲ್ಲದು?- 40 ಕೆ.ಜಿ.
ಮೊದಲ ಹಂತದಲ್ಲಿ ಒಟ್ಟು ಎಷ್ಟು ಡ್ರೋನ್‌ಗಳ ಅಭಿವೃದ್ಧಿ? – 60

ಹೆರಾನ್‌ ತಯಾರಿಕೆಯ ಗುರಿ
ಇದಷ್ಟೇ ಅಲ್ಲದೆ, ಇಸ್ರೇಲಿ ಹೆರಾನ್‌ ಟಿಪಿ ಡ್ರೋನ್‌ಗಳನ್ನು ತಯಾರಿಸುವ ಮತ್ತೂಂದು ಮಹತ್ವಾಕಾಂಕ್ಷಿ ಯೋಜನೆಯನ್ನೂ ಎಚ್‌ಎಎಲ್‌ ಹಾಕಿಕೊಂಡಿದೆ. ಹೆರಾನ್‌ ಡ್ರೋನ್‌ಗಳು 35 ಸಾವಿರ ಅಡಿ ಎತ್ತರದಲ್ಲಿ ಸುಮಾರು 45 ಗಂಟೆಗಳ ಕಾಲ ಸಂಚರಿಸುವ ಸಾಮರ್ಥ್ಯ ಹೊಂದಿರುತ್ತವೆ. ಅವುಗಳಲ್ಲಿ ಸ್ವಯಂಚಾಲಿತ ಟ್ಯಾಕ್ಸಿ ಟೇಕಾಫ್ ಮತ್ತು ಲ್ಯಾಂಡಿಂಗ್‌ ವ್ಯವಸ್ಥೆ, ಉಪಗ್ರಹ ಸಂವಹನ ವ್ಯವಸ್ಥೆಯನ್ನೂ ಅಳವಡಿಸಿರಲಾಗಿರುತ್ತದೆ.

ಟಾಪ್ ನ್ಯೂಸ್

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.