ಯುವ ಸೇನಾಧಿಕಾರಿ ಹತ್ಯೆಯಲ್ಲಿ ಹಿಜ್ಬುಲ್ ಕೈವಾಡ
Team Udayavani, May 12, 2017, 1:36 AM IST
ಶ್ರೀನಗರ: ಕಾಶ್ಮೀರದ ಯುವ ಸೇನಾಧಿಕಾರಿ, ಲೆ| ಉಮರ್ ಫಯಾಜ್ ಅವರ ಹತ್ಯೆಯ ಹಿಂದೆ ಪಾಕಿಸ್ಥಾನ ಮೂಲದ ಉಗ್ರ ಸಂಘಟನೆ ಹಿಜ್ಬುಲ್ ಮುಜಾಹಿದೀನ್ ಅಥವಾ ಲಷ್ಕರ್ ಪಾತ್ರದ ಬಗ್ಗೆ ಪ್ರಬಲ ಶಂಕೆ ವ್ಯಕ್ತವಾಗಿದೆ. ಜತೆಗೆ ಸೇನಾಧಿಕಾರಿ ಅವರ ಹತ್ಯೆಗೆ ಉಗ್ರರು ಭದ್ರತಾ ಪಡೆಗಳ ಕೈಯಿಂದ ಅಪಹರಿಸಿದ್ದ ಇನ್ಸಾಸ್ ಮಾದರಿ ರೈಫಲನ್ನು ಬಳಸಿದ್ದಾಗಿ ಹೇಳಲಾಗಿದೆ. ಈ ಬಗ್ಗೆ ವಿಸ್ತೃತ ಮಾಹಿತಿಗೆ ಶವಪರೀಕ್ಷೆ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.
ಉಮರ್ ಅವರನ್ನು ಹತ್ಯೆಗೈದ ಸ್ಥಳದಲ್ಲಿ ಇನ್ಸಾಸ್ ಮಾದರಿಯ ರೈಫಲಿನ ಎರಡು ಖಾಲಿ ಕಾಟ್ರಿಡ್ಜ್ಗಳು ಪತ್ತೆಯಾಗಿವೆ. ಇತ್ತೀಚೆಗೆ ದಕ್ಷಿಣ ಕಾಶ್ಮೀರದಲ್ಲಿ ವರದಿಯಾದ ಎರಡು ಪ್ರಕರಣಗಳಲ್ಲಿ ಭದ್ರತಾ ಪಡೆಗಳಿಂದ ಉಗ್ರರು ಶಸ್ತ್ರಾಸ್ತ್ರಗಳನ್ನು ಅಪಹರಿಸಿದ್ದಾರೆ. ಇದರಲ್ಲಿ ಲಷ್ಕರ್ ಮತ್ತು ಹಿಜ್ಬುಲ್ ಉಗ್ರರು ಭಾಗಿಯಾಗಿದ್ದರು. ಅಲ್ಲಿ ಅಪಹರಿಸಿದ್ದ ಶಸ್ತ್ರವನ್ನೇ ಲೆ| ಉಮರ್ ಅವರ ಹತ್ಯೆಗೆ ಬಳಸಿದ ಬಗ್ಗೆ ಪ್ರಬಲ ಶಂಕೆ ಇದೆ. ಆದರೆ ಉಗ್ರರು ಲೆ| ಉಮರ್ ಅವರಿಗೆ ಯಾವುದೇ ದೈಹಿಕ ಹಿಂಸೆ ನೀಡಿದ ಬಗ್ಗೆ ದೇಹದಲ್ಲಿ ಕಲೆಗಳು ಇಲ್ಲ ಎಂದು ಪೊಲೀಸರು ಹೇಳಿದ್ದಾರೆ.
ರಜೌರಿಯಲ್ಲಿ ಶಾಲೆ ಬಂದ್: ಇತ್ತ ರಜೌರಿ ಪ್ರದೇಶದ ನಿಯಂತ್ರಣ ರೇಖೆಯಲ್ಲಿ ಪಾಕ್ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ. ದಾಳಿಯಲ್ಲಿ ಓರ್ವ ಮಹಿಳೆ ಸಾವಿಗೀಡಾಗಿದ್ದಾರೆ. ಈ ಮಧ್ಯೆ, ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಮಹ್ರಿಷಿ ಅವರು ಜಮ್ಮು ಕಾಶ್ಮೀರ ರಾಜ್ಯಪಾಲ ಎನ್.ಎನ್.ವೋಹ್ರಾ ಮತ್ತು ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಪಾಕ್ ಪ್ರತಿಭಟನೆ: ಭಾರತ ಕದನ ವಿರಾಮ ಉಲ್ಲಂಘಿಸುತ್ತಿದೆ ಎಂದು ಪಾಕ್ ಭಾರತದ ಉಪಕಮಿಷನರಿಗೆ ನೋಟಿಸ್ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ